ಹೊಸಪೇಟೆ : ತುಂಗಭದ್ರಾ ಡ್ಯಾಂಗೆ ಹೊಸ ಕ್ರಸ್ಟ್ ಗೇಟ್ ಅಳವಡಿಕೆಗೆ ಸಿದ್ಧತೆ ನಡೆಸಲಾಗಿದ್ದು, ಯಾವುದೇ ವಿಘ್ನಗಳು ಎದುರಾಗದಂತೆ ಹೋಮ-ಹವನ ಪೂಜೆ ನಡೆಸಲಾಗಿದೆ.
ಕೊಪ್ಪಳ ಜಿಲ್ಲೆಯ ಮುನಿರಾಬಾತ್ ಬಳಿ ಇರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಗೇಟ್ ಅಳವಡಿಕೆಗೆ ಯಾವುದೇ ವಿಘ್ನಗಳು ಎದುರಾಗದಂತೆ ಸುಗಮವಾಗಿ ಸಾಗಲಿ ಎಂದು ಇಂದು ಹೋಮ, ಹವನ ಹಾಗೂ ವಿಶೇಷ ಪೂಜೆ ಸಲ್ಲಿಸಲಾಗಿದೆ.
ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ ಟಿಬಿ ಬೋರ್ಡ್ ಅಧಿಕಾರಿಗಳು, ವಿಜಯನಗರ ಡಿಸಿ, ಸಿಇಓ, ರೈತರ ಸಮ್ಮುಖದಲ್ಲಿ ಡ್ಯಾಂಗೆ ಯಾವುದೇ ತೊಂದರೆಯಾಗದಂತೆ ಗೇಟ್ ಅಳವಡಿಕೆಯಾಗಲಿ ಎಂದು ಗುರುರಾಜ ಆಚಾರ್ಯ, ವಾದಿರಾಜ ಆಚಾರ್ಯರರ ನೇತೃತ್ವದಲ್ಲಿ ಮಹಾ ಸುದರ್ಶನ ಹೋಮ ಮತ್ತು ರಕ್ಷಾ ಹೋಮದ ವಿಶೇಷ ಪೂಜೆ ನಡೆಸಿ ಪ್ರಾರ್ಥನೆ ಸಲ್ಲಿಸಲಾಯಿತು.








