ಮಂಡ್ಯ: ಜಲ ಶಕ್ತಿ ಅಭಿಯಾನದ ಅಂಗವಾಗಿ “ಜಲ ಸಂಚಾಯಿ ಜನ ಭಾಗಿದಾರಿ ( ಜೆಎಸ್ ಜೆ ಬಿ) ” ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ನ. 18 ರಂದು ನಡೆದ ‘ರಾಷ್ಟ್ರೀಯ ಜಲ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್.ಪಾಟೀಲ ಮಂಡ್ಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವ ಹಾಗೂ ನೀರಿನ ಸಮಸ್ಯೆ ನಿವಾರಿಸಲು ಕೈಗೊಂಡ ಜಲಶಕ್ತಿ ಅಭಿಯಾನದ ಚಟುವಟಿಕೆಗಳನ್ನು ಯಶಸ್ವಿಯಾಗಿ ಹಾಗೂ ಪರಿಣಾಮಕಾರಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ಪ್ರಶಸ್ತಿಯ ಜೊತೆಗೆ 25 ಲಕ್ಷ ರೂ ನಗದು ಬಹುಮಾನ ನೀಡಲಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ಇತರೆ ಯೋಜನೆಗಳಡಿ ಜಿಲ್ಲೆಯು 2024ರ ಏಪ್ರಿಲ್ 1 ರಿಂದ 2025 ರ ಮಾರ್ಚ್ 31 ರ ವರೆಗೆ 7,192 ಜಲಸಂರಕ್ಷಣೆ ಕಾಮಗಾರಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಜಲಸಂಚಯ ಫೋರ್ಟಲ್ ನಲ್ಲಿ ದಾಖಲಿಸಲಾಗಿತ್ತು. ಇವುಗಳಲ್ಲಿ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳಾದ ಬದು ನಿರ್ಮಾಣ, ಬೋರ್ ವೆಲ್ ರೀಚಾರ್ಜಾ ಪಿಟ್, ಸೋಕ್ ಪಿಟ್, ಸಮಗ್ರ ಕೆರೆ ಅಭಿವೃದ್ಧಿ, ಕಟ್ಟೆಗಳ ಅಭಿವೃಧ್ಧಿ, ಕಲ್ಯಾಣಿಗಳ ಜಿರ್ಣೋದ್ಧಾರ, ಮಳೆ ನೀರು ಕೊಯ್ಲು, ತೆರೆದ ಬಾವಿ, ನಾಲಾ ಹೊಳೆತ್ತುವುದು, ಚೆಕ್ ಡ್ಯಾಂ ಕಾಮಗಾರಿಗಳನ್ನು ಅನುಷ್ಟಾನ ಮಾಡಲಾಗಿದೆ.
ಅಭಿಯಾನದ ಉದ್ದೇಶ “ನೀರಿಗಾಗಿ ಒಂದಾಗಿ, ಪ್ರತಿ ಹನಿ ನೀರನ್ನು ಸಂರಕ್ಷಿಸಿ“ ಎಂಬ ಧ್ಯೇಯದೊಂದಿಗೆ ಜಲಸಂಚಯ ಜನಭಾಗಿದಾರಿ 1.0 ಅಭಿಯಾನವು ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು, ಮಳೆ ನೀರನ್ನು ಸಂಹಗ್ರಹಿಸುವುದು, ಜಲ ಸಂರಕ್ಷಣೆಯ ಸಂಸ್ಕೃತಿಯನ್ನು ಬೆಳೆಸುವುದು ಮತ್ತು ನೀರಿನ ಕೊರತೆ ನಿವಾರಿಸುವುದು, ಹರಿಯುವ ನೀರನ್ನುತಡೆಯುವುದು, ತಡೆದ ನೀರನ್ನು ಇಂಗಿಸುವುದು, ಜಲ ಸಂಪನ್ಮೂಲಗಳ ಸಂರಕ್ಷಣೆ, ಮರುಸ್ಥಾಪನೆ, ಮರುಬಳಕೆಗೆ ಉತ್ತೇಜಿಸುವುದು, ಅಮೃತ ಸರೋವರಗಳ ರಚನೆ ಮತ್ತು ನವೀಕರಣದ ಮೂಲಕ ನೀರಿನ ಸಂಗ್ರಹಣೆ ಹೆಚ್ಚಿಸುವುದು.
ಮೈಸೂರು ವಿಭಾಗದ 8 ಜಿಲ್ಲೆಗಳ ಪೈಕಿ ಪ್ರಥಮ ಸ್ಥಾನ. ಜಲ ಸಂಚಾಯಿ ಜನ ಭಾಗಿದಾರಿ ಅಭಿಯಾನದಡಿ ರಾಜ್ಯಗಳನ್ನು 5 ವಲಯಗಳಾಗಿ ವಿಂಗಡಿಸಲಾಗಿತ್ತು. 3ನೇ ವಲಯದಲ್ಲಿ ಆಂದ್ರಪ್ರದೇಶ, ತೆಲಾಂಗಣ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿವೆ. ಈ ಪೈಕಿ ಕರ್ನಾಟಕ ರಾಜ್ಯದ 7 ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ ಘೋಷಿಸಲಾಗಿತ್ತು. ಮೈಸೂರು ವಿಭಾಗದ ಜಿಲ್ಲೆಗಳ ಪೈಕಿ ಮಂಡ್ಯ ಜಿಲ್ಲೆಯು ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ.
ಜಲಶಕ್ತಿ ಅಭಿಯಾನದ ಅನುಷ್ಠಾನದಲ್ಲಿ ಜಿಲ್ಲೆಗೆ ಪ್ರಶಸ್ತಿ ದೊರಕಿರುವುದು ಸಂತಸದ ವಿಷಯ. ಈ ಯಶಸ್ಸಿಗೆ ಕಾರಣರಾದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನಷ್ಟು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸುವಲ್ಲಿ ಈ ಪ್ರಶಸ್ತಿ ಮಹತ್ತರ ಪಾತ್ರ ವಹಿಸಲಿದೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕೇಂದ್ರ ಜಲ ಶಕ್ತಿ ಇಲಾಖೆಯ ರಾಜ್ಯ ಸಚಿವರಾದ ವಿ. ಸೋಮಣ್ಣ ಹಾಗೂ ರಾಜ್ ಭೂಷಣ್ ಚೌಧರಿ ರವರು ಪಾಲ್ಗೊಂಡಿದ್ದರು.
ಈ ಎರಡು ಎಲೆಗಳು ಮನೆಯಲ್ಲಿದ್ದರೆ ಸಾಕು, ಎಲ್ಲ ದೋಷಗಳು, ದುಷ್ಟಶಕ್ತಿಗಳು ಓಡಿ ಹೋಗುತ್ತವೆ
Health Tips: ಫ್ರಿಡ್ಜ್ನಲ್ಲಿಟ್ಟ ಹಿಟ್ಟನ್ನು ಬಳಸುವುದು ಸುರಕ್ಷಿತವೇ ?








