ಬೆಂಗಳೂರು : ನಗರದ ಟ್ರಾಫಿಕ್ ಸಮಸ್ಯೆ ಮತ್ತೋಮ್ಮೆ ಸುದ್ದಿಯಾಗಿದೆ. ಇಲ್ಲಿನ ಸಂಚಾರ ದಟ್ಟಣೆಯಿಂದ ಬೇಸತ್ತ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಅವರು, ಸಾಮಾಜಿಕ ಮಾಧ್ಯಮಗಳ ಮೂಲಕ ಬೆಂಗಳೂರು ಸಂಚಾರ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಬೆಂಗಳೂರಿನ ಸಂಚಾರ ದಟ್ಟಣೆಯಿಂದ ಬೇಸತ್ತ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಅವರು, ಬೆಂಗಳೂರು ಟ್ರಾಫಿಕ್ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬರುವಾಗ ರಾಜ್ಕುಮಾರ್ ಸಮಾಧಿ ರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದ ರೈ, ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಬೆಂಗಳೂರಿನ ಸಂಚಾರ ನಿರ್ವಹಣೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. “ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳೇ ಕ್ಷಮಿಸಿ, ನೀವು ಅತ್ಯಂತ ಕೆಟ್ಟ ಸಂಚಾರ ನಿರ್ವಹಣೆಯನ್ನು ಹೊಂದಿದ್ದೀರಿ” ಎಂದು ಪೋಸ್ಟ್ ಮಾಡಿದ್ದಾರೆ.
ಪೊಲೀಸರು ಫೋನ್ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ಅವರೊಂದಿಗೆ ಮಾತನಾಡಲು ನಾನು ಮಾಡಿದ ಪ್ರಯತ್ನದ ಸ್ಕ್ರೀನ್ಶಾಟ್ ಇಲ್ಲಿದೆ. ಅವರಲ್ಲಿ ಯಾರೂ ನನ್ನ ಕರೆಯನ್ನು ಸ್ವೀಕರಿಸಲಿಲ್ಲ. ಒಂದು ಗಂಟೆ ಕಾಲ ನಾವು ರಾಜ್ಕುಮಾರ್ ಸಮಾಧಿ ರಸ್ತೆಯಲ್ಲಿ ಸಿಲುಕಿಕೊಂಡಿದ್ದೇವೆ. ನಾನು ಸಂಸತ್ತಿನ ಅಧಿವೇಶನಕ್ಕೆ ಹಾಜರಾಗಬೇಕು, ನಾನು ವಿಮಾನ ತಪ್ಪಿಸಿಕೊಳ್ಳಲಿದ್ದೆ. ಅಲ್ಲಿ ಒಬ್ಬ ಪೊಲೀಸ್ ಕೂಡ ಕಾಣಲಿಲ್ಲ. ಈ ಅಸಮರ್ಥ ಅಧಿಕಾರಿಗಳು ಸುಂದರ ನಗರದ ಹೆಸರನ್ನು ಹಾಳು ಮಾಡಲು ಸಾಕು. ನಿಸ್ಸಂದೇಹವಾಗಿ ಬೆಂಗಳೂರು ಟ್ರಾಫಿಕ್ ಅತ್ಯಂತ ಕುಖ್ಯಾತ ಟ್ರಾಫಿಕ್ ಎಂಬ ಕುಖ್ಯಾತಿಯನ್ನು ಗಳಿಸಿದೆ” ಎಂದು ಅವರು ತಮ್ಮ ಪೋಸ್ಟ್ನಲ್ಲಿ ಬೆಂಗಳೂರು ನಗರ ಪೊಲೀಸ್ ಮತ್ತು ಸಂಚಾರ ಪೊಲೀಸ್ ಜಂಟಿ ಆಯುಕ್ತರನ್ನು ಟ್ಯಾಗ್ ಮಾಡಿ ಹರಿಹಾಯ್ದಿದ್ದಾರೆ.
Hon’ble @CMofKarnataka I m sorry but you have the worst traffic management, and most irresponsible, useless traffic police. They don’t even pick up phone calls, here is the SS of my attempt to speak to them , none of them picked up my call. Last one hour we are stuck at same… pic.twitter.com/GlWjJ4RgKH
— Rajeev Rai (@RajeevRai) November 30, 2025








