Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕು ಜನತೆ ಗಮನಕ್ಕೆ: ಡಿ.4ರಂದು ‘ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ’

02/12/2025 7:36 PM

ಬೆಳಗಾವಿ ಅಧಿವೇಶನದಲ್ಲಿ ಅಪಾರ್ಟ್‌ಮೆಂಟ್ ಮಾಲೀಕರ ಮತ್ತು ಸಂಘಗಳ ಹಿತಾಸಕ್ತಿ ರಕ್ಷಣೆಗೆ ಸಮಗ್ರ ಶಾಸನ ಜಾರಿಗೆ BAF ಆಗ್ರಹ

02/12/2025 7:05 PM

BREAKING : ಇಂಗ್ಲೆಂಡ್ ಮಾಜಿ ಲೆಜೆಂಡರಿ ಬ್ಯಾಟ್ಸ್ ಮನ್ ‘ರಾಬಿನ್ ಸ್ಮಿತ್’ ನಿಧನ |Robin smith passes away

02/12/2025 7:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿ ಅಧಿವೇಶನದಲ್ಲಿ ಅಪಾರ್ಟ್‌ಮೆಂಟ್ ಮಾಲೀಕರ ಮತ್ತು ಸಂಘಗಳ ಹಿತಾಸಕ್ತಿ ರಕ್ಷಣೆಗೆ ಸಮಗ್ರ ಶಾಸನ ಜಾರಿಗೆ BAF ಆಗ್ರಹ
KARNATAKA

ಬೆಳಗಾವಿ ಅಧಿವೇಶನದಲ್ಲಿ ಅಪಾರ್ಟ್‌ಮೆಂಟ್ ಮಾಲೀಕರ ಮತ್ತು ಸಂಘಗಳ ಹಿತಾಸಕ್ತಿ ರಕ್ಷಣೆಗೆ ಸಮಗ್ರ ಶಾಸನ ಜಾರಿಗೆ BAF ಆಗ್ರಹ

By kannadanewsnow0902/12/2025 7:05 PM

ಬೆಂಗಳೂರು : ಬೆಂಗಳೂರಿನಾದ್ಯಂತ 1,400ಕ್ಕೂ ಹೆಚ್ಚು ಅಪಾರ್ಟ್‌ಮೆಂಟ್‌ ಮತ್ತು ವಿಲ್ಲಾ ನಿವಾಸಿ ಕಲ್ಯಾಣ ಸಂಘಗಳನ್ನು (RWAs) ಪ್ರತಿನಿಧಿಸುವ ಬೆಂಗಳೂರು ಅಪಾರ್ಟ್ಮೆಂಟ್ ಫೆಡೆರೇಷನ್ (BAF), ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಿದ್ದಪಡಿಸಲಾಗಿರುವಂತಹ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಯನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ, ಕಾನೂನನ್ನು ತಕ್ಷಣವೇ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದೆ.

3,50,000ಕ್ಕೂ ಹೆಚ್ಚು ಕುಟುಂಬಗಳು ಮತ್ತು ಸುಮಾರು ಒಂದೂವರೆ ದಶಲಕ್ಷ (15 ಲಕ್ಷ) ನಾಗರಿಕರ ಹಿತಾಸಕ್ತಿಗಳನ್ನು ಪ್ರತಿನಿಧಿಸುವ BAF, ದೀರ್ಘಕಾಲದಿಂದ ಬಾಕಿ ಇರುವ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಕಾಯ್ದೆ 1972 ಅನ್ನು ನವೀಕರಿಸಿ, ಸಮಗ್ರ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ (KAOMA) ಅನ್ನು ಜಾರಿಗೆ ತರಲು ಒತ್ತಾಯಿಸಿದೆ.

