Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

05/12/2025 3:00 PM

BREAKING : ವಿಮಾನ ರದ್ದತಿಯಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ ಹೋಟೆಲ್, ಊಟ, ಪೂರ್ಣ ಮರುಪಾವತಿ ; ಇಂಡಿಗೋ ಘೋಷಣೆ

05/12/2025 2:56 PM

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ

05/12/2025 2:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ
KARNATAKA

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ

By kannadanewsnow5705/12/2025 2:54 PM

ಶಿವಮೊಗ್ಗ : ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ ಬೆಳೆಗಾರರಿಗೆ ಉಂಟಾಗುವ ಬೆಳೆ ನಷ್ಟಕ್ಕೆ ಆರ್ಥಿಕ ಭದ್ರತೆ ನೀಡುವ ಹವಾಮಾನಾಧಾರಿತ ಬೆಳೆ ವಿಮಾ ಯೋಜನೆಯಡಿ ವಿವಿಧ ಕಾರಣಗಳಿಂದಾಗಿ ಸಂತ್ರಸ್ಥರಿಗೆ ಪರಿಹಾರ ಧನ ನೀಡುವಲ್ಲಿ ನ್ಯೂನತೆಗಳುಂಟಾಗಿರುವುದು ಗಮನಕ್ಕೆ ಬಂದಿದ್ದು, ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಂದ ವರದಿ ಪಡೆದು ತ್ವರಿತ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತೋಟಗಾರಿಕೆ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಮಳೆಮಾಪಕ ಕೇಂದ್ರಗಳ ಮೂಲಕ ಸಂಗ್ರಹಿಸಿದ ಹವಾಮಾನ ದತ್ತಾಂಶಗಳನ್ನು ಆಧರಿಸಿ ವಿಮಾ ಪರಿಹಾರವನ್ನು ಲೆಕ್ಕಾಚಾರ ಮಾಡಲಾಗುತ್ತದೆ. ಆದರೆ, ಜಿಲ್ಲೆಯಲ್ಲಿರುವ 280ಮಳೆ ಮಾಪನ ಕೇಂದ್ರಗಳಲ್ಲಿ ಕೆಲವು ದುರಸ್ತಿಯಲ್ಲಿದ್ದು, ಸರಿಯಾದ ಮಳೆಮಾಪನ ವರದಿ ಹಾಗೂ ದತ್ತಾಂಶ ದೊರೆಯದಿರುವ ಪ್ರದೇಶಗಳಲ್ಲಿನ ರೈತರ ಬೆಳೆಹಾನಿಯ ಪ್ರಮಾಣ ಅಂದಾಜು ಸಿಗದೆ ಪರಿಹಾರ ಕೊಡುವಲ್ಲಿ ವಿಮಾ ಕಂಪನಿಗಳು ಹಿಂದೆ ಸರಿಯುತ್ತಿದ್ದು, ಇದರಿಂದಾಗಿ ರೈತರಿಗೆ ವಿಮಾ ಮೊತ್ತ ದೊರೆಯದೆ ಅತೀವ ನಷ್ಟ ಉಂಟಾಗುತ್ತಿದೆ. ಈ ಸಂಬಂಧ ಮಲೆನಾಡು ವಿಭಾಗದ ರೈತರಿಂದ ಸಾಕಷ್ಟು ದೂರುಗಳು ಬಂದಿವೆ ಎಂದವರು ನುಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಅಡಕೆ, ಶುಂಠಿ, ಕಾಳುಮೆಣಸು, ಮಾವಿನಂತಹ ಬೆಳೆಗಳನ್ನು ವಿಮಾ ವ್ಯಾಪ್ತಿಗೆ ಪರಿಗಣಿಸಲಾಗುತ್ತಿದೆ. ವಿಮಾಪಾಲಿಸಿಯಲ್ಲಿ ನಿರ್ದಿಷ್ಟಪಡಿಸಿದ ಹವಾಮಾನ ಘಟಕಗಳು ಇಳುವರಿ ನಷ್ಟವನ್ನು ಲೆಕ್ಕಿಸಿ ರೈತರಿಗೆ ಸ್ವಯಂಚಾಲಿತವಾಗಿ ಮತ್ತು ತ್ವರಿತವಾಗಿ ಪರಿಹಾರ ನೀಡುತ್ತವೆ. ಆದರೆ, ಮಳೆಮಾಪನ ಘಟಕಗಳ ನಿಷ್ಕ್ರಿಯತೆ ಮತ್ತು ಸಮರ್ಪಕ ಮಾಹಿತಿ ನೀಡದಿರುವುದರಿಂದ ಸಮಸ್ಯೆ ಉಂಟಾಗಿದೆ ಎಂದ ಅವರು, ಈ ಸಂಬಂಧ ಅಭಿವೃದ್ದಿ ಆಯುಕ್ತರು ಹಾಗೂ ವಿಮಾ ಕಂಪನಿಗಳ ನಡುವೆ ಸಮಾಲೋಚನೆ ನಡೆಸಿ, ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಅವರು, ವಿಮಾ ಕಂಪನಿಗಳ ವ್ಯವಸ್ಥಾಪಕರು ಸ್ಪಂದಿಸದಿದ್ದಲ್ಲಿ ಅನಿವಾರ್ಯವಾಗಿ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಮೊರೆ ಹೋಗಲಾಗುವುದು. ಈ ಹಿಂದೆಯೂ ರೈತರು ನ್ಯಾಯಾಲಯಕ್ಕೆ ಹೋಗಿ ಪರಿಹಾರಧನ ಪಡೆದ ಉದಾಹರಣೆಗಳಿವೆ ಎಂದವರು ನುಡಿದರು.

