Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಮುಂಬರುವ ದಿನಗಳಲ್ಲಿ ಸರ್ಕಾರದ ಸುಧಾರಣಾ ಪಥವು ಇನ್ನಷ್ಟು ಹುರುಪಿನಿಂದ ಮುಂದುವರಿಯುತ್ತದೆ’: ಪ್ರಧಾನಿ ಮೋದಿ

26/12/2025 1:21 PM

BREAKING : ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ `ಚಿರತೆ’ ಪ್ರತ್ಯಕ್ಷ : ಜನರಲ್ಲಿ ಹೆಚ್ಚಿದ ಆತಂಕ.!

26/12/2025 1:17 PM

‘ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಲ್ಲಿ ಬಲಿಷ್ಠ ಭಾರತವನ್ನು ನಿರ್ಮಿಸಿದೆ’: ಮಾಜಿ ಪ್ರಧಾನಿಯ ಪುಣ್ಯತಿಥಿಯಂದು ಕಾಂಗ್ರೆಸ್ ಗೌರವ ನಮನ

26/12/2025 1:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ `ಚಿರತೆ’ ಪ್ರತ್ಯಕ್ಷ : ಜನರಲ್ಲಿ ಹೆಚ್ಚಿದ ಆತಂಕ.!
KARNATAKA

BREAKING : ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ `ಚಿರತೆ’ ಪ್ರತ್ಯಕ್ಷ : ಜನರಲ್ಲಿ ಹೆಚ್ಚಿದ ಆತಂಕ.!

By kannadanewsnow5726/12/2025 1:17 PM

ಧಾರವಾಡ : ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಯು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಡಿಸೆಂಬರ್ 24, 2025 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಕೆ. ವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಿವೇಕ ಕವರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ ವಿ. ಎಚ್, ವಲಯ ಅರಣ್ಯ ಅಧಿಕಾರಿ, ಆರ್. ಎಸ್. ಉಪ್ಪಾರ, ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ ಕುಮಾರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (CISF) ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗಳು ಹುಬ್ಬಳ್ಳಿಯ ಗಾಮನಗಟ್ಟಿ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದ ಸ್ಥಳ ಪರಿಶೀಲನೆ ಮಾಡಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಿರತೆಯನ್ನು ಸೆರೆಹಿಡಿಯಲು ಈಗಾಗಲೇ ಬೋನ್ ಅನ್ನು ಇಡಲು ವ್ಯವಸ್ಥೆ ಮಾಡಲಾಗಿದೆ ಹಾಗೂ ಚಿರತೆಯ ಚಲನವಲನವನ್ನು ಗುರುತಿಸಿ ಸರೆಹಿಡಿಯಲು ಕ್ಯಾಮೆರಾ ಟ್ರಾಪ್‌ಗಳನ್ನು ಸಹ ಅಳವಡಿಸಲಾಗಿದೆ.

ಅರಣ್ಯ ಮುಂಚೂಣಿ ಸಿಬ್ಬಂದಿಗಳು ಹಗಲು ಮತ್ತು ರಾತ್ರಿಗಸ್ತು ತಿರುಗುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಚಿರತೆ ಸಿಗುವವರೆಗೂ ಸ್ಥಳದ ಸುತ್ತಮುತ್ತ ಸಾರ್ವಜನಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಗಳು ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ರವರೆಗೆ ಒಬ್ಬೊಬ್ಬರಾಗಿ ಸಂಚರಿಸದಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದರು.

ಸಾರ್ವಜನಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಗಳು ಅನಿವಾರ್ಯ ಸಂದರ್ಭಗಳಲ್ಲಿ ಗುಂಪಾಗಿ ಓಡಾಡಲು ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರು ತಿಳಿಸಿದರು.

ಗಾಮನಗಟ್ಟಿ ಪ್ರದೇಶದ ವ್ಯಾಪ್ತಿಯಲ್ಲಿ ತ್ಯಾಜ್ಯ ಪದಾರ್ಥಗಳನ್ನು ಎಸೆಯುತ್ತಿರುವುದು ಗಮನಕ್ಕೆ ಬಂದಿದ್ದು ಅದನ್ನು ತಿನ್ನಲು ಬರುವ ಬೀದಿ ನಾಯಿಗಳನ್ನು ಹಿಡಿಯಲು ಚಿರತೆ ಬರುವ ಸಂಭವ ಇರುತ್ತದೆ.

