ಬೆಂಗಳೂರು: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಕೆ ಎಸ್ ಆರ್ ಟಿ ಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ, ನಾಳೆಯಿಂದ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಸರ್ಕಾರವು ಆದೇಶ ಸಂಖ್ಯೆ: ಟಿಡಿ 45 ಟಿಸಿಎಸ್ 2020, ದಿನಾಂಕ:09-03-2021, ಟಿಡಿ 45 ಟಿಸಿಎಸ್ 2020, ದಿನಾಂಕ:23-03-2021 ಹಾಗೂ ಟಿಡಿ 45 ಟಿಸಿಎಸ್ 2020, ದಿನಾಂಕ:18-01-2025 ರನ್ವಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ನಿಗಮ, ಕ.ಕ.ರ.ಸಾ.ನಿಗಮ ಮತ್ತು ವಾ.ಕ.ರ.ಸಾ.ನಿಗಮಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ.
ತತ್ಸಂಬಂದ, ಕ.ರಾ.ರ.ಸಾ.ನಿಗಮವು ಸುತ್ತೋಲೆ ಸಂಖ್ಯೆ:1690 ದಿನಾಂಕ:26-03-2021 ಮತ್ತು ಸುತ್ತೋಲೆ ಸಂಖ್ಯೆ: 1736 ದಿನಾಂಕ: 18.06.2025 ರಲ್ಲಿ ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ದಿನಾಂಕ: 01-01-2026ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಲಿದ್ದು, ದಿನಾಂಕ: 31-01-2026ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಸಾಮಾನ್ಯ ವರ್ಗಾವಣೆ, ಪತಿ-ಪತ್ನಿ/ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು/ತೀವ್ರ ತರಹದ ಅನಾರೋಗ್ಯ (ಹೆಚ್.ಐ.ವಿ, ಹೃದಯರೋಗ, ಕ್ಯಾನ್ಸರ್, ಸ್ಪೈನಲ್ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಬಂಧಿಸಿದ ಖಾಯಿಲೆಗಳು) ಹೊಂದಿರುವ ನೌಕರರು ಮತ್ತು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದೆ.








