ವೈಕುಂಠ ಏಕಾದಶಿ ಶುಭವಾಗಲಿ
ಶ್ರೀ ಮಹಾವಿಷ್ಣು ಸ್ತೋತ್ರಗಳ
-೧-
|| ಶ್ರೀ ವಿಷ್ಣೋರಷ್ಟಾವಿಂಶತಿನಾಮ ಸ್ತೋತ್ರಮ್ ||
ಅರ್ಜುನ ಉವಾಚ:-
ಕಿಂ ನು ನಾಮ ಸಹಸ್ರಾಣಿ ಜಪಂತೆ ಚ ಪುನ: ಪುನ: |
ಯಾನಿ ನಾಮಾನಿ ದಿವ್ಯಾನಿ ತಾನಿ ಚಾಸ್ಸ್ಚಕ್ಷ್ವ ಕೇಶವ ||೧||
ಭಾವಾರ್ಥ:-ಅರ್ಜುನನು ಕೇಳುವನು: ಕೇಶವಾ! ಮನುಜರು ಒಂದೇ ತೆರನಾಗಿ ನಿನ್ನ ಒಂದು ಸಾವಿರ ನಾಮಗಳನ್ನು ಯಾಕಾಗಿ ಪುನ: ಪುನ: ಜಪಿಸುತ್ತಾರೆ? ನಿನ್ನ ಆ ದಿವ್ಯ ನಾಮಗಳ ಬಗ್ಗೆ ವಿವರಿಸಿ ಹೇಳುವಂತವನಾಗು.
ಭಗವಾನುವಾಚ:-
ಮತ್ಸ್ಯಂ ಕೂರ್ಮಂ ವರಾಹಂ ಚ ವಾಮನಂ ಚ ಜನಾರ್ದನಮ್ |
ಗೋವಿಂದಂ ಪುಂಡರೀಕಾಕ್ಷಂ ಮಾಧವಂ ಮಧುಸೂದನಮ್ ||೨||
ಭಾವಾರ್ಥ:-ಭಗವಂತನು ಹೇಳುತ್ತಾನೆ: ಅರ್ಜುನಾ; ಮತ್ಸ್ಯ,ಕೂರ್ಮ; ವರಾಹ,ವಾಮನ, ಜನಾರ್ದನ,ಗೋವಿಂದ,ಪುಂಡರೀಕಾಕ್ಷ,ಮಾಧವ,ಮಧುಸೂದನ—–
ಪದ್ಮನಾಭಂ ಸಹಸ್ರಾಕ್ಷಂ ವನಮಾಲಿಂ ಹಲಾಯುಧಮ್ |
ಗೋವರ್ಧನಂ ಹೃಷೀಕೇಶಂ ವೈಕುಂಠಂ ಪುರುಷೋತ್ತಮ್ ||೩||
ಭಾವಾರ್ಥ:-ಪದ್ಮನಾಭ, ಸಹಸ್ರಾಕ್ಷ, ವನಮಾಲಿ, ಹಲಾಯುಧ, ಗೋವರ್ಧನ, ಹೃಷೀಕೇಶ, ವೈಕುಂಠ, ಪುರುಷೋತ್ತಮ———–
ವಿಶ್ವರೂಪಂ ವಾಸುದೇವಂ ರಾಮಂ ನಾರಾಯಣಂ ಹರಿಮ್ |
ದಾಮೋದರಂ ಶ್ರೀಧರಂ ಚ ವೇದಾಂಗಂ ಗರುಢಧ್ವಜಮ್ ||೪||
ಭಾವಾರ್ಥ:-ವಿಶ್ವರೂಪ, ವಾಸುದೇವ, ರಾಮ, ನಾರಾಯಣ, ಹರಿ, ದಾಮೋದರ, ಶ್ರೀಧರ, ವೇದಾಂಗ, ಗರುಢಧ್ವಜ———-
ಅನಂತಂ ಕೃಷ್ಣಗೋಪಾಲಂ ಜಪತೋ ನಾಸ್ತಿ ಪಾತಕಮ್ |
ಗವಾಂ ಕೋಟಿಪ್ರದಾನಸ್ಯ ಅಶ್ವಮೇಧಶತಸ್ಯ ಚ ||೫||
ಭಾವಾರ್ಥ:-ಅನಂತ, ಕೃಷ್ಣಗೋಪಾಲ ಎಂಬೀ ಇಪ್ಪತ್ತೆಂಟು ನಾಮಗಳನ್ನು ಜಪಿಸುವಂತಹವನ ಪಾಪಗಳೆಲ್ಲಾ ನಶಿಸಿ ಹೋಗುತ್ತವೆ. ಆತನಿಗೆ ಒಂದು ಕೋಟಿ ಗೋದಾನ, ಒಂದು ನೂರು ಅಶ್ವಮೇಧ ಯಾಗ ಮಾಡಿದರೆ ದೊರಕುವ ಫಲವು ಲಭಿಸುತ್ತದೆ.
ಕನ್ಯಾದಾನ ಸಹಸ್ರಾಣಾಂ ಫಲ ಪ್ರಾಪ್ನೋತಿ ಮಾನವಾ: |
ಅಮಾಯಾಂ ವಾ ಪೌರ್ಣಿಮಾಸ್ಯಾಮೇಕಾದಶ್ಯಾಂ ತಥೈವ ಚ ||೬||
ಭಾವಾರ್ಥ:-ಮತ್ತು ಒಂದು ಸಾವಿರ ಕನ್ಯಾದಾನ ಮಾಡಿದ ಫಲವು ಮಾನುಜರಿಗೆ ದೊರಕುವುದು.ಅಮವಾಸ್ಯೆ,ಹುಣ್ಣಿಮೆ,ಮತ್ತು ಏಕಾದಶಿಗಳಂದು ಮತ್ತು ಅದೇರೀತಿ———
ಸಂಧ್ಯಾಕಾಲೇ ಸ್ಮರೇನ್ನಿತ್ಯಂ ಪ್ರಾತ:ಕಾಲೇ ತಥೈವ ಚ |
ಮಧ್ಯಾಹ್ನೇ ಚ ಜಪೇನ್ನಿತ್ಯಂ ಸರ್ಪಪಾಪೈ: ಪ್ರಮುಚ್ಯತೇ ||೭||
ಭಾವಾರ್ಥ:-ಪ್ರತಿದಿನ ಸಾಯಂಕಾಲ,ಮುಂಜಾನೆ,ಮತ್ತು ಮದ್ಯಾಹ್ನದ ಸಮಯಗಳಲ್ಲಿ ಈ ನಾಮಗಳನ್ನು ಜಪಿಸುವ ಮಾನವರು ಸಮಸ್ತ ಪಾಪಗಳಿಂದ ವಿಮುಕ್ತರಾಗುತ್ತಾರೆ.
||ಇತಿ ಶ್ರೀ ವಿಷ್ಣೋರಷ್ಟಾವಿಂಶತಿನಾಮ ಸ್ತೋತ್ರಮ್ ||
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
||ಈ ರೀತಿಯಾಗಿ ಶ್ರೀ ವಿಷ್ಣುವಿನ ಇಪ್ಪತ್ತೆಂಟು ನಾಮಗಳು ||
+ ಪ್ರಜಾಪತಿಯನ್ನು ಸ್ಮರಿಸಬೇಕು.
ಧಮೋ೯ ರಕ್ಷತಿ ರಕ್ಷಿತ:* ಕೃಷ್ಣಾರ್ಪಣಮಸ್ತು
ಸರ್ವಜನಾಃ ಸುಖಿನೋಭವತು








