Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ರಾಜ್ಯದಲ್ಲಿ ಅರಣ್ಯ ಭೂಮಿ ಕಬಳಿಸಿದರೆ `ಕ್ರಿಮಿನಲ್ ಕೇಸ್’ ದಾಖಲು : ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

01/12/2025 7:34 AM

‘ಆಪರೇಷನ್ ಸಿಂಧೂರ್ ಇನ್ನೂ ನಡೆಯುತ್ತಿದೆ’ : ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ | Operation sindoor

01/12/2025 7:30 AM

ಇಂದಿನಿಂದ ಹಣಕಾಸು ನಿಯಮ ಬದಲಾವಣೆ: ಮಧ್ಯಮ ವರ್ಗದ ಮೇಲೆ ನೇರ ಪರಿಣಾಮ.!

01/12/2025 7:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ‘ಶಿಕ್ಷಣ ಸಂಸ್ಥೆ’ಗಳಲ್ಲಿ ಬೀದಿ ನಾಯಿಗಳ ಉಪಟಳ ತಡೆಗಟ್ಟಲು ಈ ಕ್ರಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶ
KARNATAKA

BIG NEWS : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ‘ಶಿಕ್ಷಣ ಸಂಸ್ಥೆ’ಗಳಲ್ಲಿ ಬೀದಿ ನಾಯಿಗಳ ಉಪಟಳ ತಡೆಗಟ್ಟಲು ಈ ಕ್ರಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶ

By kannadanewsnow5701/12/2025 7:24 AM

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮಾನ್ಯ ಸರ್ವೋಚ್ಛ ನ್ಯಾಯಾಲಯವು ಸ್ವಯಂ ಪ್ರೇರಿತ ರಿಟ್ ಅರ್ಜಿ ಸಂಖ್ಯೆ: 5/2025ರ ದಿನಾಂಕ: 07.11.2025ರ ತೀರ್ಪಿನಲ್ಲಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟಲು ನಿರ್ದೇಶನ ನೀಡಿರುತ್ತದೆ. ಈ ಸಂಬಂಧ ಉಲ್ಲೇಖಿತ (2) ರ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಟೆಗಟ್ಟುವ ನಿಟ್ಟಿನಲ್ಲಿ ಅನುಸರಿಬೇಕಾದ ಕ್ರಮಗಳ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ.

ಉಲ್ಲೇಖಿತ ಆದೇಶಗಳಂತೆ, ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಬೀದಿ ನಾಯಿಗಳ ಉಪಟಳವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕೆಳಕಂಡಂತೆ ಕ್ರಮವಹಿಸಲು ತಿಳಿಸಿದೆ.

1. ಎಲ್ಲಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿನ ನಾಯಿಗಳ ಸಂಖ್ಯೆಯನ್ನು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ತಕ್ಷಣ ನೀಡುವುದು.

2. ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಗುರುತಿಸಿದ ನಾಯಿಗಳನ್ನು ಸ್ಥಳೀಯ ಸಂಸ್ಥೆಗಳ ಸಹಕಾರದಿಂದ ನಾಯಿ ಆಶ್ರಯ ತಾಣಗಳಿಗೆ ಸಾಗಿಸಲು ಸಹಕಾರ ನೀಡುವುದು.

3. ಒಮ್ಮೆ ನಾಯಿಗಳನ್ನು ಶಿಕ್ಷಣ ಸಂಸ್ಥೆಯ ಆವರಣದಿಂದ ಸ್ಥಳಾಂತರಿಸಿದ ನಂತರ ಪುನ: ಬೀದಿನಾಯಿಗಳು ಶಾಲಾ ಆವರಣದೊಳಗೆ ಪ್ರವೇಶಿಸದಂತೆ ತಡೆಯಲು ಸಂಸ್ಥೆಯ ಆವರಣಕ್ಕೆ ಕಾಂಪೌಂಡ್ /ಬೇಲಿಯನ್ನು ನಿರ್ಮಿಸುವುದು.