ಮಳೆ ಮಾಪನ ಕೇಂದ್ರಗಳ ಅಸಮರ್ಪಕ ನಿರ್ವಹಣೆ ಮತ್ತು ದತ್ತಾಂಶ ಸಂಗ್ರಹದ ನ್ಯೂನತೆಯನ್ನು ಸರಿಪಡಿಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದ್ದು, ದುರಸ್ತಿಯಲ್ಲಿರುವ ಘಟಕಗಳಲ್ಲಿ ಆಧುನಿಕ ಯಂತ್ರಗಳನ್ನು ಅಳವಡಿಸಲು ಈಗಾಗಲೇ ಕೃಷಿ ಸಚಿವರು ಸೂಕ್ತ ನಿರ್ಣಯ ಕೈಗೊಂಡಿದ್ದಾರೆ. ಆದ್ದರಿಂದ ಜಿಲ್ಲೆಯಲ್ಲಿ ನಿಷ್ಕ್ರಿಯವಾಗಿರುವ ಯಂತ್ರಗಳ ಮಾಹಿತಿ ನೀಡಿದಲ್ಲಿ ಅವುಗಳನ್ನು ಬದಲಾಯಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

• ಶಿವಮೊಗ್ಗ ಜಿಲ್ಲೆಯಂತೆಯೇ ನೆರೆಯ ಕಾರವಾರ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತಿತರ ಜಿಲ್ಲೆಗಳಲ್ಲಿಯೂ ಮಳೆ ಮಾಪನ ಯಂತ್ರಗಳು ದುರಸ್ತಿಯಲ್ಲಿದ್ದು, ದತ್ತಾಂಶ ಸಂಗ್ರಹದಲ್ಲಿ ವ್ಯತ್ಯಯಗಳಾಗಿರುವುದನ್ನು ಸಂಘಟಿತವಾಗಿ ಸರ್ಕಾರದ ಗಮನಕ್ಕೆ ತಂದು ಪರಿಹಾರ ಧನ ಒದಗಿಸಲು ಮನವಿ ಮಾಡಿಕೊಳ್ಳಲಾಗುವುದು. – ಗುರುದತ್ತ ಹೆಗಡೆ, ಮಾನ್ಯ ಜಿಲ್ಲಾಧಿಕಾರಿಗಳು. ಶಿವಮೊಗ್ಗ.

