Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ಧರಾಮಯ್ಯ

19/12/2025 3:26 PM

‘ಹಕ್ಕು ಪಡೆಯಲು ಮದುವೆ ಅನಿವಾರ್ಯವಲ್ಲ’ ; ಲಿವ್-ಇನ್ ಜೋಡಿಗಳಿಗೆ ರಕ್ಷಣೆ ನೀಡುವಂತೆ ಹೈಕೋರ್ಟ್ ಆದೇಶ

19/12/2025 3:23 PM

ಸಚಿವ ಮಹದೇವಪ್ಪ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ: ಯಾಕೆ ಗೊತ್ತಾ?

19/12/2025 3:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಚಿವ ಮಹದೇವಪ್ಪ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ: ಯಾಕೆ ಗೊತ್ತಾ?
KARNATAKA

ಸಚಿವ ಮಹದೇವಪ್ಪ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ: ಯಾಕೆ ಗೊತ್ತಾ?

By kannadanewsnow0919/12/2025 3:19 PM

ಬೆಳಗಾವಿ: ದಲಿತರ ಉದ್ಧಾರ ಮಾಡದೇ ವಂಚನೆಗೆ ಕಾರಣರಾದ ಸಚಿವ ಮಹದೇವಪ್ಪ ಅವರು ತಕ್ಷಣ ರಾಜೀನಾಮೆ ಕೊಡಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಮಾಧ್ಯಮಗೋಷ್ಠಿಯಲ್ಲಿ ಇಂದು ಇಲ್ಲಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಅವರು ದಲಿತ ವಿರೋಧಿ ಎಂದು ಆಕ್ಷೇಪಿಸಿದರು. ಇವರು ಕೇವಲ ತಮ್ಮ ಬಾಸ್‍ಗಳನ್ನು ಓಲೈಕೆ ಮಾಡಿಕೊಂಡು ಲೂಟಿ ಮಾಡಿ, ಇವರ ಕುಟುಂಬಗಳನ್ನು ಉದ್ಧಾರ ಮಾಡುತ್ತಿದ್ದಾರೆ; ಸಮುದಾಯಗಳ ಉದ್ಧಾರ ಇವರಿಂದ ಆಗುತ್ತಿಲ್ಲ ಎಂದು ಟೀಕಿಸಿದರು.

ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುವ ರೀತಿಯಲ್ಲಿ ನೀವು ಇವತ್ತು ಅಧಿಕಾರ ನಡೆಸುತ್ತಿದ್ದೀರಿ ಎಂದು ಆರೋಪಿಸಿದರು. ಡಾ. ಅಂಬೇಡ್ಕರ್ ಅವರು ಬದುಕಿದ್ದರೆ ಇಂಥವರನ್ನು ಎಲ್ಲಿಡಬೇಕೋ ಅಲ್ಲಿ ಇಡುತ್ತಿದ್ದರು ಎಂದು ತಿಳಿಸಿದರು. ಇವರು ದಲಿತರ ಸರ್ವನಾಶ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು. ಎಸ್‍ಇಪಿ, ಟಿಎಸ್‍ಪಿ ಹಣದ ಲೂಟಿ, ಜನರಿಗೆ ವಂಚನೆ ಕಾರ್ಯ ನಡೆಯುತ್ತಿದೆ. ಅವರಿಗೆ ಏನೂ ಸಿಗದಂತೆ ಮಾಡುತ್ತಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಒಳ ಮೀಸಲಾತಿಯಲ್ಲೂ ಸಂಪೂರ್ಣ ತಾರತಮ್ಯ

ಒಳ ಮೀಸಲಾತಿಯಲ್ಲೂ ಸಂಪೂರ್ಣ ತಾರತಮ್ಯ ಮಾಡಲಾಗಿದೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಯಾರಿಗೂ ನೆಮ್ಮದಿ ಇಲ್ಲದಂತೆ ಮಾಡಿದ್ದಾರೆ. ಈ ಕುರಿತ ಮಸೂದೆ ಬರಲಿದೆ ಎಂದು ತಿಳಿಸಿದರು.

ಎಸ್‍ಇಪಿ, ಟಿಎಸ್‍ಪಿ ಹಣವನ್ನು ಅನ್ಯಕಾರ್ಯಗಳಿಗೆ ಬಳಸಿ ಪರಿಶಿಷ್ಟ ಜಾತಿ, ವರ್ಗ- ದಲಿತ ಸಮುದಾಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ; ಸರಕಾರದ ಈ ಕ್ರಮ ಖಂಡನೀಯ ಎಂದು ತಿಳಿಸಿದರು. ಸಚಿವ ಮಹದೇವಪ್ಪ ಅವರು ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು.

