Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಿಎಂ ಸಿದ್ಧರಾಮಯ್ಯ ಸಂತಾಪ

08/12/2025 3:29 PM

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್

08/12/2025 3:23 PM

ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ, ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಸುರೇಶ್ ವ್ಯಂಗ್ಯ

08/12/2025 3:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್
KARNATAKA

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್

By kannadanewsnow0908/12/2025 3:23 PM

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವರು; ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು.

ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ನಾನು ಕೊಟ್ಟಿದ್ದನ್ನು ಹೇಳುತ್ತೇನೆ. ಸಿದ್ದರಾಮಯ್ಯ ಅವರೇ.. ನೀವು ರೈತರಿಗೆ ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಹೇಳಿ. ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ಹಿಂದಿನ ಐದು ವರ್ಷ ಆಡಳಿತದಲ್ಲಿ 200ಕ್ಕೂ ಹೆಚ್ಚು ರೈತರು ಮಂಡ್ಯದಲ್ಲಿ ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದೇ ನಿಮ್ಮ ಕೊಡುಗೆ. ಅಂಥ ಕಷ್ಟಕಾಲದಲ್ಲಿ ನಾನು ಅಧಿಕಾರಕ್ಕೆ ಬಂದ ಮೇಲೆ ಅದೇ ಜಿಲ್ಲೆಯ ರೈತರ 900 ಕೋಟಿ ಸಾಲ ಮನ್ನಾ ಮಾಡಿದೆ. ಇದಕ್ಕಿಂತ ಕೊಡುಗೆ ಬೇಕಾ? ನಿಮ್ಮ ಕಾಲದಲ್ಲಿ ರೈತರ ಜೀವ ಹೋಯಿತು, ನನ್ನ ಕಾಲದಲ್ಲಿ ಜೀವ ಉಳಿಯಿತು. ಇದು ನಿಮಗೆ ಗೊತ್ತಿರಲಿ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ರೈತರ ಪರಿಸ್ಥಿತಿ ಎಲ್ಲಿಗೆ ಬಂದಿದೆ ಎಂಬುದನ್ನು ನೋಡಿ. ಪ್ರವಾಹ, ಮಳೆಯಲ್ಲಿ ಜನ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದರೆ ನೀವು ಮೋಜು ಮಸ್ತಿ ಮಾಡುತ್ತಿದ್ದೀರಿ. ಕಲ್ಯಾಣ ಕರ್ನಾಟಕದಲ್ಲಿ ತೊಗರಿ ಬೆಳೆಗಾರರ ಪರಿಸ್ಥಿತಿ ಏನಾಗಿದೆ? ತೊಗರಿ ದರ ಕುಸಿದಿದೆ. ಅದಕ್ಕೆ ಏನು ಮಾಡಿದ್ದೀರಿ? ಈವರೆಗೆ ತೊಗರಿ ಖರೀದಿ ಕೇಂದ್ರಗಳನ್ನು ತೆರೆದಿಲ್ಲ. ಸರಿಯಾದ ಸಮಯದಲ್ಲಿ ರಾಜ್ಯ ಸರಕಾರ ಮಧ್ಯಪ್ರವೇಶ ಮಾಡಿ ರೈತರ ನೆರವಿಗೆ ಬರಬೇಕಿತ್ತು, ಬಂದಿಲ್ಲ ಯಾಕೆ? ಕೇಂದ್ರ ಸರಕಾರ ರಾಜ್ಯಕ್ಕೆ ಪರಿಶೀಲನಾ ತಂಡ ಕಳುಹಿಸಿ ಎನ್ನುತ್ತಾರೆ. ನಾಲ್ಕು ತಿಂಗಳ ಬಳಿಕ ಇವರಿಗೆ ಜ್ಞಾನೋದಯ ಆಗಿದೆ. ಈಗ ಕೇಂದ್ರ ತಂಡ ರಾಜ್ಯಕ್ಕೆ ಬಂದರೆ ಏನು ವರದಿ ಕೊಡುತ್ತಾರೆ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ನೀರಿನ ಹೆಜ್ಜೆ; ಅದು ಕಟ್ ಅಂಡ್ ಪೇಸ್ಟ್!:

