Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ನಿರ್ಣಯ: ಸಚಿವ ಮಧು ಬಂಗಾರಪ್ಪ

02/01/2026 4:02 PM

BREAKING: ಕರ್ನಾಟಕ CET 2026 ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 22, 23 & 24ರಂದು ಪರೀಕ್ಷೆ ಫಿಕ್ಸ್ | KCET Exam-2026

02/01/2026 3:57 PM

BREAKING : ‘ಚಾರ್ಟರ್ಡ್ ಅಕೌಂಟೆನ್ಸಿ ಸಂಸ್ಥೆ’ಗಳಿಗೆ ಬಿಗ್ ರಿಲೀಫ್ ; ‘ಪೀರ್ ರಿವ್ಯೂ’ ಅನುಷ್ಠಾನ ಗಡುವು 1 ವರ್ಷ ವಿಸ್ತರಣೆ

02/01/2026 3:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಕರ್ನಾಟಕ CET 2026 ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 22, 23 & 24ರಂದು ಪರೀಕ್ಷೆ ಫಿಕ್ಸ್ | KCET Exam-2026
KARNATAKA

BREAKING: ಕರ್ನಾಟಕ CET 2026 ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 22, 23 & 24ರಂದು ಪರೀಕ್ಷೆ ಫಿಕ್ಸ್ | KCET Exam-2026

By kannadanewsnow0902/01/2026 3:57 PM

ಬೆಂಗಳೂರು: 2026ನೇ ಸಾಲಿನ ಸಿಇಟಿ ಪರೀಕ್ಷೆಗೆ ನಾವು ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಜ.17ರಂದು ಅರ್ಜಿ ಬಿಡುಗಡೆ ಮಾಡಲಿದ್ದೇವೆ. ಈ ಬಾರಿಯ ವಿಶೇಷ ಅಂದರೆ, ಅರ್ಜಿ ಸಲ್ಲಿಸುವ ಪ್ರತಿಯೊಬ್ಬ ಅಭ್ಯರ್ಥಿಯ ಹೆಸರೂ, ಹುಟ್ಟಿದ ದಿನಾಂಕ, ವಿಳಾಸ ಇತ್ಯಾದಿ ವಿವರಗಳನ್ನು ಆಧಾರ್ ಅಥವಾ ಡಿಜಿ ಲಾಕರ್ ಮೂಲಕ ಪ್ರಾಮಾಣೀಕರಿಸುವ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಹೆಸರು ಬರೆಯುವುದರಲ್ಲಿ ಆಗುತ್ತಿದ್ದ ತಪ್ಪು ಗಳನ್ನು ತಪ್ಪಿಸಬಹುದು ಎಂಬುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ.

ಸಚಿವ ಡಾ.ಎಂ.ಸಿ.ಸುಧಾಕರ ಮತ್ತು ಡಾ.ಶರಣ ಪ್ರಕಾಶ ಪಾಟೀಲ ಅವರ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

* ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಅಧ್ಯಯನ ಮಾಡಲು ಬಯಸುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನು ಮೂರು ದಶಕಗಳಿಂದಲೂ ನಡೆಸಿಕೊಂಡು ಬರುತ್ತಿರುವ ಹೆಗ್ಗಳಿಕೆ ಹೊಂದಿದೆ.

* ಪಿಜಿ ಮತ್ತು ಯುಜಿ ನೀಟ್‌ ಕೌನ್ಸೆಲಿಂಗ್‌, ಪಿಜಿಸಿಇಟಿ/ಪಿಜಿಇಟಿ, ಕೆ-ಸೆಟ್‌ ಹಾಗೂ ಪದವಿ ಕಾಲೇಜು ಉಪನ್ಯಾಸಕರು, ಪಿಎಸ್‌ಐ ಸೇರಿದಂತೆ ಇತರ ಪ್ರಮುಖ ನೇಮಕಾತಿ ಪರೀಕ್ಷೆಗಳನ್ನೂ ಅತ್ಯಂತ ಸಮರ್ಥವಾಗಿ ನಡೆಸಿಕೊಂಡು ಬಂದಿದೆ.

