ಬೆಂಗಳೂರು : ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಒಂದು ಕೊಲೆಯ ಪ್ರಕರಣ ಸಂಬಂಧ ಕಡ್ಡಾಯ ಜಾಮೀನು ಕೋರಿ ನಾಲ್ವರು ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ.
ಪ್ರಕರಣ ಸಂಬಂಧ ಜಾಮೀನು ಕೋರಿ ಆರೋಪಿಗಳಾದ ಕಿರಣ್, ವಿಮಲ್ ರಾಜ್, ಪ್ರದೀಪ್ ಮತ್ತು ಆರ್.ಮದನ್ ಸಲ್ಲಿಸಿದ್ದ ಪ್ರತ್ಯೇಕ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರ ಪೀಠ ಶುಕ್ರವಾರ ಪ್ರಕಟಿಸಿದೆ. ವಿಸ್ತೃತ ಆದೇಶದ ಪ್ರತಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.