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ʼನೀರಿನ ಹೆಜ್ಜೆʼ ಪುಸ್ತಕದ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಯಾರೋ ಬರೆದಿರುವ ಆ ಪುಸ್ತಕ ಕೇವಲ ಕಟ್ ಅಂಡ್ ಪೇಸ್ಟ್ ಅಷ್ಟೇ. ಬೇರೆ ಯಾವುದೋ ಪುಸ್ತಕದಲ್ಲಿ ಬರೆದಿರುವುದನ್ನೇ ಕತ್ತರಿಸಿ ಈ ಪುಸ್ತಕದಲ್ಲಿ ಅಂಟಿಸಿದ್ದಾರೆ! ನನಗೆ ಈ ಪುಸ್ತಕವನ್ನು ಯಾರೋ ತಂದುಕೊಟ್ಟರು. ಸಾಮಾನ್ಯವಾಗಿ ಯಾವುದೇ ಪುಸ್ತಕವಾದರೂ ಅದನ್ನು ಆಸಕ್ತಿಯಿಂದ ಓದುತ್ತೇನೆ. ಆದರೆ, ಈ ಪುಸ್ತಕ ನೋಡಿದಾಗ ಇಲ್ಲಿರುವುದು ಅವರ ಹೆಜ್ಜೆಗಳಲ್ಲ, ಯಾರದೋ ಹೆಜ್ಜೆಗಳನ್ನು ನನ್ನ ಹೆಜ್ಜೆಗಳು ಎಂದು ತೋರಿಸುವ ಕಸರತ್ತು ಮಾಡಿದ್ದಾರೆ ಎಂದು ಹೇಳಿದರು.

ಮೇಕೆದಾಟು: ತಮಿಳುನಾಡು ಜತೆ ಮಾತಾಡಲಿ

ಮೇಕೆದಾಟು ಯೋಜನೆ ಬಗ್ಗೆ ಜನರನ್ನು ಯಾಮಾರಿಸುವುದಕ್ಕೆ ನಮ್ಮ ನೀರು- ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡಿದರು. ಆ ಹೆಸರಿನಲ್ಲಿ ಅವರು ಅಧಿಕಾರಕ್ಕೆ ಬಂದರು. ಮೇಕೆದಾಟು ಮಾತ್ರ ಇದ್ದಲ್ಲಿಯೇ ಇದೆ. ಸುಪ್ರೀಂ ಕೋರ್ಟ್ ಕೇಂದ್ರಿಯ ಜಲ ಆಯೋಗದ (CWC) ಹೋಗಿ ವಾದ ಮಂಡಿಸಿ ಎಂದು ಹೇಳಿದ್ದಾರೆ. ತಮಿಳುನಾಡಿನಲ್ಲಿ ಅಧಿಕಾರ ನಡೆಸುತ್ತಿರುವವರು ಇವರು ರಾಜಕೀಯ ಪಾರ್ಟನರ್ʼಗಳೇ ಆಗಿದ್ದಾರೆ. ಇವರು ಹೋಗಿ ಕುಳಿತು ಮಾತನಾಡಬೇಲ್ಲವೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಮೇಕೆದಾಟು ಪ್ರದೇಶದಲ್ಲಿ ಸುಮಾರು 12 ಸಾವಿರ ಎಕರೆಯಷ್ಟು ಅರಣ್ಯ ಮುಳಗಡೆ ಆಗುತ್ತದೆ. ವನ್ಯ ಸಂಪತ್ತು ನಾಶವಾಗುತ್ತದೆ ಎಂದು ಹೇಳುತ್ತಿದ್ದಾರೆ. ಬರೀ ಕೇಂದ್ರ ಸರಕಾರದ ಅಧಿಕಾರ ಮಾತ್ರವಲ್ಲ, ರಾಜ್ಯ ಸರಕಾರಕ್ಕೂ ಹಕ್ಕು, ಜವಾಬ್ದಾರಿ ಇರುತ್ತದೆ. ಪಲಾಯನ ಮಾಡುವ ಅಗತ್ಯವಿಲ್ಲ, ಇನ್ನೆಷ್ಟು ದಿನ ನುಣುಚಿಕೊಳ್ಳುತ್ತೀರಿ? ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷಗಳು ಮೀರಿದೆ. ಅದರಲ್ಲಿ 50 ವರ್ಷಕಾಲ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವೇ ಆಡಳಿತ ನಡೆಸಿದೆ. ಆಗ ಮೇಕೆದಾಟು ಬಗ್ಗೆ ಏನು ಮಾಡಿದಿರಿ ಎಂದು ಜನರಿಗೆ ಹೇಳಬೇಕಲ್ಲವೇ? ಎಂದು ರಾಜ್ಯ ಸರಕಾರವನ್ನು ಕೇಂದ್ರ ಸಚಿವರು ಪ್ರಶ್ನಿಸಿದರು.

