ಬೆಂಗಳೂರು : ರಾಜ್ಯದ ಜೈಲುಗಳಲ್ಲಿನ ಅಕ್ರಮಗಳಿಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ. ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಮುಂಬಡ್ತಿ ನೀಡಲಾಗಿದ್ದು, ತಕ್ಷಣವೇ ಕಾರಾಗೃಹ ಮತ್ತು ಸುಧಾರಣಾ ಇಲಾಖೆಯ ಡಿಜಿಪಿಯಾಗಿ ನೇಮಕಗೊಳಿಸಲಾಗಿದೆ. ಈ ಹಿಂದೆ ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ.ದಯಾನಂದ್ ಅವರನ್ನು ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಇತ್ತೀಚೆಗೆ, ಪರಪ್ಪನ ಅಗ್ರಹಾರ ಕಾರಾಗೃಹದೊಳಗೆ ಮಾದಕ ವಸ್ತು ಹಾಗೂ ಸಿಗರೇಟ್ ಪ್ಯಾಕ್ಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಜೈಲಿನ ವಾರ್ಡನ್ನನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSESF) ಅಧಿಕಾರಿಗಳು ವಶಕ್ಕೆ ಪಡೆದು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಗೆ ಒಪ್ಪಿಸಿದ್ದರು.








