Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಾಮರಾಜನಗರದಲ್ಲಿ ಸಿಲಿಂಡರ್ ಸ್ಪೋಟ : ಇಬ್ಬರಿಗೆ ಗಂಭೀರ ಗಾಯ!

10/03/2026 1:43 PM

BIG NEWS : ವರ್ಗಾವಣೆಗೊಂಡ ಶಿಕ್ಷಕರ ಬಿಡುಗಡೆ & ಕರ್ತವ್ಯಕ್ಕೆ ಹಾಜರಾಗಲು ದಿನಾಂಕ ನಿಗದಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

10/03/2026 1:34 PM

BREAKING : ಮದುವೆಗೆ ಒಪ್ಪದ ಹಿನ್ನೆಲೆ : ದಾವಣಗೆರೆಯಲ್ಲಿ  ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು!

10/03/2026 1:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ತಪ್ಪದೇ ಈ ಪರೀಕ್ಷೆ ಮಾಡಿಸಿಕೊಳ್ಳಿ.!
KARNATAKA

ALERT : 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ತಪ್ಪದೇ ಈ ಪರೀಕ್ಷೆ ಮಾಡಿಸಿಕೊಳ್ಳಿ.!

By kannadanewsnow5706/12/2025 1:03 PM

30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿಸುವ ಮೂಲಕ ಸದೃಢ ಆರೋಗ್ಯ ಹೊಂದಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.

ಶುಕ್ರವಾರ ಸಂಡೂರು ತಾಲ್ಲೂಕಿನ ವಿಠಲಾಪುರÀ ಮತ್ತು ಮೆಟ್ರಿಕಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಅವರು ಮಾತನಾಡಿದರು.

ಯಾರಿಗಾದರೂ ಬಾಯಿ ಒಣಗಿದಂತೆ ಆಗುವುದು ಅಥವಾ ವಿಪರೀತ ಬಾಯಾರಿಕೆ, ಪದೇ ಪದೇ ಮೂತ್ರ ವಿಸರ್ಜನೆ, ಹಸಿವು ಹೆಚ್ಚಾಗುವುದು, ಮಂದದೃಷ್ಟಿ ಕಾರಣವಿಲ್ಲದೇ ಆಯಾಸ ಕಂಡುಬAದಲ್ಲಿ ತಕ್ಷಣ ವೈದ್ಯರ ಬಳಿ ತೆರಳಿ ಪರಿಕ್ಷೀಸಿಕೊಳ್ಳಬೇಕು. 30 ವರ್ಷ ಮೇಲ್ಪಟ್ಟವರು ಪ್ರತಿ 6 ತಿಂಗಳಿಗೊಮ್ಮೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಪರೀಕ್ಷೆ ಮಾಡಿಸುವ ಮೂಲಕ ಸದೃಢ ಆರೋಗ್ಯ ಹೊಂದಬಹುದಾಗಿದೆ ಎಂದು ತಿಳಿಸಿದರು.