ಈ ವರ್ಷದಲ್ಲಿ ಪರಿಶಿಷ್ಟ ಜಾತಿಗಳ ಶ್ರೇಯೋಭಿವೃದ್ಧಿಗೆ 42 ಸಾವಿರ ಕೋಟಿ ಎಸ್‍ಇಪಿ, ಟಿಎಸ್‍ಪಿ ಮೊತ್ತವನ್ನು ಮೀಸಲಿಟ್ಟಿದ್ದೇವೆ ಎಂದು ಹೇಳುತ್ತಾರೆ. ಇದುವರೆಗೆ ಈ 3 ವರ್ಷಗಳಲ್ಲಿ 39 ಸಾವಿರ ಕೋಟಿ ರೂಪಾಯಿಯನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ. ಎಸ್‍ಇಪಿ, ಟಿಎಸ್‍ಪಿ ಹಣ ದಲಿತರ ಶ್ರೇಯೋಭಿವೃದ್ಧಿಗಾಗಿ ಇದೆ. ಮನೆ ಕಟ್ಟಿ ಕೊಡುವುದು, ಯುವಕರಿಗೆ ಕಾರು ಖರೀದಿಸಿ ಕೊಟ್ಟು ಸ್ವಂತ ಉದ್ಯೋಗಕ್ಕೆ ಪ್ರೋತ್ಸಾಹ, ವ್ಯಾಪಾರಕ್ಕೆ ಸಾಲ ಸಹಾಯ, ಗಂಗಾ ಕಲ್ಯಾಣ ಅನುಷ್ಠಾನ, ಅವರ ಮನೆಗೆ ರಸ್ತೆಯಂಥ ಚಟುವಟಿಕೆ ಮಾಡಬೇಕಿತ್ತು. ಗ್ಯಾರಂಟಿ ಕೊಡುವಾಗ ನನಗೂ ಫ್ರೀ, ನಿನಗೂ ಫ್ರೀ ಎಂದರು ಎಂದು ದೂರಿದರು.

ಆದರೆ, ಇಲ್ಲಿ ಮಾಡಿದ್ದೇನು? ಎಲ್ಲರಿಗೂ ಖಜಾನೆ ಹಣ ಕೊಟ್ಟು, ದಲಿತರಿಗೆ ಅನ್ಯಾಯ, ಮೋಸ ಮಾಡಿ, ಎಸ್‍ಇಪಿ, ಟಿಎಸ್‍ಪಿ ಹಣವನ್ನು ಇದೇ ಗ್ಯಾರಂಟಿ ಹಣ ಎಂದು ಕೊಡಲಾಗಿದೆ ಎಂದು ಟೀಕಿಸಿದರು. ಸರಕಾರವು ಗ್ಯಾರಂಟಿ ಯೋಜನೆ ತಾರದೇ ಇದ್ದರೆ 42 ಸಾವಿರ ಕೋಟಿಯನ್ನು ಯಾರಿಗೆ ಕೊಡುತ್ತಿದ್ದರು? ದಲಿತ ಸಮುದಾಯದ ಅಭಿವೃದ್ಧಿಗೇ ಅದು ಹೋಗುತ್ತಿತ್ತು. ಗ್ಯಾರಂಟಿಗೆ ದಲಿತರಿಗೆ ಖಜಾನೆ ಹಣ ಕೊಡದೇ ಇರುವುದು ಮೋಸವಲ್ಲವೇ ಎಂದು ಕೇಳಿದರು. ಆದರೆ, ಇದು ದಲಿತ ಸಮುದಾಯಗಳಿಗೆ ಅರ್ಥ ಆಗಿಲ್ಲ ಎಂದು ನುಡಿದರು.

ಕೆಲವು ದಲಿತ ಸಂಘಟನೆಗಳ ಮೂಗಿಗೆ ತುಪ್ಪ ಸವರಿದ ಕಾಂಗ್ರೆಸ್

ಅನೇಕ ದಲಿತ ಸಂಘಟನೆಗಳಿವೆ. ದಲಿತರಿಗೆ ಅನ್ಯಾಯ ಆದಾಗ ಅವು ಹೊರಕ್ಕೆ ಬಂದು ಹೋರಾಟ ಮಾಡುತ್ತವೆ. ಈಚೆಗೆ ಕೆಲವು ಸಂಘಟನೆಗಳು ಕಾಂಗ್ರೆಸ್ ಜೊತೆ ಮಾರಾಟ ಆಗಿ ಹೋಗಿವೆ ಎಂದು ಎಂದು ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.

