ನವಲಗುಂದ : ನಿಮಗೆ ಜಾಸ್ತಿ ಮಕ್ಕಳು ಬೇಡ, ನೀವು ಎರಡೇ ಮಕ್ಕಳನ್ನು ಮಾಡಿಕೊಳ್ಳಿ. ಏಕೆಂದರೆ, ಭಾರತದಲ್ಲಿ ಜನಸಂಖ್ಯೆ ಅತಿಯಾಗಿ ಹೆಚ್ಚಾಗುತ್ತಿದೆ. ಜನಸಂಖ್ಯೆ ನಿಯಂತ್ರಣ ಇಂದಿನ ಅಗತ್ಯ. ಇದು ನೂತನ ದಂಪತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಸಲಹೆ.
ಧಾರವಾಡ ಜಿಲ್ಲೆ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಶಾಸಕ ಎನ್. ಎಚ್.ಕೋನರಡ್ಡಿಯವರು ತಮ್ಮ ಪುತ್ರ ನವೀನಕುಮಾರ ಅವರ ಆರತಕ್ಷತೆ ಅಂಗವಾಗಿ ಆಯೋಜಿಸಿದ್ದ 75 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನೂತನ ವಧು-ವರರಿಗೆ ಶುಭಾಶಯ ಕೋರಿದ ಸಿಎಂ, ಸರಳ,ಸಾಮೂಹಿಕ ಮತ್ತು ಅಂತರ್ಜಾತಿ ವಿವಾಹ ಗಳು ಸಮಾಜದಲ್ಲಿ ಸಮಾನತೆ ತರಲು ಸಹಕಾರಿಎಂದರು.
ಇಲ್ಲಿಮದುವೆಯಾದ ನೂತನ ದಂಪತಿಗಳು ಎರಡೇ ಮಕ್ಕಳನ್ನು ಮಾಡಿಕೊಳ್ಳಬೇಕು. ಏಕೆಂದರೆ, ಭಾರತದಲ್ಲಿ ಜನಸಂಖ್ಯೆ ಅತಿಹೆಚ್ಚಾಗುತ್ತಾ ಹೋಗುತ್ತಿದೆ ಎಂದು ಸಲಹೆ ನೀಡಿದರು. ಇಲ್ಲಿ ನಡೆದ 75 ಜೋಡಿಗಳ ಸಾಮೂಹಿಕ ವಿವಾಹದಲ್ಲಿ ಮುಸ್ಲಿಂ ಮತ್ತು ಕ್ರಿಶ್ಚಿಯ 3ನ್ ಸಮಾಜದವರೂ ಮದುವೆ ಯಾಗುತ್ತಿರುವುದು ಸಂತೋಷದ ಕ್ಷಣ. ಸಮಾ ಜದಲ್ಲಿನ ಹಿಂದೂ, ಮುಸ್ಲಿಂ, ಕ್ರೈಸ್ತ, ಬೌದ್ಧ…ಎಲ್ಲರೂ ಮನುಷ್ಯರೇ. ಎಲ್ಲರೂ ಸಹಬಾಳ್ವೆಯಿಂದ ಬದುಕು ನಡೆಸ ಬೇಕು. ಸಮಾಜದಲ್ಲಿ ಜಾತಿ ವ್ಯವಸ್ಥೆ ಹೋಗಬೇಕು. ಹೋಗ ಬೇಕೆಂದರೆ ಅಂತ ರ್ಜಾತಿಯ ವಿವಾಹಗಳು ಹೆಚ್ಚೆಚ್ಚು ಆಗ ಬೇಕು ಎಂದು ಅಭಿಪ್ರಾಯಪಟ್ಟರು.
ಕೆಳಜಾತಿಯವ ಬಸವಣ್ಣನವರು ರೊಂದಿಗೆ ಮೇಲ್ಟಾತಿಯವರ ಮದುವೆ ಮಾಡಿಸಿ, ಅಂದೇ ಸಮಾಜದಲ್ಲಿ ಸಮಾನತೆ ತರಲು ಮುನ್ನುಡಿ ಬರೆದರು. ಸರ್ವ ಧರ್ಮಗಳ ವಧು-ವರರು ಸಾಮೂಹಿಕ ವಿವಾಹಆಗುವುದರೊಂದಿಗೆ ಸಮಾಜದಲ್ಲಿ ಅಂತರ್ಜಾತಿ ಮದುವೆಗಳು ಆಗಬೇಕು. ಇದರಿಂದಸಮಾಜದಸರ್ವರಲ್ಲಿ ಸಮಾನತೆ ತರಲು ಸಹಾಯವಾಗುತ್ತದೆ ಎಂದು ಅವರು ಹೇಳಿದರು.








