Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಚ್ಛೇದಿತ ಮುಸ್ಲಿಂ ಮಹಿಳೆಗೆ ಮದುವೆಯ ಸಮಯದಲ್ಲಿ ಪತಿಗೆ ನೀಡಿದ ಉಡುಗೊರೆಗಳನ್ನು ವಸೂಲಿ ಮಾಡಲು ಅರ್ಹತೆ ಇದೆ: ಸುಪ್ರೀಂಕೋರ್ಟ್

06/12/2025 8:11 AM

BIG NEWS: ಪೋಷಕರ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಪಡೆಯಲು ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು

06/12/2025 8:08 AM

ದೇಶಾದ್ಯಂತ 1,000 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ: ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದ DGCA

06/12/2025 8:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಪೋಷಕರ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಪಡೆಯಲು ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು
KARNATAKA

BIG NEWS: ಪೋಷಕರ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಪಡೆಯಲು ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5706/12/2025 8:08 AM

ಬೆಂಗಳೂರು: ಸರ್ಕಾರಿ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಂತಹ ಅಭ್ಯರ್ಥಿ ಕೆನೆ ಪದರಕ್ಕೆ ಸೇರಲಿದ್ದು, ಮೀಸಲಾತಿ ಪಡೆಯಲು ಅನರ್ಹ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಕೆಪಿಟಿಸಿಎಲ್ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಧಾರವಾಡದ ರಾಘವೇಂದ್ರ ಚಂದ್ರಣ್ಣನವರ್ ಪ್ರವರ್ಗ 2ಎ ಅಡಿ ಆಯ್ಕೆಯಾಗಿದ್ದರು. ಅದರಂತೆ ಮೀಸಲಾತಿ ಪತ್ರಕ್ಕಾಗಿ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿಗೆ ಅರ್ಜಿ ಸಲ್ಲಿಸಿದ್ದರು. ಅಭ್ಯರ್ಥಿಯ ಪೋಷಕರ ಆದಾಯವು ಪ್ರವರ್ಗ 2ಎ ಗೆ ನಿಗದಿಪಡಿಸಿದ ವಾರ್ಷಿಕ ಆದಾಯ ಮಿತಿ 8 ಲಕ್ಷ ಮೀರಿದ ಕಾರಣ ಹಿಂದುಳಿದ ವರ್ಗದಡಿ ಮೀಸಲಾತಿ ಪಡೆಯಲು ಅರ್ಹರಲ್ಲ ಎಂದು ಸಮಿತಿ ಆದೇಶಿಸಿತ್ತು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಾತಿ, ಆದಾಯ ಪರಿಶೀಲನಾ ಮೇಲ್ಮನವಿ ಪ್ರಾಧಿಕಾರ, ಧಾರವಾಡ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿ ಅಧ್ಯಕ್ಷರು ಸಲ್ಲಿಸಿದ್ದ ರಿಟ್ ಮೇಲ್ಮನವಿ, ನ್ಯಾಯಾಂಗ ನಿಂದನಾ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗಿಯ ಪೀಠ ಮಹತ್ವದ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ರಾಘವೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಏಕಸದಸ್ಯ ನ್ಯಾಯ ಪೀಠ 2024ರ ಅಕ್ಟೋಬರ್ ನಲ್ಲಿ ಅಭ್ಯರ್ಥಿ ಮೀಸಲಾತಿ ಸೌಲಭ್ಯ ಪಡೆಯಲು ಅರ್ಹ ಎಂದು ತೀರ್ಪು ನೀಡಿತ್ತು.

ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಸರ್ಕಾರ ವಿಭಾಗೀಯ ನ್ಯಾಯಪೀಠದಲ್ಲಿ ಪ್ರಶ್ನಿಸಿತ್ತು. ಸರ್ಕಾರದ ಪರ ವಾದ ಮಂಡಿಸಿದ ನಮಿತಾ ಮಹೇಶ್ ಅವರ ವಾದವನ್ನು ನ್ಯಾಯಪೀಠ ಮನ್ನಿಸಿದೆ. ಅಭ್ಯರ್ಥಿಯ ಪೋಷಕರ ವೇತನವೂ ಸೇರಿದಂತೆ ಎಲ್ಲಾ ಮೂಲಗಳ ಆದಾಯವನ್ನು ಪರಿಗಣಿಸಬೇಕು. ಒಂದು ವೇಳೆ ಆದಾಯ ನಿಗದಿತ ಮಿತಿ ದಾಟಿದಲ್ಲಿ ಆದಾಯ ತೆರಿಗೆ ಪಾವತಿದಾರ ಆಗಿದ್ದರೆ ಆತನಿಗೆ ಕೆನೆ ಪದರ ನಿಯಮ ಅನ್ವಯವಾಗುತ್ತದೆ. ಅಭ್ಯರ್ಥಿ ಮೀಸಲಾತಿ ಕ್ಷೇಮು ಮಾಡಲು ಅವಕಾಶವಿಲ್ಲ ಎಂದು ವಿಭಾಗೀಯ ಪೀಠ ಹೇಳಿದೆ. ಈ ಪ್ರಕರಣದಲ್ಲಿ ಅಭ್ಯರ್ಥಿ ರಾಘವೇಂದ್ರ ಚಂದಣ್ಣನವರ್‌ ಅವರ ಪೋಷಕರ ವಾರ್ಷಿಕ ಆದಾಯವು ಹಿಂದುಳಿದ ವರ್ಗಗಳ 2ಎ ಪ್ರವರ್ಗದವರಿಗೆ ನಿಗದಿಪಡಿಸಿರುವ 8 ಲಕ್ಷಕ್ಕಿಂತ ಹೆಚ್ಚಿದೆ. ಮೇಲಾಗಿ ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ. ಅದರಂತೆ ಅಭ್ಯರ್ಥಿ ಮೀಸಲಾತಿ ಸೌಲಭ್ಯ ಕ್ಷೇಮು ಮಾಡಲಾಗದು ಎಂದು ಹೈಕೋರ್ಟ್ ತಿಳಿಸಿದೆ.