* ಪ್ರಾಧಿಕಾರವು ಕಾಲದಿಂದ ಕಾಲಕ್ಕೆ ಹಲವು ಬದಲಾವಣೆಗಳಿಗೆ ತೆರೆದುಕೊಂಡಿದ್ದು, ಕೃತಕ ಬುದ್ಧಿಮತ್ತೆಯಂತಹ (Artifical Inteligence) ಆಧುನಿಕ ತಂತ್ರಜ್ಞಾನವನ್ನು ಕೂಡ ತನ್ನ ಪರೀಕ್ಷಾ ಪ್ರಕ್ರಿಯೆಯಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಂಡಿದೆ.

* ಈ ಮೂಲಕ 2025ನೇ ಸಾಲಿನ ಸಿಇಟಿ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದು, ಜನರ ಮನ ಗೆದ್ದಿದೆ.

* 2025ರಲ್ಲಿ ಎದುರಾದ ಸವಾಲುಗಳನ್ನು ಗಮನದಲ್ಲಿ ಇಟ್ಟುಕೊಂಡು 2026ನೇ ಸಾಲಿನ ಸಿಇಟಿ ಪ್ರಕ್ರಿಯೆಗೆ ಹೊಸ ರೀತಿಯಲ್ಲಿ ಸಿದ್ಧತೆ ಆರಂಭಿಸಲಾಗಿದೆ.

ಸಿಇಟಿ ದಿಕ್ಸೂಚಿ

* ಇದರ ಒಂದು ಭಾಗವಾಗಿ ಸಿಇಟಿ ದಿಕ್ಸೂಚಿ ಕಿರು ಹೊತ್ತಿಗೆಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಅರ್ಜಿ ತುಂಬುವುದರಿಂದ ಹಿಡಿದು ಶುಲ್ಕ ವಿವರ, ಲಭ್ಯವಿರುವ ಸೀಟುಗಳು, ಅರ್ಹತಾ ಮಾನದಂಡಗಳು, ಪರೀಕ್ಷಾ ಕೇಂದ್ರಗಳು, ಹೀಗೆ ಸಮಗ್ರ ವಿವರಗಳು ಇದರಲ್ಲಿ ಇವೆ. ಸರಳ ಭಾಷೆಯಲ್ಲಿ ವಿವರಿಸಿರುವ ಕೈಪಿಡಿಯನ್ನು ಸಿಇಟಿ ತೆಗೆದುಕೊಳ್ಳುವ ಪ್ರತಿ ವಿದ್ಯಾರ್ಥಿಗೂ ಆಯಾ ಕಾಲೇಜುಗಳ ಮೂಲಕವೇ ತಲುಪಿಸಲಾಗುವುದು.

* ಸರ್ಕಾರಿ ಸೇರಿದಂತೆ ಮಾನ್ಯತೆ ಪಡೆದ ಒಟ್ಟು 3,112 ವಿಜ್ಞಾನ ಪಿಯು ಕಾಲೇಜುಗಳು ರಾಜ್ಯದಲ್ಲಿ ಇದ್ದು, ಇವುಗಳಲ್ಲಿ ದ್ವಿತೀಯ ಪಿಯುಸಿಯಲ್ಲಿ 2,92,733 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇದರ ಜತೆಗೆ ರಾಜ್ಯದಲ್ಲಿನ ಸಿಬಿಎಸ್ಇ ಹಾಗೂ ಇಐಎಸ್ಇ ಕಾಲೇಜುಗಳಲ್ಲಿ ಓದುವ 83 ಸಾವಿರ ಮಂದಿಯನ್ನೂ ಸೇರಿಸಿದರೆ ಅವರ ಒಟ್ಟು ಸಂಖ್ಯೆ 3,75,507 ಆಗಲಿದೆ. ಇಷ್ಟೂ ಮಂದಿಗೆ ಬಹಳ ವ್ಯವಸ್ಥಿತವಾಗಿ ಕೈಪಿಡಿ ತಲುಪಿಸುವ ಕೆಲಸ ಮಾಡಲಾಗುವುದು.

