ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದು, ಇದೀಗ ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದು, ಜನೆವರಿ ಇಲ್ಲ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ತಿಳಿಸಿದರು.
ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ಜನೆವರಿ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಆಗಬಹುದು. ಎಲ್ಲವು ಹೈಕಮಾಂಡ್ ಅಂಗಳದಲ್ಲಿದೆ. ಅವರ ಕೈಯಲ್ಲಿದೆ.ನಿನ್ನೆ ಸೋನಿಯಾ, ರಾಹುಲ್, ಖರ್ಗೆ ಸೇರಿ ಸಭೆ ಮಾಡಿದ್ದಾರೆ. ಅವರೆಲ್ಲ ಸೇರಿ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮತ್ತೆ ಒಂದು ಸಲ ಕುಳಿತು ಮಾತನಾಡುತ್ತಾರೆ ಎಂದರು.
ಜನೆವರಿ, ಫೆಬ್ರವರಿ ಬದಲಾವಣೆ ಆಗಬಹುದು. ಎಲ್ಲರು ಕುಳಿತು ಮಾತನಾಡುತ್ತಾರೆ. ಆದರೆ ಈಗ ತೊಂದರೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಆಗಲೇಬೇಕು. ಸಿಎಂ ಡಿಸಿಎಂ ಪ್ರೆಸ್ ಮೀಟ್ ಮಾಡಿದ್ದಾರೆ. ಅಂದ್ರೆ ತೊಂದರೆ ಇಲ್ಲ ಎಂದರು. ಇನ್ನು ನಾನು ಸಿಎಂ ಬ್ರದರ್ಸ್ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ನಮ್ಮಲ್ಲಿ ಯಾವುದೇ ಗುಂಪಿಲ್ಲ, ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಗುಂಪು ಯಾಕೆ ಬೇಕು? ನೀವೆಲ್ಲ ಏನೇನೋ ತೋರಿಸ್ತಿದೀರ, ಸಿದ್ದರಾಮಯ್ಯದೊಂದು ಗುಂಪು, ಡಿಕೆಶಿ ಗುಂಪು ಅಂತ ನಮ್ಮಲ್ಲಿ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.
ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್ಫಾಸ್ಟ್ ಮೀಟಿಂಗ್ ವಿಚಾರ ನನಗೂ ಸಿಎಂಗೆ ಸಂಬಂಧಿಸಿದ ವಿಚಾರ. ನಾವಿಬ್ರೂ ಬ್ರದರ್ಸ್ ಥರ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ನುಡಿದರು.
ಹನುನಂತಯ್ಯ ವಿಧಾನಸೌಧ ಕಟ್ಟಿದ್ರು, ಎಸ್.ಎಂ ಕೃಷ್ಣ ವಿಕಾಸಸೌಧ ಕಟ್ಟಿದ್ರು. ಬೆಂಗಳೂರನ್ನು ಕೆಂಪೇಗೌಡ ಕಟ್ಟಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ ಹೋಗಿದ್ದಾರೆ. ಯಾರೇ ಆಗಲೀ ಅಧಿಕಾರ ಸಿಕ್ಕಿದಾಗ ಇಂಥ ಸಾಕ್ಷಿ ಗುಡ್ಡೆ ಬಿಟ್ ಹೋಗಬೇಕು. ನಾವೂ ಕೂಡಾ ಆ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದೀವಿ. ನಿಮ್ಮ ಒತ್ತಡಕ್ಕೆ ಬ್ರೇಕ್ಫಾಸ್ಟ್ ಎಲ್ಲ, ನಮಗೇನೂ ಅಗತ್ಯ ಇಲ್ಲ. ನಮ್ಮಲ್ಲಿ ಯಾವುದೇ ಗುಂಪಿಲ್ಲ. 140 ಜನರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡ್ತಿದೀವಿ ಎಂದು ಹೇಳಿದರು.