30 ರಿಂದ 59 ವರ್ಷ ಹೆಚ್ಚಿನ ಸಾವುಗಳಿಗೆ ಅಸಾಂಕ್ರಾಮಿಕ ರೋಗಗಳೇ ಕಾರಣವಾಗಿವೆ. 2026 ರ ಹೊತ್ತಿಗೆ ದೇಶದಲ್ಲಿ 75 ಮಿಲಿಯನ್ ಮಧುಮೇಹಿಗಳು ಕಂಡುಬರುವ ಸಾಧ್ಯತೆಯಿದ್ದು, ಇದರಿಂದ ದುಡಿಯುವ ವಯಸ್ಸಿನಲ್ಲಿಯೇ ಮರಣ ಹೊಂದುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮಧುಮೇಹ ಕುರಿತು ಎಫ್‌ಬಿಎಸ್, ಪಿಪಿಬಿಎಸ್ ಖಾಲಿ ಹೊಟ್ಟೆಯಲ್ಲಿ ಪರೀಕ್ಷೆ, ಊಟ ಮಾಡಿದ 2 ಗಂಟೆಯ ನಂತರ ಪರೀಕ್ಷೆ ಶರೀರದ ಮೂಲಸಕ್ಕರೆ ಮಟ್ಟ ತೋರಿಸುತ್ತದೆ. ಊಟಕ್ಕೆ ಶರೀರ ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ತೋರಿಸುತ್ತದೆ. ಮಧುಮೇಹ ಪತ್ತೆಗೆ ಮುಖ್ಯ ಚಿಕಿತ್ಸೆ ಪರಿಣಾಮಕಾರಿಯೇ ಅಥವಾ ಇಲ್ಲವೇ ಎಂಬುದು ಮುಖ್ಯವಾಗಿದೆ. ಈ ಸೇವೆಯು ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿದ್ದು, ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ತಿಳಿಸಿದರು.
ರೋಗ ನಿಯಂತ್ರಣಕ್ಕಾಗಿ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗಿದೆ. ತೂಕ ಕಡಿಮೆ ಮಾಡಿಕೊಳ್ಳುವುದು. ಇದಕ್ಕಾಗಿ ಸೈಕಲ್ ತುಳಿಯುವುದು, ಬಿರಿಸಿನ ನಡಿಗೆ, ನಿರ್ದಿಷ್ಟ ದೂರದಲ್ಲಿ ಓಡುವುದು ಅಥವಾ ಮನೆಯಲ್ಲಿಯೇ ವ್ಯಾಯಾಮ ಮಾಡುವುದು, ಮದ್ಯ, ಧೂಮಪಾನ ತ್ಯಜಿಸುವುದು ಮುಂತಾದವುಗಳ ಮೂಲಕ ರೋಗ ತಡೆಗಟ್ಟಬಹುದಾಗಿದೆ ಎಂದರು.

ಪ್ರಸ್ತುತ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ವೈದ್ಯಾಧಿಕಾರಿಗಳಿಂದ ಮತ್ತು ಗ್ರಾಮೀಣ ಭಾಗದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳಿಂದÀ ಸಕ್ಕರೆ ಖಾಯಿಲೆ ಮತ್ತು ರಕ್ತದೊತ್ತಡ ಪರೀಕ್ಷೆಯನ್ನು ಕೈಗೊಂಡು ಸಂಶಯಾತ್ಮಕ ವ್ಯಕ್ತಿಗಳನ್ನು ವೈದ್ಯಾಧಿಕಾರಿಗಳ ಬಳಿ ಕಳುಹಿಸಿದಾಗ ಪುನಃ ದೃಢಪಟ್ಟಲ್ಲಿ ಆಯಾ ಗ್ರಾಮದಲ್ಲಿಯೇ ಉಚಿತವಾಗಿ ಮಾತ್ರೆಗಳನ್ನು ನೀಡುವ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.

ಮಧುಮೇಹ ಪರೀಕ್ಷೆಯು ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಪರೀಕ್ಷೆ ಮಾಡಲಾಗುತ್ತದೆ. ಎಲ್ಲಾ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ವಿನಂತಿಸಿದರು.

ಈ ಸಂದರ್ಭದಲ್ಲಿ ವೈದ್ಯಾಧಿಕಾರಿಗಳಾದ ಡಾ.ಹರೀಶ್, ಡಾ.ಮಹೇಶ್ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗದವರು, ಸಾರ್ವಜನಿಕರು ಹಾಜರಿದ್ದರು.

ALERT: People over 30 should get their blood pressure and diabetes checked every 6 months!
Share. Facebook Twitter LinkedIn WhatsApp Email

Related Posts

BREAKING : ಚಾಮರಾಜನಗರದಲ್ಲಿ ಸಿಲಿಂಡರ್ ಸ್ಪೋಟ : ಇಬ್ಬರಿಗೆ ಗಂಭೀರ ಗಾಯ!

