Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜನ ಸಾಮಾನ್ಯರಿಗೆ ಬೆಳಕು ನೀಡುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡಿದೆ: ಶಾಸಕ ಗೋಪಾಲಕೃಷ್ಣ ಬೇಳೂರು
KARNATAKA

ಜನ ಸಾಮಾನ್ಯರಿಗೆ ಬೆಳಕು ನೀಡುವ ಕೆಲಸ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಡಿದೆ: ಶಾಸಕ ಗೋಪಾಲಕೃಷ್ಣ ಬೇಳೂರು

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಡತ್ವದಿಂದ ಹೊಂದಿರುವ ಜನರಿಗೆ ದುಡಿಮೆಯನ್ನು ಯೋಜನೆ ಕಲಿಸಿಕೊಟ್ಟಿದೆ ಪ್ರತಿಯೊಬ್ಬರಲ್ಲಿಯೂ ನಾನು ನನ್ನ ಕುಟುಂಬವನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದನ್ನು ಸ್ವ ಸಹಾಯ ಗುಂಪುಗಳ ಮೂಲಕ ಜನರು ಅರಿತಿದ್ದಾರೆ. ಜಾತಿ ಮತ ಭೇದ ಇಲ್ಲದೇ ಎಲ್ಲರೂ ಸಮಾನತೆಯಿಂದ ಬದುಕುವ ವಾತಾವರಣ ನಿರ್ಮಾಣ ಆಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಎಲ್ಲರಿಗೂ ಅಬಿವೃದ್ಧಿ ಹೊಂದಲು ಸಮಾನ ಅವಕಾಶ ಕಲ್ಪಿಸಿದೆ. ಈ ಕಾರಣದಿಂದಾಗಿ ಜನಸಾಮಾನ್ಯರ ಬದುಕಿಗೆ ಬೆಳಕಾಗಿದೆ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ನಿಗಮ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಹೇಳಿದ್ದಾರೆ.