4. ಮೇಲ್ಕಂಡ ಎಲ್ಲಾ ಚಟುವಟಿಕೆಗಳ ಮೇಲುಸ್ತುವಾರಿ ಮಾಡಲು ಹಾಗೂ ಸ್ಥಳಿಯ ಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸಲು ಆಯಾ ಶಾಲೆಯ ಮುಖ್ಯಶಿಕ್ಷಕರು/ ಪ್ರಾಂಶುಪಾಲರು/ಹಿರಿಯ ಸಹಶಿಕ್ಷಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸುವುದು.

ಆಯಾ ತಾಲ್ಲೂಕಿನ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಉಪನಿರ್ದೇಶಕರು(ಆಡಳಿತ ಮತ್ತು ಪದವಿ ಪೂರ್ವ)) ಇವರು ತಮ್ಮ ವ್ಯಾಪ್ತಿಯ ಶಾಲಾ/ಕಾಲೇಜುಗಳ ಮುಖ್ಯಸ್ಥರು ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಶಾಲಾ-ಕಾಲೇಜುಗಳ ಆವರಣದಲ್ಲಿ ಬೀದಿ ನಾಯಿಗಳ ಉಪಟಳ ತಡೆಗಟ್ಟಲು ಸೂಕ್ತ ಕ್ರಮವಹಿಸಿರುವುದನ್ನು ಖಾತ್ರಿಪಡಿಸಿಕೊಳ್ಳುವುದು. ತಾಲ್ಲೂಕು ಮತ್ತು ಜಿಲಾ ವ್ಯಾಪ್ತಿಯ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಶಾಲಾ-ಕಾಲೇಜುಗಳ ಮುಖ್ಯಸ್ಥರು ಸಲ್ಲಿಸಿರುವ ಮಾಹಿತಿಯಂತೆ ಕ್ರಮವಾಗುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು. ಮಾನ್ಯ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳನ್ನು ಶಾಲಾ-ಕಾಲೇಜುಗಳಲ್ಲಿ ಅನುಷ್ಠಾನಗೊಳಿಸುತ್ತಿರುವುದನ್ನು ಪ್ರತಿ 15 ದಿನಗಳಿಗೊಮ್ಮೆ ಶಾಲಾ-ಕಾಲೇಜುಗಳ ಮುಖ್ಯಸ್ಥರ ಸಭೆ ನಡೆಸಿ ಅನುಪಾಲನೆ ಮಾಡಲು ಸೂಚಿಸಿದೆ.

ಆಯುಕ್ತರು, ಅಪರ ಆಯುಕ್ತರು (ಧಾರವಾಡ ಮತ್ತು ಕಲಬುರಗಿ), ಶಾಲಾ ಶಿಕ್ಷಣ ಇಲಾಖೆ, ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಹಾಗೂ ನಿರ್ದೇಶಕರು (ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ) ಇವರು ಪ್ರತಿ 15 ದಿನಗಳಿಗೊಮ್ಮೆ ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳನ್ನು ಪಾಲನೆ ಮಾಡುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಲು ಸೂಚಿಸಿದೆ.

ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಬೀದಿನಾಯಿಗಳ ಉಪಟಳವನ್ನು ತಡೆಗಟ್ಟಲು ಮೇಲೆ ವಿವರಿಸಿದಂತೆ ಮಕ್ಕಳ ಸುರಕ್ಷತೆಗೆ ಸೂಕ್ತ ಕ್ರಮ ಕೈಗೊಂಡು ಶಾಲಾ/ಕಾಲೇಜು ಆವರಣದಲ್ಲಿ ಬೀದಿನಾಯಿಗಳಿಂದ ಯಾವುದೇ ಅವಘಡ ಸಂಭವಿಸದಂತೆ ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳನ್ನು ಅನುಷ್ಠಾನಗೊಳಿಸಲು ಕಟ್ಟುನಿಟ್ಟಾಗಿ ಕ್ರಮವಹಿಸಲು ಸೂಚಿಸಿದೆ.

