ಮೈಸೂರು : ಕಾಂಗ್ರೆಸ್ ಶಾಸಕರನ್ನೇ ಖರೀದಿ ಮಾಡಲು 50 ಕೋಟಿ ಹಣ, ಒಂದು ಫ್ಲಾಟ್ ಹಾಗೂ ಫಾರ್ಚುನರ್ ಕಾರು ನೀಡಲಾಗುತ್ತದೆ ಎಂದು ಬಿಜೆಪಿ ಎಂಎಲ್ಸಿ ಛಲವಾದಿ ನಾರಾಯಣಸ್ವಾಮಿ ಗಂಭೀರವಾಗಿ ಆರೋಪಿಸಿದ್ದರು . ಇವರ ಒಂದು ಈ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ವಿ.ಸೋಮಣ್ಣ ಸಹ ಕಳೆದ ಒಂದು ವರ್ಷದಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಸ್ಪೋಟಕವಾದ ಆರೋಪ ಮಾಡಿದರು.
ಮೈಸೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ವಿ.ಸೋಮಣ್ಣ ಕರ್ನಾಟಕದ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ಶುರುವಾಗಿದೆ. ಕಳೆದು 1 ವರ್ಷದಿಂದಲೇ ಕುದುರೆ ವ್ಯಾಪಾರ ಶುರುವಾಗಿದೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಧಿಕಾರದ ಹುಚ್ಚು ಹಿಡಿದಿದೆ ಇದೊಂದು ಲಫಂಗ ಸರ್ಕಾರ 2013ರಲ್ಲಿ ಇದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಕಾಣುತ್ತಿಲ್ಲ.
ಇವಾಗ ಇರೋದು ಭ್ರಷ್ಟಾಚಾರದ ಸಿದ್ದರಾಮಯ್ಯ. ಕಾಂಗ್ರೆಸ್ನವರು ನವೆಂಬರ್ ಕ್ರಾಂತಿ ಮತ್ತು ಬ್ರಾಂತಿಯಲ್ಲಿ ಮುಳುಗಿದ್ದಾರೆ. ಇವರಿಗೆ ಅಧಿಕಾರದ ಮದ ಏರಿದೆ ಒಂದು ದಿನ ಈ ಒಂದು ಮದ ಇಳಿಯಲೇಬೇಕು. ರಾಜ್ಯದ ಜನರಿಗೆ ಒಳ್ಳೆಯದು ಮಾಡಬೇಕು ಎಂಬು ಉದ್ದೇಶ ಇಲ್ಲ ಕಾಂಗ್ರೆಸ್ ಒಡೆದು ಹೋಗಿದೆ ಇದೊಂದು ದಿಕ್ಕು ಇಲ್ಲದ ಸರ್ಕಾರ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ವಿಶ್ವಮಣ್ಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.