ವಿಳಂಬದಿಂದ ಲಕ್ಷಾಂತರ ಮಾಲೀಕರಿಗೆ ತೊಂದರೆ

BAF ಅಧ್ಯಕ್ಷರಾದ ಸತೀಶ್ ಮಲ್ಯ ಅವರು ಮಾತನಾಡಿ, “ಅಪಾರ್ಟ್‌ಮೆಂಟ್ ಮಾಲೀಕರಿಗೆ ಸಮಗ್ರ ಕಾನೂನು ಚೌಕಟ್ಟನ್ನು ಜಾರಿಗೊಳಿಸುವುದು BAF ನ ಹಲವು ವರ್ಷಗಳ ಮುಖ್ಯ ಬೇಡಿಕೆಯಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಇದನ್ನು ತಮ್ಮ ಪ್ರಣಾಳಿಕೆಯಲ್ಲಿ ಪ್ರಮುಖ ಬದ್ಧತೆಯಾಗಿ ಸೇರಿಸಿದ್ದವು. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾಗಿವೆ. ಈ ವರ್ಷ ಮುಖ್ಯಮಂತ್ರಿಗಳು ತಮ್ಮ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ಈ ಹಂತದಲ್ಲಿ ಇದು ಕೇವಲ ವಿನಂತಿಯಾಗಿ ಉಳಿದಿಲ್ಲ, ಇದು ಈಗ ನಮ್ಮ ಬೇಡಿಕೆಯಾಗಿದೆ. ಈ ವಿಳಂಬ, ಕಾನೂನಿನ ಸ್ಪಷ್ಟತೆಯ ಕೊರತೆ ಮತ್ತು ವ್ಯಾಜ್ಯಗಳಿಂದಾಗಿ ಲಕ್ಷಾಂತರ ಮನೆ ಮಾಲೀಕರು ಈಗಾಗಲೇ ತೊಂದರೆಗೀಡಾಗಿದ್ದಾರೆ,” ಎಂದರು.

ಹೊಸ ಕಾಯ್ದೆಯಲ್ಲಿ ಸೇರಿಸಬೇಕಾದ ಪ್ರಮುಖ ಅಂಶಗಳು:

BAF ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿರುವ ವಿವರವಾದ ಪ್ರಸ್ತಾವನೆಯಲ್ಲಿ ಈ ಕೆಳಗಿನ ಪ್ರಮುಖ ಅಂಶಗಳನ್ನು ಹೊಸ ಕಾನೂನಿನಲ್ಲಿ ಅಳವಡಿಸಲು ಸಲಹೆ ನೀಡಿದೆ:

•ಆಸ್ತಿ ಹಕ್ಕುಗಳ ವರ್ಗಾವಣೆ ಮತ್ತು ಮಾಲೀಕತ್ವ: ಬಿಲ್ಡರ್/ಪ್ರವರ್ತಕರಿಂದ ಅಪಾರ್ಟ್‌ಮೆಂಟ್‌ ಮಾಲೀಕರಿಗೆ ಆಸ್ತಿ ಹಕ್ಕುಗಳ ವರ್ಗಾವಣೆ (Conveyance), ಅವಿಭಜಿತ ಪಾಲು (UDS) ಮತ್ತು ಆಸ್ತಿಯ ಉತ್ತರಾಧಿಕಾರ ಕುರಿತು ಸ್ಪಷ್ಟತೆ.
•ಮಾಲೀಕರ ಸಂಘಗಳ ನಿರ್ವಹಣೆ: ಅಪಾರ್ಟ್‌ಮೆಂಟ್‌ ಮಾಲೀಕರ ಸಂಘದ ರಚನೆ, ನೋಂದಣಿ, ಉಪ-ಕಾನೂನುಗಳ ಜಾರಿಗೊಳಿಸುವ ಸಾಮರ್ಥ್ಯ, ಸಾಮಾನ್ಯ ಪ್ರದೇಶಗಳ ನಿರ್ವಹಣೆ ಮತ್ತು ನಿಧಿಗಳ ಬಳಕೆ.
•ವಿವಾದ ಇತ್ಯರ್ಥ ಮತ್ತು ಸಮರ್ಥ ಪ್ರಾಧಿಕಾರ: ವಿವಾದ ಇತ್ಯರ್ಥಕ್ಕೆ ಸ್ಪಷ್ಟ ಯಾಂತ್ರಿಕ ವ್ಯವಸ್ಥೆ ಮತ್ತು ಸೂಕ್ತ ಪ್ರಾಧಿಕಾರದ ವ್ಯಾಖ್ಯಾನ.
•ಪುನರಾಭಿವೃದ್ಧಿ (Redevelopment): ಹಳೆಯ ಕಟ್ಟಡಗಳ ಪುನರಾಭಿವೃದ್ಧಿ ಮತ್ತು ವಿಲೀನದಂತಹ ಆಧುನಿಕ ವಸತಿ ಅಗತ್ಯಗಳಿಗೆ ಅವಕಾಶ.
•ಏಕೀಕೃತ ಆಡಳಿತ: ಬಹು ಕಾಯ್ದೆಗಳ ಬದಲಾಗಿ, ಏಕೈಕ, ಸಮಗ್ರ ಕಾಯ್ದೆಯ (KAOMA) ಮೂಲಕ ಆಡಳಿತದ ಮಾನದಂಡಗಳನ್ನು ಬಲಪಡಿಸುವುದು.