10/03/2026 1:43 PM1 Min Read

BIG NEWS : ವರ್ಗಾವಣೆಗೊಂಡ ಶಿಕ್ಷಕರ ಬಿಡುಗಡೆ & ಕರ್ತವ್ಯಕ್ಕೆ ಹಾಜರಾಗಲು ದಿನಾಂಕ ನಿಗದಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

10/03/2026 1:34 PM1 Min Read

BREAKING : ಮದುವೆಗೆ ಒಪ್ಪದ ಹಿನ್ನೆಲೆ : ದಾವಣಗೆರೆಯಲ್ಲಿ  ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು!

10/03/2026 1:33 PM1 Min Read
Recent News

BREAKING : ಚಾಮರಾಜನಗರದಲ್ಲಿ ಸಿಲಿಂಡರ್ ಸ್ಪೋಟ : ಇಬ್ಬರಿಗೆ ಗಂಭೀರ ಗಾಯ!

10/03/2026 1:43 PM

BIG NEWS : ವರ್ಗಾವಣೆಗೊಂಡ ಶಿಕ್ಷಕರ ಬಿಡುಗಡೆ & ಕರ್ತವ್ಯಕ್ಕೆ ಹಾಜರಾಗಲು ದಿನಾಂಕ ನಿಗದಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

10/03/2026 1:34 PM

BREAKING : ಮದುವೆಗೆ ಒಪ್ಪದ ಹಿನ್ನೆಲೆ : ದಾವಣಗೆರೆಯಲ್ಲಿ  ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು!

10/03/2026 1:33 PM

ಕೇಂದ್ರದ ‘ಫ್ಯಾಕ್ಟ್-ಚೆಕ್ ಯುನಿಟ್’ ಕಾನೂನುಬದ್ಧವೇ? ಸುಪ್ರೀಂ ಕೋರ್ಟ್ ನಿರ್ಧಾರ ಬಾಕಿ; ದೇಶದ ಹಿತಾಸಕ್ತಿಗೆ ಧಕ್ಕೆ ತರುವ ಅಂಶಗಳ ಬಗ್ಗೆ ಕಳವಳ!

10/03/2026 1:28 PM
State News
KARNATAKA

BREAKING : ಚಾಮರಾಜನಗರದಲ್ಲಿ ಸಿಲಿಂಡರ್ ಸ್ಪೋಟ : ಇಬ್ಬರಿಗೆ ಗಂಭೀರ ಗಾಯ!

By kannadanewsnow0510/03/2026 1:43 PM KARNATAKA 1 Min Read

ಚಾಮರಾಜನಗರ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಪಟ್ಟಣದ ವಾರ್ಡ್ ನಂ.16ರ ನಾಯಕರ ಬೀದಿಯಲ್ಲಿ…

BIG NEWS : ವರ್ಗಾವಣೆಗೊಂಡ ಶಿಕ್ಷಕರ ಬಿಡುಗಡೆ & ಕರ್ತವ್ಯಕ್ಕೆ ಹಾಜರಾಗಲು ದಿನಾಂಕ ನಿಗದಿ : ಶಿಕ್ಷಣ ಇಲಾಖೆ ಮಹತ್ವದ ಆದೇಶ

10/03/2026 1:34 PM

BREAKING : ಮದುವೆಗೆ ಒಪ್ಪದ ಹಿನ್ನೆಲೆ : ದಾವಣಗೆರೆಯಲ್ಲಿ  ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು!

10/03/2026 1:33 PM

ನಿಮ್ಮ ಕೆಲಸವನ್ನು ಇನ್ನಷ್ಟು ಸುಲಭಗೊಳಿಸುತ್ತವೆ ಮೊಬೈಲ್ ನಲ್ಲಿರುವ ಈ 3 ‘ಸೀಕ್ರೆಟ್’ ಫೀಚರ್‌ ಗಳು !

10/03/2026 1:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.