ಎಲ್ಲ ಸಂಘಟನೆಗಳು ಎಂದು ನಾನು ಹೇಳಿಲ್ಲ; ಮಾರಾಟ ಆದ ಕಾರಣದಿಂದ ಅವರು ಏನೇ ಆದರೂ ಕಾಂಗ್ರೆಸ್ ಜೊತೆ ಉಳಿಯುತ್ತಾರೆ. ಹೊರತು ಹೊರಗಡೆ ಬಂದಿಲ್ಲ. ಕಾಂಗ್ರೆಸ್ ಪಕ್ಷವು ಅವರ ಮೂಗಿಗೆ ತುಪ್ಪ ಸವರಿದೆ ಎಂದು ಆರೋಪಿಸಿದರು.

ವಿಧಾನಪರಿಷತ್ ಸದಸ್ಯರಾದ ಹೇಮಲತಾ ನಾಯಕ್, ಎಸ್. ಕೇಶವ್ ಪ್ರಸಾದ್ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮಂಡ್ಯದಲ್ಲಿ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

BIG NEWS : ರಾಜ್ಯದ ಜನತೆಯ ಗಮನಕ್ಕೆ : ಕರ್ನಾಟಕ ಸರ್ಕಾರದ ವಿವಿಧ ನಿಗಮಗಳಿಂದ ಸಿಗುವ ಯೋಜನೆಗಳ ಕುರಿತು ಇಲ್ಲಿದೆ ಮಾಹಿತಿ

Share. Facebook Twitter LinkedIn WhatsApp Email

Related Posts

‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ಧರಾಮಯ್ಯ

19/12/2025 3:26 PM2 Mins Read

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮನವಿ

19/12/2025 2:38 PM2 Mins Read

ಮಂಡ್ಯದಲ್ಲಿ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

19/12/2025 2:34 PM1 Min Read
Recent News

‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ಧರಾಮಯ್ಯ

19/12/2025 3:26 PM

‘ಹಕ್ಕು ಪಡೆಯಲು ಮದುವೆ ಅನಿವಾರ್ಯವಲ್ಲ’ ; ಲಿವ್-ಇನ್ ಜೋಡಿಗಳಿಗೆ ರಕ್ಷಣೆ ನೀಡುವಂತೆ ಹೈಕೋರ್ಟ್ ಆದೇಶ

19/12/2025 3:23 PM

ಸಚಿವ ಮಹದೇವಪ್ಪ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ: ಯಾಕೆ ಗೊತ್ತಾ?

19/12/2025 3:19 PM

“ಅದು ಡೀಪ್ಫೇಕ್ ವಿಡಿಯೋ ನಂಬಬೇಡಿ” ; ವೈರಲ್ ವಿಡಿಯೋ ಕುರಿತು ‘ಸುಧಾ ಮೂರ್ತಿ’ ಸ್ಪಷ್ಟನೆ

19/12/2025 3:06 PM
State News
KARNATAKA

‘ಆರೋಗ್ಯ ಸೇತು ಸಂಚಾರಿ ಆರೋಗ್ಯ ಘಟಕ’ ವಾಹನಗಳನ್ನು ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ಧರಾಮಯ್ಯ

By kannadanewsnow0919/12/2025 3:26 PM KARNATAKA 2 Mins Read

ಬೆಳಗಾವಿ ಸುವರ್ಣಸೌಧ: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು,  ಸುವರ್ಣ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂದೆ “ಆರೋಗ್ಯ ಸೇತು  ಸಂಚಾರಿ ಆರೋಗ್ಯ…

ಸಚಿವ ಮಹದೇವಪ್ಪ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ: ಯಾಕೆ ಗೊತ್ತಾ?

19/12/2025 3:19 PM

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮನವಿ

19/12/2025 2:38 PM

ಮಂಡ್ಯದಲ್ಲಿ ರೈಲ್ವೆ ಇಲಾಖೆಯ ಪರೀಕ್ಷೆಗಳಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

19/12/2025 2:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.