ಬೆಂಗಳೂರು : ದೆಹಲಿಯಲ್ಲಿ ಕೆಂಪುಕೋಟೆಯ ಬಳಿ ಕಾರುಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್ಐಎ ತನಿಖೆ ಚುರುಕುಗೊಳಿಸಿದ್ದು ಇದೀಗ ಮತ್ತೊಂದು ಸ್ಫೋಟಕ ಅಂಶ ಬಯಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರ ಮೊಬೈಲ್ ಬಳಕೆ ವಿಡಿಯೋ ವೈರಲ್ ಆದ ನಂತರ ಎನ್ಐಎ ತನಿಖೆ ಚುರುಕುಗೊಂಡಿದೆ. ಉಗ್ರ ಜುಹಾದ್ ಶಕೀಲ್ ಮನ್ನಾ ಜೈಲಿನಲ್ಲಿದ್ದುಕೊಂಡು ಮೊಬೈಲ್ ಬಳಸಿದ್ದ ವಿಡಿಯೋ ಬೆಳಕಿಗೆ ಬಂದಿದ್ದು, ದೆಹಲಿ ಬ್ಲಾಸ್ಟ್ಗೂ ಈತನ ಸಂಪರ್ಕ ಇರುವ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆ.
ಅಧಿಕಾರಿಗಳು ಈಗಾಗಲೇ ಜೈಲಿಗೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ.ಈ ಬ್ಲಾಸ್ಟ್ಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ಮೊಬೈಲ್ ಬಳಕೆ ಮಾಡಿರುವುದಕ್ಕೂ ಸಂಬಂಧ ಇದೆಯಾ ಎಂಬ ಅನುಮಾನ ಮೂಡಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಮತ್ತೆ ಎನ್ಐಎ ಜೈಲಿಗೆ ಭೇಟಿ ನೀಡಿದ್ದಾರೆ. ಈಗಾಗಲೇ ಎನ್ಐಎ ದೇಶದ ಹಲವು ಕಡೆ ದಾಳಿಯನ್ನು ನಡೆಸಿ, ಹಲವು ದಾಖಲೆಗಳು ವಶಪಡಿಸಿಕೊಂಡ ತನಿಖೆಯನ್ನು ನಡೆಸುತ್ತಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರರು ಹಾಗೂ ರೌಡಿಶೀಟರ್ಗಳು ಮೊಬೈಲ್ ಉಪಯೋಗಿಸುತ್ತಿದ್ದರು ಎಂಬ ವಿಡಿಯೋ ವೈರಲ್ ಆಗಿತ್ತು. ಈ ವಿಚಾರ ಕರ್ನಾಟಕ ಸರ್ಕಾರಕ್ಕೂ ತಲೆನೋವುವಾಗಿತ್ತು. ಜುಹಾದ್ ಹಮೀದ್ ಶಕೀಲ್ ಮನ್ನಾ ಕೈಯಲ್ಲಿ ಮೊಬೈಲ್ ಇರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಬೆಂಗಳೂರು ಜೈಲಿಗೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಈ ತನಿಖೆಯ ಸ್ವಲ್ಪ ಸಮಯದ ನಂತರ ದೆಹಲಿಯಲ್ಲಿ ಕಾರು ಬ್ಲಾಸ್ಟ್ ಆಗಿದೆ. ಇದೀಗ ಬೆಂಗಳೂರು ಜೈಲಿನಲ್ಲಿರುವ ಉಗ್ರನಿಗೂ ದೆಹಲಿ ಬ್ಲಾಸ್ಟ್ಗೂ ಸಂಬಂಧ ಇರಬಹುದು ಎಂಬ ಅನುಮಾನ ಶುರುವಾಗಿದೆ.
ಎನ್ಐಎ ತಂಡ ಈಗಾಗಲೇ ಪರಪ್ಪನ ಅಗ್ರಹಾರಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದೆ. ಈ ವೇಳೆ ಜುಹಾದ್ ಹಮೀದ್ ಶಕೀಲ್ ಮನ್ನಾ ವಿಚಾರಣೆಯನ್ನು ಕೂಡ ಎನ್ಐಎ ಅಧಿಕಾರಿಗಳು ನಡೆಸಿದ್ದಾರೆ. ಅಧಿಕಾರಿಗಳು ಈಗಾಗಲೇ ಹಲವು ಮಾಹಿತಿಗಳನ್ನು ಹಾಗೂ ದಾಖಲೆಗಳನ್ನು ಪಡೆದುಕೊಂಡು, ಈ ಉಗ್ರ ಜೈಲಿನಲ್ಲಿದ್ದುಕೊಂಡು ಯಾರನೆಲ್ಲ ಸಂಪರ್ಕಿಸಿದ್ದಾನೆ ಎಂಬ ಮಾಹಿತಿಯನ್ನು ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಜತೆಗೆ ದೆಹಲಿ ಬ್ಲಾಸ್ಟ್ ಬಗ್ಗೆಯೂ ಅಧಿಕಾರಿಗಳು ಜುಹಾದ್ ಹಮೀದ್ ಶಕೀಲ್ ಮನ್ನಾ ಬಳಿ ಕೇಳಿದ್ದಾರೆ.








