ಚಿಕ್ಕಮಗಳೂರು : ನಿಯಂತ್ರಣ ತಪ್ಪಿ ಗದ್ದೆಗೆ ಕಾರು ಬಿದ್ದಿದೆ. ಪರಿಣಾಮ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಮಂಗಳೂರು ತಾಲೂಕಿನ ಮುಕ್ತಿ ಹಳ್ಳಿ ಸಮೀಪ ಈ ಒಂದು ಅಪಘಾತ ಸಂಭವಿಸಿದೆ.ಖಾಸಗಿ ಕಾಲೇಜು ವಿದ್ಯಾರ್ಥಿಯಾದ ಮೋಹಿನ್ (19) ಸ್ಥಳದಲ್ಲೆ ಸಾವನಪ್ಪಿದ್ದಾನೆ.
ಅತೀ ವೇಗದ ಚಾಲನೆಯಿಂದ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಘಟನೆಯಲ್ಲೂ ಆರು ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿವೆ ತಕ್ಷಣ ಗಾಯಗೊಂಡ ವಿದ್ಯಾರ್ಥಿಗಳನ್ನು ನೀಡಲಾಗುತ್ತಿದೆ ಸ್ನೇಹಿತರ ಜೊತೆ ಕಾರಿನಲ್ಲಿ ಮೋಹಿನ್ ಕೊಟ್ಟಿಗೆಹಾರಕ್ಕೆ ತೆರಳಿದ್ದ. ಈ ವೇಳೆ ನಿಯಂತ್ರಣ ಕಳೆದುಕೊಂಡು ಕಾರು ಗದ್ದೆಗೆ ಬಿದ್ದಿದೆ. ಪರಿಣಾಮ ಸ್ಥಳದಲ್ಲಿ ಮೋಹಿನ್ ಸಾವನಪ್ಪಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








