ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಜೋರಾಗಿತ್ತು. ಒಂದು ಕಡೆ ದರ್ಶನ್ ಅಭಿಮಾನಿಗಳು ಮತ್ತೊಂದು ಕಡೆ ನಟ ಕಿಚ್ಚ ಸುದೀಪ್ ಅಭಿಮಾನಿಗಳ ನಡುವೆ ಸ್ಟಾರ್ ವಾರ್ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿತ್ತು.
ಕೆಲವು ಕಿಡಿಗೇಡಿಗಳು ಇನ್ನೊಂದು ಹೆಜ್ಜೆ ಮುಂದೆ ಹೋಗಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿರುವ ಘಟನೆ ನಡೆದಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಸ್ಕ್ರೀನ್ ಶಾಟ್ ಗಳ ಸಮೇತ ಬೆಂಗಳೂರು ಕಮಿಷನರ್ ಅವರನ್ನು ಭೇಟಿಯಾಗಿ ವಿಜಯಲಕ್ಷ್ಮಿ ದೂರು ಸಲ್ಲಿಸಿದ್ದರು. ಬಳಿಕ ಸಿಸಿಬಿ ಕ್ರೈಮ್ ಠಾಣೆಗೂ ಕೂಡ ಅವರು ದೂರು ನೀಡಿದ್ದರು. ಇದೀಗ ಸಿಸಿಬಿ ಕ್ರೈಂ ಠಾಣೆ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.