ಸೋಮವಾರದಂದು ಶಿವಮೊಗ್ಗದ ಸಾಗರ ತಾಲ್ಲೂಕಿನ ಆನಂದಪುರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಗರ ತಾಲೂಕು, ಪ್ರಗತಿ ಬಂದು ಸ್ವ ಸಹಾಯ ಸಂಘಗಳ ಒಕ್ಕೂಟ ಆನಂದಪುರ ವಲಯದ ಶ್ರೀ ವೀರಾಂಜನೇಯ ಸಭಾಭವನದಲ್ಲಿ ಆಯೋಜಿಸಲಾದ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಮದ್ಯ ವರ್ಜನಾ ಶಿಬಿರಗಳ ಮೂಲಕ ವ್ಯಸನ ಮುಕ್ತರನ್ನಾಗಿ ಮಾಡಿ ಬಡ ಕುಟುಂಬಗಳಿಗೆ ಬೆಳಕು ನೀಡಿರುವುದು ಹೆಮ್ಮೆಯ ವಿಚಾರವಾಗಿದೆ. ಕೆರೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾದರಿಯಾಗಿ ಮಾಡುತ್ತಿದ್ದಾರೆ. ಕೆರೆ ಅಭಿವೃದ್ಧಿ ಕಾರ್ಯಗಳಿಗೆ ಸರಕಾರದಿಂದ ಶೇಕಡಾ 50ರಷ್ಟು ಅನುದಾನ ಒದಗಿಸಲಾಗುವುದು. ಬಡ ಜನರ ಸೇವೆ ಮಾಡುವ ಕಾರ್ಯಕ್ರಮಗಳು ಎಂದರೆ ಅತ್ಯಂತ ಪ್ರೀತಿ ಎಲ್ಲರೂ ಬದುಕನ್ನು ಚೆನ್ನಾಗಿ ನಡೆಸಬೇಕು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರಗಳು ಬಂದಾಗ ಅದರ ವಿರುದ್ಧ ಧ್ವನಿ ಎತ್ತುವ ಕೆಲಸ ಮಾಡಿದ್ದೇವೆ. ಸತ್ಯ ಗೆದ್ದಿದೆ. ಶ್ರೀ ಕ್ಷೇತ್ರದ ಮೂಲಕ ಮಾಡುವ ಪ್ರತಿಯೊಂದು ಕಾರ್ಯಕ್ರಮಗಳು ಕೂಡ ಬಡವರನ್ನು ತಲುಪುತ್ತಿದೆ ಎಂದು ಕೊಂಡಾಡಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಪರಮ ಪೂಜ್ಯ ಶ್ರೀ ಶ್ರೀ ರೇಣುಕಾನಂದ ಮಹಾ ಸ್ವಾಮೀಜಿಯವರು ಪೀಠಾಧ್ಯಕ್ಷರು, ಶ್ರೀ ನಾರಾಯಣ ಗುರು ಮಹಾಸಂಸ್ಥಾನ ನಿಟ್ಟೂರು ಹುಂಚದ ಕಟ್ಟೆ ತೀರ್ಥಹಳ್ಳಿ ಯವರು ಆಶೀರ್ವಚನ ನೀಡುತ್ತಾ ಧರ್ಮವನ್ನು ಬಿಟ್ಟು ಬದುಕಲು ಸಾಧ್ಯವಿಲ್ಲ ಧರ್ಮದ ದಾರಿ ಹೆದ್ದಾರಿ ಧರ್ಮ ನಮ್ಮ ಬದುಕಿಗೆ ಜೀವನದಲ್ಲಿ ಸತ್ಕಾರ್ಯಗಳನ್ನು ಮಾಡಲು ಪ್ರೇರೇಪಿಸಲು ಪ್ರಮುಖ ಪಾತ್ರ ವಹಿಸುತ್ತದೆ. ಹಳ್ಳಿಗಳ ಉದ್ಧಾರ ಆಗುತ್ತಾ ಭಾರತ ದೇಶ ರಾಮ ರಾಜ್ಯ ಆಗುತ್ತದೆ. ಮನುಷ್ಯನ ಬದುಕಿಗೆ ಬಹಳ ಅವಶ್ಯ ವಾಗಿ ಬೇಕಾಗಿರುವುದು ಭಕ್ತಿ ಯಾರು ಭಕ್ತಿಯ ಪಥದಲ್ಲಿ ಜೀವನ ನಡೆಸುತ್ತಾರೆಯೇ ಅವರು ಭುಮಿಯ ಮೇಲೆ ಹೆಗ್ಗುರುತನ್ನು ಮೂಡಿಸುತ್ತಾರೆ. ಭಕ್ತಿಯ ಗುಣಗಳು ಸದ್ಗುಣಗಳನ್ನು ಬೆಳೆಸುತ್ತದೆ. ಅಂತರಂಗದಲ್ಲಿ ತುಂಬಿರುವ ಅವಗುಣಗಳನ್ನು ತೆಗೆಯಬೇಕು. ಮಕ್ಕಳಿಗೆ ಭಕ್ತಿಯ ಸಂಸ್ಕಾರ ನೀಡಬೇಕು ಎಂದು ವಿವರಿಸಿದರು

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರಸಿ ವಿಭಾಗದ ಜಿಲ್ಲಾ ನಿರ್ದೇಶಕರಾದ ದಿನೇಶ್ ಎಂ ಯೋಜನೆಯ ಕಾರ್ಯಮಗಳ ಕುರಿತು ವಿವರಿಸಿದರು.

