ಬೆಂಗಳೂರು: ಡಿಸೆಂಬರ್.8ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಹೀಗೆ ಅಧಿವೇಶನದಲ್ಲಿ ಭಾಗಿಯಾಗುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರಿಗೆ ಸರ್ಕಾರ ಸುವರ್ಣಸೌಧದಲ್ಲಿನ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ. ಅದರಲ್ಲಿ ಬೆಳಗಾವಿಯ ಸುವರ್ಣಸೌಧ ಕಟ್ಟಡದಲ್ಲಿ ದಿನಾಂಕ 08-12-2025ರಿಂದ ವಿಧಾನಮಂಡಲದ ಅಧಿವೇಶ ನಡೆಯಲಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.
ಹೀಗಿದೆ ಬೆಳಗಾವಿ ಸುವರ್ಣಸೌಧದ ಸಿಎಂ, ಡಿಸಿಎಂ, ಸಚಿವರ ಕೊಠಡಿಗಳ ಸಂಖ್ಯೆ
- ಸಿಎಂ ಸಿದ್ಧರಾಮಯ್ಯ – 346, 347
- ಡಿಸಿಎಂ ಡಿ.ಕೆ ಶಿವಕುಮಾರ್ – 306, 306ಎ
- ಗೃಹ ಸಚಿವ ಡಾ.ಜಿ ಪರಮೇಶ್ವರ್ – 302, 302ಎ
- ಕಾನೂನು ಸಚಿವ ಹೆಚ್.ಕೆ ಪಾಟೀಲ್ – 303, 303ಎ
- ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – 320, 320ಎ
- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – 321, 321ಎ
- ಬೃಹತ್ ಮತ್ತು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ – 324, 324ಎ
- ಇಂಧನ ಸಚಿವ ಕೆಜೆ ಜಾರ್ಜ್ – 325, 325ಎ
- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ – 328, 328ಎ
- ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ – 329, 329ಎ
- ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ – 330, 330ಎ
- ಕಂದಾಯ ಸಚಿವ ಕೃಷ್ಣ ಬೈರೇಗೌಡ – 201, 201ಎ
- ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ – 202, 202ಎ
- ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ – 2023, 203ಎ
- ವಸತಿ ಸಚಿವ ಜಮೀರ್ ಅಹ್ಮದ್ ಖಾನ್ – 206, 206ಎ
- ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪೂರ – 219, 219ಎ
- ಅರಣ್ಯ ಸಚಿವ ಈಶ್ವರ್ ಖಂಡ್ರೆ – 220, 220ಎ
- ಕೃಷಿ ಸಚಿವ ಚಲುವರಾಯಸ್ವಾಮಿ – 223, 223ಎ
- ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್ ಎಸ್ ಮಲ್ಲಿಕಾರ್ಜುನ – 224, 224ಎ
- ಪೌರಾಡಳಿತ ಸಚಿವ ರಹೀಂ ಖಾನ್ – 227, 227ಎ
- ಕಾರ್ಮಿಕ ಸಚಿವ ಸಂತೋಷ್ ಲಾಡ್ – 228, 228ಎ
- ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – 229, 229ಎ
- ಅಬಕಾರಿ ಸಚಿವ ಆರ್.ಬಿ ತಿಮ್ಮಾಪೂರ – 235, 235ಎ
- ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ – 01, 01ಎ
- ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಡರಗಿ – 02, 02ಎ
- ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ – 03, 03ಎ
- ನಗರಾಭಿವೃದ್ಧಿ ಸಚಿವ ಸುರೇಶ್ ಬಿಎಸ್ – 10, 10ಎ
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – 14, 14ಎ
- ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ – 9, 9ಎ
- ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ – 27, 27ಎ
- ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ – 28, 28ಎ
- ಸಣ್ಣ ನೀರಾವರಿ ಸಚಿವ ಎನ್ ಎಸ್ ಭೋಸರಾಜು – 29, 29ಎ
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ 1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಿಸಿದ ಸಿಎಂ ಸಿದ್ಧರಾಮಯ್ಯ
ರಾಜ್ಯದಲ್ಲಿ ‘ಸಿಎಂ ಬದಲಾವಣೆ’ ವಿಚಾರ: ಈ ಗುಟ್ಟು ರಿವೀಲ್ ಮಾಡಿದ ‘ಸುಪ್ರೀಂ ಕೋರ್ಟ್ ವಕೀಲ ಸಂಕೇತ್ ಏಣಗಿ’








