ಬೆಂಗಳೂರು : ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ನಿಲ್ಲಿಸಲಾಗಿದ್ದ ವಂಚನೆ ಪ್ರಕರಣದ ಆರೋಪಿಗೆ ಸೇರಿದ ಕಾರಿನಲ್ಲಿದ್ದ ಕ11 ಲಕ್ಷ ಕಳವು ಮಾಡಿದ ಆರೋಪಕ್ಕೆ ಸಿಸಿಬಿ ಸೈಬರ್ಠಾಣೆ ಕಾನ್ಸ್ಟೇಬಲ್ ಜಬಿವುಲ್ಲಾ ತುತ್ತಾಗಿದ್ದು, ಆರೋಪದ ಬೆನ್ನಲ್ಲೆ ಕಾನ್ಸ್ಟೇಬಲ್ ಸಂಪೂರ್ಣ ಹಣವನ್ನು ಮರಳಿಸಿದ್ದಾರೆ.
ಕೆಲ ದಿನಗಳ ಹಿಂದೆ ವಂಚನೆ ಪ್ರಕರಣ ಸಂಬಂಧ ಇನ್ಸ್ಪೆಕ್ಟರ್ ಉಮೇಶ್ ಕುಮಾರ್ತಂಡ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಠಾಣೆಗೆ ಕರೆತಂದಿದ್ದು, ಆ ವೇಳೆ ಈ ಹಣ ಕಳ್ಳತನವಾಗಿದೆ. ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಆರೋಪಿ, ತನ್ನ ಕಾರನ್ನು ಪರಿಶೀಲಿಸಿದಾಗ ಅದರಲ್ಲಿದ್ದ 11 ಲಕ್ಷ ಕಳ್ಳತನವಾಗಿದೆ ಎಂದು ದೂರಿದ್ದಾನೆ. ಈ ಕಳ್ಳತನ ಬಗ್ಗೆ ಸಿಸಿಬಿ ಡಿಸಿಪಿ ಅವರಿಗೆ ಸಹ ಆರೋಪಿಯು ದೂರು ನೀಡಿದ್ದಾನೆ.
ಆಗ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕಾರಿನಲ್ಲಿದ್ದ ಹಣವನ್ನು ಜಬೀವುಲ್ಲಾ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಆದರೆ, ಈ ಕುರಿತು ತನಿಖೆ ನಡೆಸದೆ ಅಧಿಕಾರಿಗಳು ನಿರ್ಲಕ್ಷ್ಯತನ ತೋರಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಆಯುಕ್ತ ಸೀಮಂತ್ ಕುಮಾರ್ಸಿಂಗ್ ಪ್ರತಿಕ್ರಿಯಿಸಿ, ಕಾರಿನಲ್ಲಿ ಹಣ ಕಳ್ಳತನ ಆರೋಪದ ಬಗ್ಗೆ ಮಾಹಿತಿ ಬಂದಿದ್ದು, ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.