BIG NEWS: If the parents' income exceeds the prescribed limit the candidate is ineligible for reservation in government recruitment: High Court's important verdict
Share. Facebook Twitter LinkedIn WhatsApp Email

Related Posts

BREAKING : ಆದಾಯ ತೆರಿಗೆ ಪ್ರಕರಣದಲ್ಲಿ ನಟ `ಯಶ್’ಗೆ ಬಿಗ್ ರಿಲೀಫ್ : `IT’ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ

06/12/2025 7:50 AM1 Min Read

GOOD NEWS: ರಾಜ್ಯ ಸರ್ಕಾರದಿಂದ `ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 4500 ಕಾನ್ಸ್ಟೇಬಲ್ ನೇಮಕಾತಿಗೆ ಗ್ರೀನ್ ಸಿಗ್ನಲ್.!

06/12/2025 7:31 AM1 Min Read

ಮಹಿಳೆಯರಿಗೆ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಹೊಸ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ

06/12/2025 7:27 AM2 Mins Read
Recent News

ವಿಚ್ಛೇದಿತ ಮುಸ್ಲಿಂ ಮಹಿಳೆಗೆ ಮದುವೆಯ ಸಮಯದಲ್ಲಿ ಪತಿಗೆ ನೀಡಿದ ಉಡುಗೊರೆಗಳನ್ನು ವಸೂಲಿ ಮಾಡಲು ಅರ್ಹತೆ ಇದೆ: ಸುಪ್ರೀಂಕೋರ್ಟ್

06/12/2025 8:11 AM

BIG NEWS: ಪೋಷಕರ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಪಡೆಯಲು ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು

06/12/2025 8:08 AM

ದೇಶಾದ್ಯಂತ 1,000 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ: ನಾಲ್ಕು ಸದಸ್ಯರ ಸಮಿತಿಯನ್ನು ರಚಿಸಿದ DGCA

06/12/2025 8:05 AM

BREAKING : ಆದಾಯ ತೆರಿಗೆ ಪ್ರಕರಣದಲ್ಲಿ ನಟ `ಯಶ್’ಗೆ ಬಿಗ್ ರಿಲೀಫ್ : `IT’ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ

06/12/2025 7:50 AM
State News
KARNATAKA

BIG NEWS: ಪೋಷಕರ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿಯು ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿ ಪಡೆಯಲು ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5706/12/2025 8:08 AM KARNATAKA 2 Mins Read

ಬೆಂಗಳೂರು: ಸರ್ಕಾರಿ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಂತಹ ಅಭ್ಯರ್ಥಿ ಕೆನೆ…

BREAKING : ಆದಾಯ ತೆರಿಗೆ ಪ್ರಕರಣದಲ್ಲಿ ನಟ `ಯಶ್’ಗೆ ಬಿಗ್ ರಿಲೀಫ್ : `IT’ ನೋಟಿಸ್ ರದ್ದುಗೊಳಿಸಿ ಹೈಕೋರ್ಟ್ ಆದೇಶ

06/12/2025 7:50 AM

GOOD NEWS: ರಾಜ್ಯ ಸರ್ಕಾರದಿಂದ `ಪೊಲೀಸ್ ಹುದ್ದೆ’ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ : 4500 ಕಾನ್ಸ್ಟೇಬಲ್ ನೇಮಕಾತಿಗೆ ಗ್ರೀನ್ ಸಿಗ್ನಲ್.!

06/12/2025 7:31 AM

ಮಹಿಳೆಯರಿಗೆ ಗುಡ್ ನ್ಯೂಸ್ : `ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯಡಿ ಹೊಸ ಗ್ಯಾಸ್ ಸಂಪರ್ಕ ಪಡೆಯಲು ಅರ್ಜಿ ಆಹ್ವಾನ

06/12/2025 7:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.