Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ₹1.40 ಲಕ್ಷ ಗಡಿ ದಾಟಿದ 10 ಗ್ರಾಂ ಚಿನ್ನದ ಬೆಲೆ |Gold Price Hike

27/12/2025 9:14 AM

GOOD NEWS : ರಾಜ್ಯದ `ಪ್ರಾಥಮಿಕ, ಪ್ರೌಢಶಾಲಾ ಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : `ಮುಖ್ಯ ಶಿಕ್ಷಕರ ಹುದ್ದೆ ಬಡ್ತಿ’ ಗೆ ಸರ್ಕಾರ ಮಹತ್ವದ ಆದೇಶ

27/12/2025 9:10 AM

ಬಾಂಗ್ಲಾದೇಶದ ಫರೀದ್ ಪುರದಲ್ಲಿ ಭೀಕರ ಹಿಂಸಾಚಾರ: 25 ಮಂದಿಗೆ ಗಾಯ | Watch video

27/12/2025 8:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ `ಪ್ರಾಥಮಿಕ, ಪ್ರೌಢಶಾಲಾ ಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : `ಮುಖ್ಯ ಶಿಕ್ಷಕರ ಹುದ್ದೆ ಬಡ್ತಿ’ ಗೆ ಸರ್ಕಾರ ಮಹತ್ವದ ಆದೇಶ
KARNATAKA

GOOD NEWS : ರಾಜ್ಯದ `ಪ್ರಾಥಮಿಕ, ಪ್ರೌಢಶಾಲಾ ಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : `ಮುಖ್ಯ ಶಿಕ್ಷಕರ ಹುದ್ದೆ ಬಡ್ತಿ’ ಗೆ ಸರ್ಕಾರ ಮಹತ್ವದ ಆದೇಶ

By kannadanewsnow5727/12/2025 9:10 AM

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿ ನೀಡಿದ್ದು, ಜೇಷ್ಠತಾ ಪಟ್ಟಿಗೆ ಅನುಗುಣವಾಗಿ ಖಾಲಿ ಇರುವ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗಳಿಗೆ ಬಡ್ತಿ ನೀಡಲು ರಾಜ್ಯಾದ್ಯಂತ ಏಕಕಾಲಕ್ಕೆ ಕೌನ್ಸಿಲಿಂಗ್ ನಡೆಸಲು ಮಹತ್ವದ ಆದೇಶ ಹೊರಡಿಸಲಾಗಿದೆ.

ಹೌದು, ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರಾಗಿ ಬಡ್ತಿ ನೀಡುವ ಪ್ರಕ್ರಿಯೆಯನ್ನು ಜನವರಿ 1ರಿಂದ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಮುಖ್ಯ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿದ ಬಳಿಕ ವಿವಿಧ ಹಂತದ ಪ್ರಕ್ರಿಯೆ ಪೂರ್ಣಗೊಳಿಸಿ ಕೌನ್ಸೆಲಿಂಗ್ ಮೂಲಕ ಬಡ್ತಿ ನೀಡಿ ಸ್ಥಳ ನಿಯೋಜನೆ ಮಾಡಲಾಗುವುದು.

ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರಂತರ ಪ್ರಯತ್ನದ ಫಲವಾಗಿ ಮೂರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಪ್ರಕ್ರಿಯೆಗೆ ಮರು ಚಾಲನೆ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಸುಮಾರು 2000ಕ್ಕೂ ಹೆಚ್ಚು ಮುಖ್ಯ ಶಿಕ್ಷಕರಿಗೆ ಬಡ್ತಿ ಭಾಗ್ಯ ಸಿಗುವ ಸಾಧ್ಯತೆ ಇದೆ. ಜ. 31ರೊಳಗೆ ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತ ವಿಕಾಸ್ ಕಿಶೋರ್ ಸುರಳ್ಕರ್ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಸರ್ಕಾರಿ ನೌಕರರ (ಜೇಷ್ಟತಾ) ನಿಯಮಗಳು-1957ರ ನಿಯಮಗಳ ಪ್ರಕಾರ 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ (HM) ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ (SHM) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಿದೆ. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ-2020ರ ಸೆಕ್ಷನ್ 3ರ ಪ್ರಕಾರೆ ‘ಸಿ’ ವೃಂದದ ಹುದ್ದೆಗಳಿಗೆ ಬಡ್ತಿ ನೀಡಲು ಕ್ರಮವಹಿಸಬೇಕಾಗುತ್ತದೆ.

