Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶುಕ್ರವಾರದಂದು ಕುಬೇರನ ಈ ಮಂತ್ರ ಪಠಿಸಿ, ನಿಮ್ಮ ಎಲ್ಲಾ ಕಷ್ಟ, ಸಮಸ್ಯೆಗಳು ಪರಿಹಾರ

25/12/2025 8:09 PM

ಜನರಿಂದ ಚಪ್ಪಲಿಯಲ್ಲಿ ಹೊಡೆಸುವೆ: ಮತ್ತೆ ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟ ಶಾಸಕ ಬಾಲಕೃಷ್ಣ

25/12/2025 8:06 PM

BREAKING : ತಾಂಜಾನಿಯಾದಲ್ಲಿ ಹೆಲಿಕಾಪ್ಟರ್ ಪತನ ; ಐವರು ಸಾವು |Helicopter Crash

25/12/2025 8:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನರಿಂದ ಚಪ್ಪಲಿಯಲ್ಲಿ ಹೊಡೆಸುವೆ: ಮತ್ತೆ ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟ ಶಾಸಕ ಬಾಲಕೃಷ್ಣ
KARNATAKA

ಜನರಿಂದ ಚಪ್ಪಲಿಯಲ್ಲಿ ಹೊಡೆಸುವೆ: ಮತ್ತೆ ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟ ಶಾಸಕ ಬಾಲಕೃಷ್ಣ

By kannadanewsnow0925/12/2025 8:06 PM

ರಾಮನಗರ: ಸರಿಯಾಗಿ ಕೆಲಸ ಮಾಡದೇ ಇದ್ದರೇ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗೋದಿಲ್ಲ ನಿಮಗೆ? ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ? ಕಿರಿಯ ವಯಸ್ಸಿನ ಯುವ ಅಧಿಕಾರಿಗಳಾದ ನೀವು ಹೇಗಿರಬೇಕೆಂದು ಗೊತ್ತಿಲ್ಲ ಅಂತ ಮಾಗಡಿ ತಹಶೀಲ್ದಾರರಿಗೆ ಶಾಸಕ ಬಾಲಕೃಷ್ಣ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಮನಗರ ಜಿಲ್ಲೆಯ ಮಾಗಡಿ ತಾಲ್ಲೂಕಿನ ಪಂಚಾಯ್ತಿಯಲ್ಲಿ ಬುಧವಾರ ಸಂಜೆ ನಡೆದಂತ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ತಹಶೀಲ್ದಾರ್ ಡಿ.ಪಿ ಶರತ್ ಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಶಾಸಕ ಹೆಚ್.ಸಿ ಬಾಲಕೃಷ್ಣ ಅವರು ಜನರ ಎದುರೇ ಮಾಗಡಿ ತಹಶೀಲ್ದಾರರಿಗೆ ನಿಂದಿಸಿದಂತ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ದೂರುದಾರರೊಬ್ಬರು ತಮ್ಮ ಕೆಲಸದ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿರೋದನ್ನು ಶಾಸಕ ಹೆಚ್.ಸಿ ಬಾಲಕೃಷ್ಣ ಅವರ ಗಮನಕ್ಕೆ ತಂದರು. ಈ ವೇಳೆ ಆಕ್ರೋಶಗೊಂಡ ಅವರು, ಶಾಸಕನಾಗಿರುವ ನಿನ್ನ ಕೈಯಲ್ಲಿ ಕೆಲಸ ಮಾಡಿಸಲು ಆಗುತ್ತಿಲ್ಲ ಎಂಬುದಾಗಿ ಜನ ನನಗೂ ಚಪ್ಪಲಿಯಲ್ಲಿ ಹೊಡೆಯುತ್ತಾರೆ. ಆಮೇಲೆ ನಿನಗೂ ಹೊಡೆಯುತ್ತಾರೆ ಎಂಬುದಾಗಿ ಪಕ್ಕದಲ್ಲೇ ಇದ್ದಂತ ತಹಶೀಲ್ದಾರ್ ಡಿ.ಪಿ ಶರತ್ ಕುಮಾರ್ ಕಡೆಗೆ ಕೈತೋರಿಸಿ ತರಾಟೆಗೆ ತೆಗೆದುಕೊಂಡಿದ್ದಾಗಿ ತಿಳಿದು ಬಂದಿದೆ.

ಮಾಗಡಿಯ ತಾಲ್ಲೂಕು ಕಚೇರಿಯಲ್ಲಿ ದೂರು ಸ್ವೀಕರಿಸುವ ಬಾಕ್ಸ್ ಇಡೋಣ. ತಿಂಗಳಿಗೊಮ್ಮೆ ಅದನ್ನು ತೆರೆಯೋಣ. ಆಗ ಉಪ ವಿಭಾಗಾಧಿಕಾರಿಯನ್ನು ಕರೆಸುತ್ತೇನೆ. ಜನರ ದೂರುಗಳೇನು, ಯಾವ ಅಧಿಕಾರಿ ಕೆಲಸ ಮಾಡಿಲ್ಲ ಎಂದು ಅವನ ಹೆಸರು ಬರೆದು ಹಾಕಿ. ಕೆಲಸ ಮಾಡದಿರುವ ಬಗ್ಗೆ ಸಭೆಯಲ್ಲಿ ಜನರಿಗೆ ನೀವು ಉತ್ತರ ಹೇಳಿ. ಇಲ್ಲವಾದರೆ ಜನ ನಿನಗೆ ಚಪ್ಪಲಿಯಲ್ಲಿ ಹೊಡೆಯುತ್ತಾರೆ. ಇಲ್ಲವಾದರೆ, ನನಗೆ ಹೊಡೆಯುತ್ತಾರೆ ಎಂದು ಕಿಡಿಕಾರಿದರು.

