ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರುಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಬೆಂಗಳೂರಿನ ನೆಲಮಂಗಲ ತಾಲೂಕಿನ ತೋಟಗೇರಿ ಕ್ರಾಸ್ ನಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ತೋಟಗೆರೆ ಕ್ರಾಸ್ ನಲ್ಲಿ ಗೌರಿಬಿದನೂರು ಮೂಲದ ಹರೀಶ್ (39) ಹಾಗೂ ವೀರಭದ್ರ (80) ಸಾವನ್ನಪ್ಪಿದ್ದಾರೆ ಇನ್ನು ಕಾರಿನಲ್ಲಿ ಇದ್ದಂತಹ ಗೌರಮ್ಮ, ಮೈತ್ರಿ, ಸಿರಿ ಹಾಗೂ ವಂದನಾಗೆ ಗಂಭೀರವಾದ ಗಾಯಗಳಾಗಿದ್ದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ದಾಸರಹಳ್ಳಿಯಲ್ಲಿ ಗೌರಿಬಿದನೂರು ಮೂಲದ ಕುಟುಂಬ ವಾಸವಿತ್ತು. ಇನ್ನು ಮೃತ ಹರೀಶ್ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಮೀನು ನೋಡಿಕೊಂಡು ವಾಪಸ್ ಆಗುವಾಗ ಈ ಒಂದು ಅಪಘಾತ ಸಂಭವಿಸಿದೆ. ಘಟನೆ ಕುರಿತಂತೆ ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








