Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೈಸೂರು ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

03/12/2025 9:13 PM

ಬೆಳಗಾವಿ ಅಧಿವೇಶನದಲ್ಲಿ ಮಾಧ್ಯಮದವರಿಗೆ ಉತ್ತಮ ಸೌಲಭ್ಯ ಕಲ್ಪಿಸಿ: ಸರ್ಕಾರಕ್ಕೆ MLC ದಿನೇಶ್‌ ಗೂಳಿಗೌಡ ಪತ್ರದಲ್ಲಿ ಮನವಿ!

03/12/2025 9:10 PM

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

03/12/2025 9:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿ ಅಧಿವೇಶನದಲ್ಲಿ ಮಾಧ್ಯಮದವರಿಗೆ ಉತ್ತಮ ಸೌಲಭ್ಯ ಕಲ್ಪಿಸಿ: ಸರ್ಕಾರಕ್ಕೆ MLC ದಿನೇಶ್‌ ಗೂಳಿಗೌಡ ಪತ್ರದಲ್ಲಿ ಮನವಿ!
KARNATAKA

ಬೆಳಗಾವಿ ಅಧಿವೇಶನದಲ್ಲಿ ಮಾಧ್ಯಮದವರಿಗೆ ಉತ್ತಮ ಸೌಲಭ್ಯ ಕಲ್ಪಿಸಿ: ಸರ್ಕಾರಕ್ಕೆ MLC ದಿನೇಶ್‌ ಗೂಳಿಗೌಡ ಪತ್ರದಲ್ಲಿ ಮನವಿ!

By kannadanewsnow0903/12/2025 9:10 PM

ಬೆಂಗಳೂರು: ಕರ್ನಾಟಕ ವಿಧಾನಮಂಡಲದ ಬೆಳಗಾವಿ ಚಳಿಗಾಲದ ಅಧಿವೇಶನ ವರದಿ ಮಾಡಲು ಆಗಮಿಸುವ ಮಾಧ್ಯಮದವರಿಗೆ ಉತ್ತಮ ದರ್ಜೆಯ ವಸತಿ, ಊಟ ಮತ್ತು ಆರೋಗ್ಯ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಶಾಸಕ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಡಿಸೆಂಬರ್ 8ರಿಂದ ಬೆಳಗಾವಿಯಲ್ಲಿ ಆರಂಭಗೊಳ್ಳಲಿರುವ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಮಂಡಲದ ಉಭಯ ಸದನಗಳ ಸಭಾಧ್ಯಕ್ಷರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ದಿನೇಶ್‌ ಗೂಳಿಗೌಡ ಅವರು, ಕಳೆದ 19 ವರ್ಷಗಳಿಂದ ಬೆಳಗಾವಿ ಅಧಿವೇಶನಕ್ಕಾಗಿ ಬೆಂಗಳೂರಿನಿಂದ ಆಗಮಿಸುತ್ತಿರುವ ಪತ್ರಕರ್ತರು ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿದ್ದಾರೆ.

19 ವರ್ಷದ ಹಳೆಯ ವ್ಯವಸ್ಥೆ ಬದಲಾವಣೆಗೆ ಮನವಿ

2006ರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದರೂ, ಇಂದಿಗೂ ಖಡೇ ಬಜಾರ್ ವ್ಯಾಪ್ತಿಯ ಕೀರ್ತಿ, ಶ್ರೀನಿವಾಸ ಸೇರಿದಂತೆ ಇನ್ನಿತರ ಹಳೆಯ ಹೋಟೆಲ್‌ಗಳಲ್ಲೇ ಪತ್ರಕರ್ತರಿಗೆ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಬೆಳಗಾವಿಯಲ್ಲಿ ಉತ್ತಮ ದರ್ಜೆಯ ಹೋಟೆಲ್‌ಗಳು ನಿರ್ಮಾಣವಾಗಿದ್ದರೂ ಹಳೆಯ ಹೋಟೆಲ್‌ಗಳನ್ನೇ ಬಳಸಲಾಗುತ್ತಿದೆ.

ಬೆಂಗಳೂರಿನ ವಾತಾವರಣ ಹಾಗೂ ಆಹಾರಶೈಲಿಗಿಂತ ಬೆಳಗಾವಿಯ ವಾತಾವರಣ ವ್ಯತ್ಯಾಸವಿರುವುದರಿಂದ ಪ್ರತಿ ಅಧಿವೇಶನದ ಸಂದರ್ಭದಲ್ಲಿ ಹಲವು ಪತ್ರಕರ್ತರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಈ ಅನಾರೋಗ್ಯ ಸಮಸ್ಯೆಗಳಿಂದ ಒಬ್ಬ ಪತ್ರಕರ್ತರು ಸಾವನ್ನಪ್ಪಿರುವ ನಿದರ್ಶನವೂ ಇದೆ ಎಂದು ದಿನೇಶ್‌ ಗೂಳಿಗೌಡ ಅವರು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶುಚಿ-ರುಚಿ, ಆರೋಗ್ಯಕ್ಕೆ ಆದ್ಯತೆ ಬೇಕು:

ಈ ವರ್ಷದ ಅಧಿವೇಶನಕ್ಕೆ ಆಗಮಿಸುವ ಮಾಧ್ಯಮದವರಿಗೆ ಶುಚಿ, ರುಚಿಯಾದ ಆಹಾರ, ಉತ್ತಮ ವಸತಿ, ನೀರು ಮತ್ತು ತುರ್ತು ಆರೋಗ್ಯ ಸೌಕರ್ಯಗಳನ್ನು ಒಳಗೊಂಡ ಉತ್ತಮ ದರ್ಜೆಯ ಹೋಟೆಲ್‌ಗಳನ್ನು ಕಾಯ್ದಿರಿಸಬೇಕೆಂದು ಅವರು ಸರ್ಕಾರವನ್ನು ಕೋರಿದ್ದಾರೆ.