ಗಾಮನಗಟ್ಟಿ ಪ್ರದೇಶದ ಸುತ್ತಮುತ್ತಲ ಜನರಿಗೆ ತ್ಯಾಜ್ಯ ವಸ್ತುಗಳನ್ನು ಎಸೆಯದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗೆ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರ ಬರೆಯಲು ವಿಮಾನ ನಿಲ್ಯಾಣ ಅಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BREAKING: Leopard spotted near Hubballi airport: Increased anxiety among people!
Share. Facebook Twitter LinkedIn WhatsApp Email

Related Posts

BIG NEWS : ಮೈಸೂರಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ : ಮೃತ ಸಲೀಂ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

26/12/2025 1:10 PM1 Min Read

ALERT : ರಾಜ್ಯದಲ್ಲಿ ನಕಲಿ ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದರೆ ಕಾನೂನು ಕ್ರಮ ಫಿಕ್ಸ್.!

26/12/2025 1:00 PM1 Min Read

BIG NEWS : ಬೆಳಗಾವಿಯಲ್ಲಿ ಘೋರ ಘಟನೆ : ಈಜಲು ಹೋಗಿದ್ದ ಬಾಲಕರು ಕಾಲುವೆಯಲ್ಲಿ ಮುಳುಗಿ ದುರಂತ ಸಾವು!

26/12/2025 12:34 PM1 Min Read
Recent News

‘ಮುಂಬರುವ ದಿನಗಳಲ್ಲಿ ಸರ್ಕಾರದ ಸುಧಾರಣಾ ಪಥವು ಇನ್ನಷ್ಟು ಹುರುಪಿನಿಂದ ಮುಂದುವರಿಯುತ್ತದೆ’: ಪ್ರಧಾನಿ ಮೋದಿ

26/12/2025 1:21 PM

BREAKING : ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ `ಚಿರತೆ’ ಪ್ರತ್ಯಕ್ಷ : ಜನರಲ್ಲಿ ಹೆಚ್ಚಿದ ಆತಂಕ.!

26/12/2025 1:17 PM

‘ಮನಮೋಹನ್ ಸಿಂಗ್ ಅವರ ದೂರದೃಷ್ಟಿಯಲ್ಲಿ ಬಲಿಷ್ಠ ಭಾರತವನ್ನು ನಿರ್ಮಿಸಿದೆ’: ಮಾಜಿ ಪ್ರಧಾನಿಯ ಪುಣ್ಯತಿಥಿಯಂದು ಕಾಂಗ್ರೆಸ್ ಗೌರವ ನಮನ

26/12/2025 1:15 PM

BIG NEWS : ಮೈಸೂರಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ : ಮೃತ ಸಲೀಂ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

26/12/2025 1:10 PM
State News
KARNATAKA

BREAKING : ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ `ಚಿರತೆ’ ಪ್ರತ್ಯಕ್ಷ : ಜನರಲ್ಲಿ ಹೆಚ್ಚಿದ ಆತಂಕ.!

By kannadanewsnow5726/12/2025 1:17 PM KARNATAKA 1 Min Read

ಧಾರವಾಡ : ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಯು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು,…

BIG NEWS : ಮೈಸೂರಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ : ಮೃತ ಸಲೀಂ ಜೊತೆಗೆ ಇದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

26/12/2025 1:10 PM

ALERT : ರಾಜ್ಯದಲ್ಲಿ ನಕಲಿ ದಾಖಲೆ ನೀಡಿ `ಕಾರ್ಮಿಕ ಕಾರ್ಡ್’ ಪಡೆದರೆ ಕಾನೂನು ಕ್ರಮ ಫಿಕ್ಸ್.!

26/12/2025 1:00 PM

BIG NEWS : ಬೆಳಗಾವಿಯಲ್ಲಿ ಘೋರ ಘಟನೆ : ಈಜಲು ಹೋಗಿದ್ದ ಬಾಲಕರು ಕಾಲುವೆಯಲ್ಲಿ ಮುಳುಗಿ ದುರಂತ ಸಾವು!

26/12/2025 12:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.