BAF ಪ್ರಧಾನ ಕಾರ್ಯದರ್ಶಿ ಕೆ. ಅರುಣ್ ಕುಮಾರ್ ಮಾತನಾಡಿ, “ಹೊಸ ಕಾನೂನನ್ನು ರಚಿಸಲಾಗುತ್ತಿದ್ದು, ಸದ್ಯದಲ್ಲೇ ಅದನ್ನು ಸದನದಲ್ಲಿ ಮಂಡಿಸಲಾಗುವುದು ಎಂದು ಸನ್ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕಮಾರ್‌ ಅವರು ಸದನದಲ್ಲಿ ಉತ್ತರಿಸಿ ಸುಮಾರು ಎರಡು ವರ್ಷ ಕಳೆದಿದೆ. ಆಧುನಿಕ ಅಪಾರ್ಟ್‌ಮೆಂಟ್‌ಗಳ ಅಗತ್ಯಗಳನ್ನು ಪರಿಹರಿಸುವ ಈ ಹೊಸ ಕಾನೂನನ್ನು ಕೂಡಲೇ ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ,” ಎಂದು ಆಗ್ರಹಿಸಿದರು.

BAF ಖಜಾಂಚಿ ಕಿರಣ್ ಹೆಬ್ಬಾರ್ ಅವರು ಮಾತನಾಡಿ, “ಕಳೆದ ಕೆಲವು ವರ್ಷಗಳಿಂದ ನಮ್ಮ ಬೇಡಿಕೆಯನ್ನು ಬೆಂಬಲಿಸಿದ ಮತ್ತು ಸದನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವ ಭರವಸೆ ನೀಡಿದ ಎಲ್ಲಾ ಶಾಸಕರು ಮತ್ತು ಸಚಿವರಿಗೆ ನಾವು ಧನ್ಯವಾದ ಹೇಳುತ್ತೇವೆ. ಕರ್ನಾಟಕ ರಾಜ್ಯದ ಲಕ್ಷಾಂತರ ಮನೆ ಮಾಲೀಕರಿಗೆ ಸಹಾಯ ಮಾಡುವ ಹೊಸ ಕಾಯ್ದೆಯನ್ನ ಶೀಘ್ರದಲ್ಲಿ ಜಾರಿಗೊಳಿಸುವ ಮೂಲಕ ಮಾಲೀಕರಿಗೆ ಹಾಗೂ ನಿವಾಸಿಗಳಿಗೆ ಅನುಕೂಲ ಮಾಡಿಕೊಡಲಿ ಎನ್ನುವುದು ನಮ್ಮ ಆಶಯವಾಗಿದೆ,” ಎಂದು ತಿಳಿಸಿದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಸತೀಶ್ ಮಲ್ಯ, ಅಧ್ಯಕ್ಷರು BAF, +91 97400 43366
ಕೆ. ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ BAF, +91 95383 99222
ಕಿರಣ್ ಹೆಬ್ಬಾರ್, ಖಜಾಂಚಿ BAF, +91 98454 33600
ವಿಶ್ವ ವೆಂಕಟ್ ರೆಡ್ಡಿ, ಆಡಳಿತ ಮಂಡಳಿ ಸದಸ್ಯ BAF, +91 98861 19755

Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕು ಜನತೆ ಗಮನಕ್ಕೆ: ಡಿ.4ರಂದು ‘ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ’

02/12/2025 7:36 PM1 Min Read

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

02/12/2025 6:58 PM1 Min Read

Good News: ರಾಜ್ಯದ LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

02/12/2025 6:55 PM1 Min Read
Recent News

ಸಾಗರ ತಾಲ್ಲೂಕು ಜನತೆ ಗಮನಕ್ಕೆ: ಡಿ.4ರಂದು ‘ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ’

02/12/2025 7:36 PM

ಬೆಳಗಾವಿ ಅಧಿವೇಶನದಲ್ಲಿ ಅಪಾರ್ಟ್‌ಮೆಂಟ್ ಮಾಲೀಕರ ಮತ್ತು ಸಂಘಗಳ ಹಿತಾಸಕ್ತಿ ರಕ್ಷಣೆಗೆ ಸಮಗ್ರ ಶಾಸನ ಜಾರಿಗೆ BAF ಆಗ್ರಹ

02/12/2025 7:05 PM

BREAKING : ಇಂಗ್ಲೆಂಡ್ ಮಾಜಿ ಲೆಜೆಂಡರಿ ಬ್ಯಾಟ್ಸ್ ಮನ್ ‘ರಾಬಿನ್ ಸ್ಮಿತ್’ ನಿಧನ |Robin smith passes away

02/12/2025 7:04 PM

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

02/12/2025 6:58 PM
State News
KARNATAKA

ಸಾಗರ ತಾಲ್ಲೂಕು ಜನತೆ ಗಮನಕ್ಕೆ: ಡಿ.4ರಂದು ‘ಶಾಸಕ ಗೋಪಾಲಕೃಷ್ಣ ಬೇಳೂರು ಜನ ಸಂಪರ್ಕ ಸಭೆ’

By kannadanewsnow0902/12/2025 7:36 PM KARNATAKA 1 Min Read

ಶಿವಮೊಗ್ಗ: ಜನರ ಸಮಸ್ಯೆ ಸರಿ ಪಡಿಸೋ ನಿಟ್ಟಿನಲ್ಲಿ ಜನರ ಬಳಿಗೆ ಸರ್ಕಾರ ಕೊಂಡೊಯ್ಯುವಂತ ಕೆಲಸವನ್ನು ಶಾಸಕ ಗೋಬಾಲಕೃಷ್ಣ ಬೇಳೂರು ಮಾಡುತ್ತಿದ್ದಾರೆ.…

ಬೆಳಗಾವಿ ಅಧಿವೇಶನದಲ್ಲಿ ಅಪಾರ್ಟ್‌ಮೆಂಟ್ ಮಾಲೀಕರ ಮತ್ತು ಸಂಘಗಳ ಹಿತಾಸಕ್ತಿ ರಕ್ಷಣೆಗೆ ಸಮಗ್ರ ಶಾಸನ ಜಾರಿಗೆ BAF ಆಗ್ರಹ

02/12/2025 7:05 PM

ಮಂಡ್ಯದ ಮದ್ದೂರಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

02/12/2025 6:58 PM

Good News: ರಾಜ್ಯದ LKG, UKG ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

02/12/2025 6:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.