ಸಬಾ ಅಧ್ಯಕ್ಷತೆಯನ್ನು ಮಹೇಶ್ ಟಿ ಅಧ್ಯಕ್ಷರು ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜಾ ಸಮಿತಿ ಆನಂದಪುರ ವಹಿಸಿದ್ದರು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಕೆ ಹಾಲಪ್ಪ, ಅಧ್ಯಕ್ಷರು, ಶ್ರೀ ವೀರಾಂಜನೇಯ ಸೇವಾ ಟ್ರಸ್ಟ್ ಆನಂದಪುರ ಅವರು ವಹಿಸಿದ್ದರು. ಆನಂದಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ ಗುರುರಾಜ್, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಉಮೇಶ್ ಎನ್, ವಿಜಯ್ ರೇವಣಕರ್, ತಾಲೂಕು ಕಾಂಗ್ರೇಸ್ ಅಧ್ಯಕ್ಷರಾದ ಕಳಸೆ ಚಂದ್ರಪ್ಪ, ಮಾರಿಕಾಂಬಾ ಕಮಿಟಿಯ ಅಧ್ಯಕ್ಷರಾದ ವೆಂಕಟೇಶ್, ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಪಿ, ಆನಂದಪುರ ವಲಯದ ಒಕ್ಕೂಟದ ಅಧ್ಯಕ್ಷರುಗಳು, ಪೂಜಾ ಸಮಿತಿ ಯ ಸದಸ್ಯರು ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕರಾದ ಸಂತೋಷ್ ಸ್ವಾಗತಿಸಿದರು, ಕೃಷಿ ಮೇಲ್ವಿಚಾರಕರಾದ ಕೃಷ್ಣಮೂರ್ತಿ ನಿರೂಪಿಸಿದರು. ವಲಯದ ಸೇವಾ ಪ್ರತಿನಿಧಿ ಗಳು ಹಾಗೂ ಸಿ ಎಸ್ ಸಿ ಸೇವಾ ದಾರರು ಸಹಕರಿಸಿದರು.

Share. Facebook Twitter LinkedIn WhatsApp Email

Related Posts

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

2 Mins Read

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

1 Min Read

ನಾಳೆಯಿಂದ ಶಾಲಾ ವಿದ್ಯಾರ್ಥಿಗಳ ‘ಫ್ರೀ ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ: ಹಣ ಕಟ್ಟಿದ್ದವರಿಗೆ ವಾಪಾಸ್

2 Mins Read
Recent News

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

BREAKING: ಎಲೋನ್ ಮಸ್ಕ್ ಒಡೆತನದ ‘SpaceX’ ಮತ್ತು ‘Starlink’ ಅನ್ನು ಮಿಲಿಟರಿ ಟಾರ್ಗೆಟ್ ಎಂದು ಘೋಷಿಸಿದ ಇರಾನ್!

​ಜುಲೈ 15ರೊಳಗೆ ಬರಲಿದೆ ಹೊಸ ರೂಪದ ‘IRCTC’ ವೆಬ್‌ಸೈಟ್: ರೈಲು ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಆಗಲಿವೆ ಭಾರಿ ಬದಲಾವಣೆಗಳು!

​ಬಾದಾಮಿ ಖರೀದಿಯಲ್ಲಿ ₹82 ರೂಪಾಯಿ ವಂಚನೆ: ಗ್ರಾಹಕ ನ್ಯಾಯಾಲಯದಲ್ಲಿ ಹೋರಾಡಿ ₹7,000 ಪರಿಹಾರ ಗೆದ್ದ ಗ್ರಾಹಕ!

State News
KARNATAKA

BIG NEWS: ಸಾಗರದಲ್ಲಿ ‘ಪೆಟ್ರೋಲ್ ಕದಿಯೋ ಗ್ಯಾಂಗ್’ ಆಕ್ಟೀವ್: ಬಸ್, ರೈಲ್ವೆ ನಿಲ್ದಾಣದ ‘ಬೈಕ್’ಗಳೇ ಕಳ್ಳರ ಟಾರ್ಗೆಟ್!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ದಿನದಿಂದ ದಿನಕ್ಕೆ ಪೆಟ್ರೋಲ್ ದರ ಗಗನಕ್ಕೇರುತ್ತಿರುವ ಬೆನ್ನಲ್ಲೇ, ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ವಿನೂತನ ಕಳ್ಳರ ಗ್ಯಾಂಗ್…

GOOD NEWS: ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಇನ್ಮುಂದೆ 10 ಕೆಜಿ ಅಕ್ಕಿ ವಿತರಣೆಗೆ ಸರ್ಕಾರದ ಆದೇಶ

ನಾಳೆಯಿಂದ ಶಾಲಾ ವಿದ್ಯಾರ್ಥಿಗಳ ‘ಫ್ರೀ ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ: ಹಣ ಕಟ್ಟಿದ್ದವರಿಗೆ ವಾಪಾಸ್

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಕೋರ್ಟ್‌ಗೆ ದೋಷಾರೋಪಣೆ ಪಟ್ಟಿ ಸಲ್ಲಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.