ವಿರಾಜಪೇಟೆ : ರಸ್ತೆ ಬದಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಫೈರಿಂಗ್ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅತ್ತಿಮಂಗಲ ಗ್ರಾಮದಲ್ಲಿ ನಡೆದಿದೆ.
ಅತ್ತಿಮಂಗಲ ಗ್ರಾಮದಲ್ಲಿ ಇಬ್ಬರು ಯುವಕರ ಮೇಲೆ ಗುಂಡಿನ ದಾಳಿ ನಡೆದಿದ್ದು, ಕಾರ್ಮಿಕರಾದ ಸತೀಶ್ (28) ಹಾಗೂ ಮಿಟ್ಟು (25) ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಂಡು ಹಾರಿಸಿದವರ ಪತ್ತೆಗೆ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.