ಕೆಲಸ ಮಾಡದ ನಿನಗೆ ಹೊಡೆಯದೆ ಮುತ್ತಿಕ್ಕುತ್ತಾರಾ? ನಾಚಿಗೆ ಆಗಲ್ವಾ ನಿನಗೆ. ನಿಮ್ಮ ಮನೆ ಸಮಸ್ಯೆಯಾಗಿದ್ದರೆ ಸುಮ್ಮನಿರುತ್ತಿದ್ರಾ? ತಹಶೀಲ್ದಾರ್ ಆದವರು ಒಳ್ಳೆಯ ಕೆಲಸ ಮಾಡಿ ಶಾಸಕರೂ ಆಗಿದ್ದಾರೆ. ಕೋಲಾರದಲ್ಲಿ ಜಿಲ್ಲಾಧಿಕಾರಿಯಾಗಿದ್ದ ಡಿ.ಕೆ. ರವಿ ಮೃತಪಟ್ಟಾಗ ಜನ ಅತ್ತರು. ನೀವು ಸತ್ತಾಗ ಜನ ಅಳುತ್ತಾರಾ? ತೊಲಗಿದ ಬಿಡಿ ಎನ್ನುತ್ತಾರೆ ಎಂದು ಗುಡುಗಿದರು.

BREAKING: ತಾಂಜಾನಿಯಾದಲ್ಲಿ ಹೆಲಿಕಾಪ್ಟರ್ ಪತನಗೊಂಡು ಐವರು ಸಾವು

Share. Facebook Twitter LinkedIn WhatsApp Email

Related Posts

ಶುಕ್ರವಾರದಂದು ಕುಬೇರನ ಈ ಮಂತ್ರ ಪಠಿಸಿ, ನಿಮ್ಮ ಎಲ್ಲಾ ಕಷ್ಟ, ಸಮಸ್ಯೆಗಳು ಪರಿಹಾರ

25/12/2025 8:09 PM3 Mins Read

BREAKING: ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರ ಜೀಪ್ ಪಲ್ಟಿಯಾಗಿ ಭೀಕರ ಅಪಘಾತ: 7 ಮಂದಿಗೆ ಗಂಭೀರ ಗಾಯ

25/12/2025 7:57 PM1 Min Read

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸರ್ಕಾರ

25/12/2025 7:48 PM1 Min Read
Recent News

ಶುಕ್ರವಾರದಂದು ಕುಬೇರನ ಈ ಮಂತ್ರ ಪಠಿಸಿ, ನಿಮ್ಮ ಎಲ್ಲಾ ಕಷ್ಟ, ಸಮಸ್ಯೆಗಳು ಪರಿಹಾರ

25/12/2025 8:09 PM

ಜನರಿಂದ ಚಪ್ಪಲಿಯಲ್ಲಿ ಹೊಡೆಸುವೆ: ಮತ್ತೆ ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟ ಶಾಸಕ ಬಾಲಕೃಷ್ಣ

25/12/2025 8:06 PM

BREAKING : ತಾಂಜಾನಿಯಾದಲ್ಲಿ ಹೆಲಿಕಾಪ್ಟರ್ ಪತನ ; ಐವರು ಸಾವು |Helicopter Crash

25/12/2025 8:01 PM

BREAKING: ತಾಂಜಾನಿಯಾದಲ್ಲಿ ಹೆಲಿಕಾಪ್ಟರ್ ಪತನಗೊಂಡು ಐವರು ಸಾವು

25/12/2025 7:59 PM
State News
KARNATAKA

ಶುಕ್ರವಾರದಂದು ಕುಬೇರನ ಈ ಮಂತ್ರ ಪಠಿಸಿ, ನಿಮ್ಮ ಎಲ್ಲಾ ಕಷ್ಟ, ಸಮಸ್ಯೆಗಳು ಪರಿಹಾರ

By kannadanewsnow0925/12/2025 8:09 PM KARNATAKA 3 Mins Read

ಮಾರ್ವಾಡಿಗಳು ಈ ಲಕ್ಷ್ಮೀ ಕುಬೇರ ಪೂಜೆಯನ್ನು ಬಹಳ ವಿಮರ್ಶಾತ್ಮಕವಾಗಿ ನೆರವೇರಿಸುತ್ತಾರೆ. ನಮ್ಮ ಮನೆಯಲ್ಲಿ ಲಕ್ಷ್ಮೀ ಕುಬೇರ ಪೂಜೆಯನ್ನು ಅತ್ಯಂತ ವಿಮರ್ಶಾತ್ಮಕವಾಗಿ ಮಾಡುವುದಾಗಲಿ ಅಥವಾ…

ಜನರಿಂದ ಚಪ್ಪಲಿಯಲ್ಲಿ ಹೊಡೆಸುವೆ: ಮತ್ತೆ ತಹಶೀಲ್ದಾರ್ ವಿರುದ್ಧ ನಾಲಿಗೆ ಹರಿಬಿಟ್ಟ ಶಾಸಕ ಬಾಲಕೃಷ್ಣ

25/12/2025 8:06 PM

BREAKING: ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರ ಜೀಪ್ ಪಲ್ಟಿಯಾಗಿ ಭೀಕರ ಅಪಘಾತ: 7 ಮಂದಿಗೆ ಗಂಭೀರ ಗಾಯ

25/12/2025 7:57 PM

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸರ್ಕಾರ

25/12/2025 7:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.