ವಿಶೇಷಾಧಿಕಾರಿ ನೇಮಿಸಿ:

ಅಲ್ಲದೆ, ಪತ್ರಕರ್ತರ ಕುಂದುಕೊರತೆ ಮತ್ತು ಸೌಕರ್ಯಗಳನ್ನು ನೋಡಿಕೊಳ್ಳಲು ಒಬ್ಬ ವಿಶೇಷಾಧಿಕಾರಿಯನ್ನು ನೇಮಿಸಬೇಕೆಂದೂ ಅವರು ಮನವಿ ಮಾಡಿದ್ದಾರೆ. ಮಾಧ್ಯಮ ಮಿತ್ರರ ಮನವಿಯನ್ನು ಸರ್ಕಾರ ಆದ್ಯತೆ ಮೇರೆಗೆ ಪರಿಗಣಿಸಬೇಕು ಎಂದು ಶಾಸಕ ದಿನೇಶ್‌ ಗೂಳಿಗೌಡ ಮನವಿ ಮಾಡಿದ್ದಾರೆ.

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

BREAKING: ಕಾವೇರಿ ನದಿ ತೀರ ಒತ್ತುವರಿ ತೆರವಿಗೆ ಉಪ ಲೋಕಾಯುಕ್ತ ನ್ಯಾ.ವೀರಪ್ಪ ಆದೇಶ

Share. Facebook Twitter LinkedIn WhatsApp Email

Related Posts

ಮೈಸೂರು ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

03/12/2025 9:13 PM1 Min Read

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

03/12/2025 9:04 PM4 Mins Read

ಮಂಡ್ಯದ ಮದ್ದೂರು ಪೇಟೆ ಬೀದಿ ಅಗಲೀಕರಣ; ಡಿ.6ರಂದು ಸಾರ್ವಜನಿಕರ ಸಭೆ ಕರೆದ ಶಾಸಕ ಕೆ.ಎಂ.ಉದಯ್

03/12/2025 8:57 PM1 Min Read
Recent News

ಮೈಸೂರು ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

03/12/2025 9:13 PM

ಬೆಳಗಾವಿ ಅಧಿವೇಶನದಲ್ಲಿ ಮಾಧ್ಯಮದವರಿಗೆ ಉತ್ತಮ ಸೌಲಭ್ಯ ಕಲ್ಪಿಸಿ: ಸರ್ಕಾರಕ್ಕೆ MLC ದಿನೇಶ್‌ ಗೂಳಿಗೌಡ ಪತ್ರದಲ್ಲಿ ಮನವಿ!

03/12/2025 9:10 PM

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

03/12/2025 9:04 PM

BREAKING : ’24 MH-60R ಸೀಹಾಕ್ ಹೆಲಿಕಾಪ್ಟರ್’ ಖರೀದಿಗೆ US ಜೊತೆ ಭಾರತ $946 ಮಿಲಿಯನ್ ಒಪ್ಪಂದಕ್ಕೆ ಸಹಿ

03/12/2025 8:58 PM
State News
KARNATAKA

ಮೈಸೂರು ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

By kannadanewsnow0903/12/2025 9:13 PM KARNATAKA 1 Min Read

ಮೈಸೂರು: ಮಾಗಡಿ ರಸ್ತೆಯ ಪ್ರಮುಖ ಅಪಧಮನಿ ರಸ್ತೆಯ ತ್ರಿಪಥ ಜೋಡಣೆಗೆ ಸಂಬಂಧಿಸಿದಂತೆ ಬಿಡಿಎ ಹೆಜ್ಜಾಳ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ತಾತ್ಕಾಲಿಕ…

ಬೆಳಗಾವಿ ಅಧಿವೇಶನದಲ್ಲಿ ಮಾಧ್ಯಮದವರಿಗೆ ಉತ್ತಮ ಸೌಲಭ್ಯ ಕಲ್ಪಿಸಿ: ಸರ್ಕಾರಕ್ಕೆ MLC ದಿನೇಶ್‌ ಗೂಳಿಗೌಡ ಪತ್ರದಲ್ಲಿ ಮನವಿ!

03/12/2025 9:10 PM

ಮಂಡ್ಯ ಜಿಲ್ಲೆಗೆ 10,000 ಕೋಟಿಗೂ ಹೆಚ್ಚು ಅನುದಾನದಲ್ಲಿ ಅಭಿವೃದ್ಧಿ: ಸಚಿವ ಎನ್.ಚಲುವರಾಯಸ್ವಾಮಿ

03/12/2025 9:04 PM

ಮಂಡ್ಯದ ಮದ್ದೂರು ಪೇಟೆ ಬೀದಿ ಅಗಲೀಕರಣ; ಡಿ.6ರಂದು ಸಾರ್ವಜನಿಕರ ಸಭೆ ಕರೆದ ಶಾಸಕ ಕೆ.ಎಂ.ಉದಯ್

03/12/2025 8:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.