ಮಾತೆತ್ತಿದರೆ ರಾಜ್ಯಕ್ಕೆ ಕೇಂದ್ರ ಸರಕಾರ ಸಹಕಾರ ನೀಡುತ್ತಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಹಾಗಾದರೆ ರಾಜ್ಯ ಸರಕಾರ ಮಾಡುತ್ತಿರುವುದೇನು? ನಾನು ಕೇಂದ್ರ ಸಚಿವನಾದ ಕೂಡಲೇ ರಾಜ್ಯಕ್ಕೆ ಒಳ್ಳೆಯದಾಗಲಿ ಎಂದು ಕುದುರೆಮುಖ ಉಕ್ಕು ಮತ್ತು ಕಬ್ಬಿಣ ಕಾರ್ಖಾನೆಯ ದೇವದಾರಿ ಗಣಿ ಯೋಜನೆಗೆ ಹಣಕಾಸು ಖಾತರಿ ನೀಡುವ ಕಡತಕ್ಕೆ ಸಹಿ ಹಾಕಿದೆ. ಮರು ದಿನದಿಂದಲೇ ಅದಕ್ಕೆ ಅಡ್ಡಿ ಉಂಟು ಮಾಡುವ ಕೆಲಸಕ್ಕೆ ರಾಜ್ಯ ಸರಕಾರ ಮುಂದಾಯಿತು. ಈಗ ಅವರ ಪಕ್ಷದ ಜನಪ್ರತಿನಿಧಿ ಒಬ್ಬರು ಬಳ್ಳಾರಿಯಲ್ಲಿ ದಿನನಿತ್ಯ ಪ್ರತಿಭಟನೆ ಮಾಡಿಸುವ, ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ತಮಗೆ ವೈಯಕ್ತಿಕವಾಗಿ ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ (ಎನ್ಎಂಡಿಸಿ) ದಿಂದ ಲಾಭವಾಗುವ ಕೆಲಸ ಆಗಲಿಲ್ಲ ಎಂದು ಯೋಜನೆ ಅಡ್ಡಿಪಡಿಸುತ್ತಿದ್ದಾರೆ. ಹೀಗಾದರೆ ರಾಜ್ಯದ ಅಭಿವೃದ್ಧಿ ಸಾಧ್ಯವೇ? ಸಹಕಾರ ಪಡೆಯುವುದು, ಕೊಡುವುದು ಎಂದರೆ ಹೀಗೇನಾ? ಎಂದು ಸಚಿವ ಕುಮಾರಸ್ವಾಮಿ ಅವರು ಖಾರವಾಗಿ ಪ್ರಶ್ನಿಸಿದರು.

ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ, ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಸುರೇಶ್ ವ್ಯಂಗ್ಯ

ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

Share. Facebook Twitter LinkedIn WhatsApp Email

Related Posts

ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಿಎಂ ಸಿದ್ಧರಾಮಯ್ಯ ಸಂತಾಪ

08/12/2025 3:29 PM5 Mins Read

ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ, ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಸುರೇಶ್ ವ್ಯಂಗ್ಯ

08/12/2025 3:19 PM2 Mins Read

KEA ವಿವಿಧ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಅರ್ಜಿ ಶುಲ್ಕ ನಿಗದಿ: ಸಚಿವ ಡಾ.ಎಂ.ಸಿ.ಸುಧಾಕರ

08/12/2025 3:09 PM2 Mins Read
Recent News

ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಿಎಂ ಸಿದ್ಧರಾಮಯ್ಯ ಸಂತಾಪ

08/12/2025 3:29 PM

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್

08/12/2025 3:23 PM

ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ, ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಸುರೇಶ್ ವ್ಯಂಗ್ಯ

08/12/2025 3:19 PM

BREAKING : ಭಾರತದಲ್ಲಿ ‘ಸ್ಟಾರ್ ಲಿಂಕ್’ ರೀಚಾರ್ಜ್ ಪ್ಲಾನ್ ಬೆಲೆ ಬಹಿರಂಗ ; ತಿಂಗಳಿಗೆ ಎಷ್ಟು ಗೊತ್ತಾ.?

08/12/2025 3:14 PM
State News
KARNATAKA

ಬೆಳಗಾವಿಯ ವಿಧಾನಮಂಡಲದ ಅಧಿವೇಶನದಲ್ಲಿ ಅಗಲಿದ ಗಣ್ಯರಿಗೆ ಸಿಎಂ ಸಿದ್ಧರಾಮಯ್ಯ ಸಂತಾಪ

By kannadanewsnow0908/12/2025 3:29 PM KARNATAKA 5 Mins Read

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಮಾಜಿ ಸಚಿವರು, ಹಾಲಿ…

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂಗೆ HDK ಸವಾಲ್

08/12/2025 3:23 PM

ಬಿಜೆಪಿ ಬತ್ತಳಿಕೆಯಲ್ಲಿ ಬಾಣವೇ ಇಲ್ಲ, ಅವಿಶ್ವಾಸ ನಿರ್ಣಯಕ್ಕೆ ಸೋಲು ಖಚಿತ: ಸಚಿವ ಸುರೇಶ್ ವ್ಯಂಗ್ಯ

08/12/2025 3:19 PM

KEA ವಿವಿಧ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಗೆ ಹೊರೆಯಾಗದಂತೆ ಅರ್ಜಿ ಶುಲ್ಕ ನಿಗದಿ: ಸಚಿವ ಡಾ.ಎಂ.ಸಿ.ಸುಧಾಕರ

08/12/2025 3:09 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.