ವಿಮೆ ಮಾಡಿಸಿದ ಸಂತ್ರಸ್ಥ ರೈತರೆಲ್ಲರಿಗೂ ಪರಿಹಾರ ಧನ ಕೊಡಲೇಬೇಕಾದುದು ಸರ್ಕಾರದ ಅಂತೆಯೇ ಜನಪ್ರತಿನಿಧಿಗಳ ಕರ್ತವ್ಯವಾಗಿದೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಕ್ತ ವಹಿಸಲಾಗುವುದಲ್ಲದೇ ವಿಮಾ ಕಂಪನಿಗಳ ಪ್ರತಿನಿಧಿಗಳೊಬ್ಬರು ಸದಾ ಜಿಲ್ಲಾ ಕೇಂದ್ರದಲ್ಲಿರುವಂತೆಯೂ ಸೂಚಿಸಲಾಗುವುದು ಎಂದ ಅವರು, ಸಕಾಲದಲ್ಲಿ ಮಾಹಿತಿ ಒದಗಿಸದಲ್ಲಿ ಶೀಘ್ರದಲ್ಲಿ ನಡೆಯಲಿರುವ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಅಲ್ಲದೇ ಕಳೆದ ಮುಂಗಾರು ಮಳೆಯಿಂದಾಗಿ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಅಡಿಕೆ ಬೆಳೆಗೆ ಕಂಡುಬಂದ ಎಲೆಚುಕ್ಕೆ ರೋಗ ಮತ್ತು ಕೊಳೆರೋಗದಿಂದಾಗಿ ಅತೀವ ಪ್ರಮಾಣ ಬೆಳೆ ಹಾನಿ ಹಾಗೂ ಇಳುವರಿ ಕುಂಠಿತವಾಗಿದೆ. ಅದಕ್ಕೆ ಸಂಬಂಧಿಸಿದಂತೆ ಪ್ರತಿ ಹೆ.ಗೆ ರೂ.42,000/-ಗಳ ಪರಿಹಾರಧನ ನೀಡುವಂತೆ ತೋಟಗಾರಿಕೆ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಅಧಿಕಾರಿಗಳ ಸಮಾಲೋಚನಾ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಹೇಮಂತ್, ಅಪರ ಜಿಲ್ಲಾಧಿಕಾರಿ ಅಭಿಷೇಕ್ವಿ., ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ|| ಕಿರಣ್ಕುಮಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ|| ಸಂಜಯ್ಎ.ಬಿ., ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Immediate action to correct the deficiency in payment of weather-based crop insurance premiums: Minister Madhu Bangarappa
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

05/12/2025 3:00 PM1 Min Read

ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಸಂಚಾರಿ ಶೌಚಾಲಯ ಭಾಗ್ಯ.!

05/12/2025 2:46 PM2 Mins Read

SHOCKING : ರಾಜ್ಯದಲ್ಲಿ `ನಾಯಿ’ ದಾಳಿಗೆ ಮತ್ತೊಂದು ಬಲಿ : ರಾಟ್ ವೀಲರ್ ನಾಯಿ ಕಚ್ಚಿ ಮಹಿಳೆ ಸಾವು.!

05/12/2025 2:41 PM1 Min Read
Recent News

GOOD NEWS : ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

05/12/2025 3:00 PM

BREAKING : ವಿಮಾನ ರದ್ದತಿಯಿಂದ ತೊಂದರೆಗೊಳಗಾದ ಪ್ರಯಾಣಿಕರಿಗೆ ಹೋಟೆಲ್, ಊಟ, ಪೂರ್ಣ ಮರುಪಾವತಿ ; ಇಂಡಿಗೋ ಘೋಷಣೆ

05/12/2025 2:56 PM

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ

05/12/2025 2:54 PM

BREAKING : ರಷ್ಯಾ ನಾಗರಿಕರಿಗೆ 30 ದಿನಗಳವರೆಗೆ ಉಚಿತ ಟೂರಿಸಂ ವೀಸಾ : ಪ್ರಧಾನಿ ಮೋದಿ ಘೋಷಣೆ | WATCH VIDEO

05/12/2025 2:51 PM
State News
KARNATAKA

GOOD NEWS : ರಾಜ್ಯದ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಆರೋಗ್ಯ ಯೋಜನೆ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5705/12/2025 3:00 PM KARNATAKA 1 Min Read

ಬೆಂಗಳೂರು : ನಿವೃತ್ತ ಪೊಲೀಸ್ ಅಧಿಕಾರಿ/ಸಿಬ್ಬಂದಿ ರವರುಗಳಿಗೆ ನಿವೃತ್ತ ಆರೋಗ್ಯ ಯೋಜನೆಯಡಿಯಲ್ಲಿ ಆಸ್ಪತ್ರೆಯನ್ನು ಸೇರ್ಪಡೆಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ…

ಹವಾಮಾನಾಧಾರಿತ ಬೆಳೆ ವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ : ಸಚಿವ ಮಧು ಬಂಗಾರಪ್ಪ

05/12/2025 2:54 PM

ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಸಂಚಾರಿ ಶೌಚಾಲಯ ಭಾಗ್ಯ.!

05/12/2025 2:46 PM

SHOCKING : ರಾಜ್ಯದಲ್ಲಿ `ನಾಯಿ’ ದಾಳಿಗೆ ಮತ್ತೊಂದು ಬಲಿ : ರಾಟ್ ವೀಲರ್ ನಾಯಿ ಕಚ್ಚಿ ಮಹಿಳೆ ಸಾವು.!

05/12/2025 2:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.