ಪ್ರಯುಕ್ತ, ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರುಗಳಿಗೆ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಶ್ರೇಷ್ಟತಾ ನಿಯಮಾನುಸಾರ ಆಯಾ ವೃಂದವಾರು ಪ್ರಕಟಿಸಲಾಗಿರುವ ಜಿಲ್ಲಾ ಅಂತಿಮ ಜೇಷ್ಟತಾ ಪಟ್ಟಿಗೆ ಅನುಗುಣವಾಗಿ ಬಡ್ತಿಯನ್ನು ನೀಡಬೇಕಾಗಿದ್ದು ಪ್ರಕಟಿತ ವೇಳಾಪಟ್ಟಿಯಂತೆ ಜಿಲ್ಲಾ ಹಂತದಲ್ಲಿ ಎಲ್ಲಾ ಪೂರ್ವಭಾವಿ ಕ್ರಮಗಳನ್ನು ಕೈಗೊಂಡು ಬಡ್ತಿಗೆ ಅರ್ಹರಿರುವ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರ ಜೇಷ್ಟತಾ ಪಟ್ಟಿಯನ್ನು ದಿನಾಂಕ: 01/01/2025 ರಲ್ಲಿದ್ದಂತೆ ಅಂತಿಮಗೊಳಿಸಲು ಸಕ್ಷಮ ಪ್ರಾಧಿಕಾರಿಗಳಿಗೆ ತಿಳಿಸಿದೆ.

ಜಿಲ್ಲೆಯಲ್ಲಿ ಪ್ರಸ್ತುತ ಲಭ್ಯವಿರುವ ಖಾಲಿ ಹುದ್ದೆಗಳಿಗೆ ಎದುರಾಗಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಸಕ್ಷಮ ಪ್ರಾಧಿಕಾರಿಗಳಾದ ಆಯಾ ಜಿಲ್ಲಾ ಉಪ ನಿರ್ದೆಶಕರು(ಆಡಳಿತ)ರವರುಗಳ ಹಂತದಲ್ಲಿ ರಾಜ್ಯದಾದ್ಯಂತ ಏಕಕಾಲದಲ್ಲಿ ಕೌನ್ಸಿಲಿಂಗ್ ಮೂಲಕ ಬಡ್ತಿ ಪ್ರಕ್ರಿಯೆಗಳು ನಡೆಯುತ್ತವೆ.

ಈ ಸಂದರ್ಭದಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ವ್ಯಕ್ತಿಗಳಿಗೆ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ಹಾಗೂ ಅಂಗವೈಕಲ್ಯತೆಯನ್ನು ಗುರುತಿಸುವ ಕುರಿತಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಅಧಿಸೂಚನೆಯನ್ನು ಹೊರಡಿಸಿ ತಜ್ಞರ ಸಮಿತಿಯ ಸಭೆಯಲ್ಲಿ ಗುರುತಿಸಿರುವ ಅಂಗವೈಕಲ್ಯತೆಯ ವರ್ಗಗಳನ್ನು ನಿಗಧಿಪಡಿಸಲಾಗಿದ್ದು ಅದರಂತೆ ಕ್ರಮವಹಿಸತಕ್ಕದ್ದು. ಬಡ್ತಿ ಪ್ರಕ್ರಿಯೆಯ ಕೌನ್ಸಿಲಿಂಗ್ ಕೈಗೊಳ್ಳುವಾಗ ಈ ಕೆಳಕಂಡ ಮಾರ್ಗಸೂಚಿ ಅಂಶಗಳನ್ನು ಅನುಸರಿಸಲು ತಿಳಿಸಿದೆ.

1. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಶಿಕ್ಷಕರ ವರ್ಗಾವಣಾ ನಿಯಂತ್ರಣ ಕಾಯ್ದೆ-2020ರ ಸೆಕ್ಷನ್-3 ರಂತೆ’ಸಿ’ ವಲಯದಲ್ಲಿನ ಶಾಲೆಗಳಲ್ಲಿ ಸ್ಥಳಾವಕಾಶ ಕಲ್ಪಿಸುವ ದೃಷ್ಟಿಯಿಂದ ‘ಸಿ’ ವಲಯದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗಳನ್ನು ಸಂಬಂಧಿಸಿದ ಶಾಲೆಗಳಲ್ಲಿ ತೆರವುಗೊಳಿಸಬೇಕಿದೆ. ಅಂದರೆ, ‘ಬಿ’ ವಲಯದಲ್ಲಿ ಕರ್ತವ್ಯ ನಿರತ ಹಿರಿಯ ಮುಖ್ಯ ಶಿಕ್ಷಕರನ್ನು ‘ಎ’ ವಲಯದ ಶಾಲೆಗಳಿಗೆ ಹಾಗೂ ‘ಸಿ’ ವಲಯದಲ್ಲಿನ ಕರ್ತವ್ಯನಿರತ ಹಿರಿಯ ಮುಖ್ಯ ಶಿಕ್ಷಕರನ್ನು ‘ಬಿ’ ವಲಯದಲ್ಲಿನ ಶಾಲೆಗೆ ಕೌನ್ಸಿಲಿಂಗ್ ಮೂಲಕ ಸ್ಥಳಾಂತರಿಸುವ ಮೂಲಕ ‘ಸಿ’ ವಲಯದಲ್ಲಿ ಖಾಲಿ ಹುದ್ದೆಗಳನ್ನು ಲಭ್ಯಪಡಿಸಬೇಕಾಗುತ್ತದೆ.

2. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಶಿಕ್ಷಕರ ವರ್ಗಾವಣಾ ನಿಯಂತ್ರಣ ಕಾಯ್ದೆ- 2020ರ ಸೆಕ್ಷನ್-10 ರ ಪ್ರಕಾರ ವಲಯ ವರ್ಗಾವಣೆಯಲ್ಲಿ ಹಿರಿಯ ಮುಖ್ಯ ಶಿಕ್ಷಕರಿಗೆ ನಿಯಮಾನುಸಾರ ಆಧ್ಯತೆಯನ್ನು ಪರಿಗಣಿಸುವುದು.

GOOD NEWS: Good news for the state's `primary and secondary school teachers': Government issues important order for `promotion to the post of head teacher'
Share. Facebook Twitter LinkedIn WhatsApp Email

Related Posts

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ₹1.40 ಲಕ್ಷ ಗಡಿ ದಾಟಿದ 10 ಗ್ರಾಂ ಚಿನ್ನದ ಬೆಲೆ |Gold Price Hike

27/12/2025 9:14 AM1 Min Read

ಉದ್ಯೋಗ ವಾರ್ತೆ : ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ `877’ ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ

27/12/2025 8:50 AM1 Min Read

ಸಾರ್ವಜನಿಕರೇ ಗಮನಿಸಿ : 10 ವರ್ಷ ಹಳೆಯ `ಆಧಾರ್ ಕಾರ್ಡ್’ ಹೊಂದಿರುವವರು ತಪ್ಪದೇ ಈ ಕೆಲಸ ಮಾಡಿ.!

27/12/2025 8:42 AM2 Mins Read
Recent News

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ₹1.40 ಲಕ್ಷ ಗಡಿ ದಾಟಿದ 10 ಗ್ರಾಂ ಚಿನ್ನದ ಬೆಲೆ |Gold Price Hike

27/12/2025 9:14 AM

GOOD NEWS : ರಾಜ್ಯದ `ಪ್ರಾಥಮಿಕ, ಪ್ರೌಢಶಾಲಾ ಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : `ಮುಖ್ಯ ಶಿಕ್ಷಕರ ಹುದ್ದೆ ಬಡ್ತಿ’ ಗೆ ಸರ್ಕಾರ ಮಹತ್ವದ ಆದೇಶ

27/12/2025 9:10 AM

ಬಾಂಗ್ಲಾದೇಶದ ಫರೀದ್ ಪುರದಲ್ಲಿ ಭೀಕರ ಹಿಂಸಾಚಾರ: 25 ಮಂದಿಗೆ ಗಾಯ | Watch video

27/12/2025 8:54 AM

ಉದ್ಯೋಗ ವಾರ್ತೆ : ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ `877’ ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ

27/12/2025 8:50 AM
State News
KARNATAKA

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ₹1.40 ಲಕ್ಷ ಗಡಿ ದಾಟಿದ 10 ಗ್ರಾಂ ಚಿನ್ನದ ಬೆಲೆ |Gold Price Hike

By kannadanewsnow5727/12/2025 9:14 AM KARNATAKA 1 Min Read

ಬೆಂಗಳೂರು : ಆಭರಣ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬಂಗಾರದ ಬೆಲೆ ಗಗನಕ್ಕೇರಿದ್ದು, ಇಂದು ಚಿನ್ನದ ಬೆಲೆ 10 ಗ್ರಾಂಗೆ…

GOOD NEWS : ರಾಜ್ಯದ `ಪ್ರಾಥಮಿಕ, ಪ್ರೌಢಶಾಲಾ ಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : `ಮುಖ್ಯ ಶಿಕ್ಷಕರ ಹುದ್ದೆ ಬಡ್ತಿ’ ಗೆ ಸರ್ಕಾರ ಮಹತ್ವದ ಆದೇಶ

27/12/2025 9:10 AM

ಉದ್ಯೋಗ ವಾರ್ತೆ : ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ `877’ ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ

27/12/2025 8:50 AM

ಸಾರ್ವಜನಿಕರೇ ಗಮನಿಸಿ : 10 ವರ್ಷ ಹಳೆಯ `ಆಧಾರ್ ಕಾರ್ಡ್’ ಹೊಂದಿರುವವರು ತಪ್ಪದೇ ಈ ಕೆಲಸ ಮಾಡಿ.!

27/12/2025 8:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.