BIG NEWS: Government orders mandatory compliance with these measures to prevent stray dog ​​abuse in all government and private ‘educational institutions’ in the state
Share. Facebook Twitter LinkedIn WhatsApp Email

Related Posts

ALERT : ರಾಜ್ಯದಲ್ಲಿ ಅರಣ್ಯ ಭೂಮಿ ಕಬಳಿಸಿದರೆ `ಕ್ರಿಮಿನಲ್ ಕೇಸ್’ ದಾಖಲು : ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

01/12/2025 7:34 AM1 Min Read

BIG NEWS : ಕಲ್ಯಾಣ ಕರ್ನಾಟಕದ 200 ಶಾಲೆಗಳನ್ನ ‘KPS’ ಶಾಲೆಗಳಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ.!

01/12/2025 7:02 AM3 Mins Read

ರಾಜ್ಯದ ಜನಸಾಮಾನ್ಯರಿಗೆ ಬಿಗ್ ಶಾಕ್ : 100 ರೂ. ಗಡಿ ಸಮೀಪ `ಟೊಮೆಟೋ’ ದರ.!

01/12/2025 6:57 AM1 Min Read
Recent News

ALERT : ರಾಜ್ಯದಲ್ಲಿ ಅರಣ್ಯ ಭೂಮಿ ಕಬಳಿಸಿದರೆ `ಕ್ರಿಮಿನಲ್ ಕೇಸ್’ ದಾಖಲು : ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

01/12/2025 7:34 AM

‘ಆಪರೇಷನ್ ಸಿಂಧೂರ್ ಇನ್ನೂ ನಡೆಯುತ್ತಿದೆ’ : ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ | Operation sindoor

01/12/2025 7:30 AM

ಇಂದಿನಿಂದ ಹಣಕಾಸು ನಿಯಮ ಬದಲಾವಣೆ: ಮಧ್ಯಮ ವರ್ಗದ ಮೇಲೆ ನೇರ ಪರಿಣಾಮ.!

01/12/2025 7:24 AM

BIG NEWS : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ‘ಶಿಕ್ಷಣ ಸಂಸ್ಥೆ’ಗಳಲ್ಲಿ ಬೀದಿ ನಾಯಿಗಳ ಉಪಟಳ ತಡೆಗಟ್ಟಲು ಈ ಕ್ರಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶ

01/12/2025 7:24 AM
State News
KARNATAKA

ALERT : ರಾಜ್ಯದಲ್ಲಿ ಅರಣ್ಯ ಭೂಮಿ ಕಬಳಿಸಿದರೆ `ಕ್ರಿಮಿನಲ್ ಕೇಸ್’ ದಾಖಲು : ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

By kannadanewsnow5701/12/2025 7:34 AM KARNATAKA 1 Min Read

ಬೆಂಗಳೂರು : ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಯತ್ನಿಸುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಅಪರಾಧ ಪ್ರಕರಣಗಳನ್ನು ದಾಖಲಿಸಿ, ಶಿಕ್ಷೆಯಾಗುವಂತೆ…

BIG NEWS : ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ‘ಶಿಕ್ಷಣ ಸಂಸ್ಥೆ’ಗಳಲ್ಲಿ ಬೀದಿ ನಾಯಿಗಳ ಉಪಟಳ ತಡೆಗಟ್ಟಲು ಈ ಕ್ರಮಗಳ ಪಾಲನೆ ಕಡ್ಡಾಯ : ಸರ್ಕಾರ ಆದೇಶ

01/12/2025 7:24 AM

BIG NEWS : ಕಲ್ಯಾಣ ಕರ್ನಾಟಕದ 200 ಶಾಲೆಗಳನ್ನ ‘KPS’ ಶಾಲೆಗಳಾಗಿ ಉನ್ನತೀಕರಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ.!

01/12/2025 7:02 AM

ರಾಜ್ಯದ ಜನಸಾಮಾನ್ಯರಿಗೆ ಬಿಗ್ ಶಾಕ್ : 100 ರೂ. ಗಡಿ ಸಮೀಪ `ಟೊಮೆಟೋ’ ದರ.!

01/12/2025 6:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.