ಕಾಲೇಜು ಹಂತದಲ್ಲೇ ಅರ್ಜಿ ಭರ್ತಿ

* ಆನ್ ಲೈನ್ ನಲ್ಲಿ ಪರಿಶೀಲನೆಯಾಗದವರ ದಾಖಲೆಗಳನ್ನು ಕಾಲೇಜು ಹಂತದಲ್ಲಿ ಪರಿಶೀಲನೆಗೆ ಕಳೆದ ವರ್ಷ ಅವಕಾಶ ನೀಡಲಾಗಿತ್ತು. ಈ ಪ್ರಯೋಗ ಅತ್ಯಂತ ಯಶಸ್ವಿಯಾಗಿದ್ದು, ಈ ಬಾರಿ ಇದರ ಜತೆಗೆ ಕಾಲೇಜು ಹಂತದಲ್ಲೇ ಅರ್ಜಿ ಭರ್ತಿ ಮಾಡುವುದಕ್ಕೂ ನೆರವಾಗಲು ಕೆಇಎ ಮುಂದಾಗಿದೆ.

* ಪ್ರತಿಯೊಂದು ಪಿಯು ವಿಜ್ಞಾನ ಕಾಲೇಜುಗಳ ಆಯ್ದ ಉಪನ್ಯಾಸಕರಿಗೆ ಅರ್ಜಿ ಭರ್ತಿ ಬಗ್ಗೆ ಆನ್ ಲೈನ್ ತರಬೇತಿ ನೀಡಲಾಗುವುದು. ಬಳಿಕ ಆ ಉಪನ್ಯಾಸಕರು ತಮ್ಮ ಕಾಲೇಜಿನ ಇತರ ಸಿಬ್ಬಂದಿಗೆ ತರಬೇತಿ ನೀಡಿ, ವಿದ್ಯಾರ್ಥಿಗಳ ಅರ್ಜಿ ಭರ್ತಿಯ ಮೇಲ್ವಿಚಾರಣೆ ನಡೆಸಲಿದ್ದಾರೆ. ಅನುಮಾನಗಳಿಗೆ ಪರಿಹಾರ ನೀಡಲಿದ್ದಾರೆ. ಇದರಿಂದ ಅರ್ಜಿ ಭರ್ತಿ ವೇಳೆ ಆಗುತ್ತಿದ್ದ ತಪ್ಪುಗಳಿಗೆ ಕಡಿವಾಣ ಹಾಕಬಹುದು. ಹಾಗೂ ಸೈಬರ್ ಸೆಂಟರ್ ಗಳ ಮೇಲೆ ಅವಲಂಬಿಸುವುದನ್ನೂ ಕಡಿಮೆ ಮಾಡಬಹುದು.

ಮತ್ತಷ್ಡು ಕಾಲೇಜುಗಳಿಗೆ ಸಿಇಟಿ ಮಂಥನ

* ಕೋರ್ಸ್/ ಕಾಲೇಜು (ಆಪ್ಷನ್ಸ್ ಎಂಟ್ರಿ) ಆಯ್ಕೆ ಕುರಿತು ಆಪ್ಶನ್ ದಾಖಲಿಸಲು ನೆರವಾಗುವ `ಸಿಇಟಿ ಮಂಥನ’ ಕಾರ್ಯಕ್ರಮವನ್ನು ಕಳೆದ ವರ್ಷ ಸೀಮಿತ ಸಂಖ್ಯೆಯ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ನಡೆಸಲಾಗಿತ್ತು. ಇದು ವಿದ್ಯಾರ್ಥಿ/ಪೋಷಕರ ಮನ ಗೆದ್ದಿತ್ತು. ಹೀಗಾಗಿ 2026-27ನೇ ಸಾಲಿಗೆ ಅನ್ವಯವಾಗುವಂತೆ ಇನ್ನೂ ಹೆಚ್ಚಿನ ಕಾಲೇಜುಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸಲು ಕೆಇಎ ತೀರ್ಮಾನಿಸಿದೆ. ಇದನ್ನು ಆಯಾ ಸಂಸ್ಥೆಗಳು ಕಾಲೇಜು ಪ್ರವಾಸ ವಾಗಿಯೂ ಮಾರ್ಪಡಿಸಿಕೊಳ್ಳಬಹುದು. ಬಂದಂತಹ ಪೋಷಕರಿಗೆ ಕಾಲೇಜಿನಲ್ಲಿನ ಮೂಲಸೌಕರ್ಯ ಪ್ರದರ್ಶನಕ್ಕೂ ಅವಕಾಶವಾಗಲಿದೆ.

ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹೆಲ್ಪ್ ಡೆಸ್ಕ್

* ಇದಲ್ಲದೆ, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ, ಅನುದಾನಿತ ಎಂಜಿನಿಯರಿಂಗ್ ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕೂಡ ಆಪ್ಷನ್ಸ್ ಎಂಟ್ತಿ ಸಂದರ್ಭದಲ್ಲಿ ಹೆಲ್ಪ್ ಡೆಸ್ಕ್ ಮಾಡಲಾಗುವುದು. ಕಾಲೇಜಿನ ಕಂಪ್ಯೂಟರ್ ಲ್ಯಾಬ್ ಗಳನ್ನು ಆಪ್ಷನ್ಸ್ ಎಂಟ್ರಿ ಗೆ ಬಳಕೆ ಮಾಡಲಾಗುವುದು.

* ಈ ಬಾರಿ ದಾಖಲೆಗಳ ಪರಿಶೀಲನೆಯ ನಂತರ ಅರ್ಜಿಯನ್ನು ಪೋರ್ಟಲ್ ನಲ್ಲಿ ಮುದ್ರಣ ಮಾಡಿಕೊಳ್ಳುವುದಕ್ಕೂ ವ್ಯವಸ್ಥೆ ಮಾಡಲಾಗಿದೆ.

ಜಾಗೃತಿಗೆ ಸಾಮಾಜಿಕ ಮಾಧ್ಯಮದ ಬಳಕೆ

* ಕೆಇಎ ತನ್ನ ವೆಬ್ ಸೈಟ್ ಮೂಲಕ ಮಾಹಿತಿ ರವಾನಿಸುವುದರ ಜತೆಗೆ ಅನೇಕ ಸಾಮಾಜಿಕ ಮಾಧ್ಯಮಗಳ ಮೂಲಕವೂ ವಿದ್ಯಾರ್ಥಿಗಳು/ಪೋಷಕರನ್ನು ತಲುಪುವ ಕೆಲಸ ಮಾಡುತ್ತಿದೆ.

ಎಕ್ಸ್ ಖಾತೆ

* ಅಭ್ಯರ್ಥಿಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಆಯಾ ಕ್ಷಣದಲ್ಲೇ ಟ್ವೀಟ್ ಮೂಲಕ ತಲುಪಿಸಲು X ಖಾತೆಯನ್ನು (@KEA_karnataka) ಹೊಂದಿದೆ. ಇದಕ್ಕೆ 45 ಸಾವಿರಕ್ಕೂ ಹೆಚ್ಚು ಫಾಲೋಯರ್ಸ್ ಇದ್ದಾರೆ.

ಕೆಇಎ ವಿಕಸನ ಯೂಟ್ಯೂಬ್ ಚಾನೆಲ್

* ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಇಎ ವಿಕಸನ ಯೂಟ್ಯೂಬ್ ಚಾನಲ್ ಆರಂಭಿಸಿದ್ದು, ಇದಕ್ಕೆ 85 ಸಾವಿರಕ್ಕೂ ಹೆಚ್ವು ಮಂದಿ ಫಾಲೋಯರ್ಸ್ ಇದ್ದಾರೆ. ಪ್ರತಿ ಹಂತದ ಬೆಳವಣಿಗೆಗಳನ್ನು ವಿಡಿಯೊ ರೆಕಾರ್ಡ್ ಮಾಡಿ ಅಪ್ ಲೋಡ್ ಮಾಡಲಾಗುತ್ತದೆ

ಕೆಇಎ ಬಾಟ್

* ಇಷ್ಟೇ ಅಲ್ಲದೆ, KEABOT ಮೂಲಕವೂ ಜನರನ್ನು ತಲುಪುವ ಕೆಲಸ ಮಾಡಲಾಗುತ್ತಿದೆ. ಕೆಇಎ ಬಾಟ್ ಗೆ ಹೋಗಿ ಕೇವಲ ಟೈಪ್ ಮಾಡುವುದರ ಮೂಲಕ ತಮಗೆ ಬೇಕಾದ ಯಾವುದೇ ಮಾಹಿತಿ ಬೇಕಾದರೂ ಪಡೆಯಬಹುದು. ಈ ಮೂಲಕ 18.5 ಲಕ್ಷಕ್ಕೂ ಹೆಚ್ಚು ವಿವಿಧ ರೀತಿಯ ಪ್ರಶ್ನೆಗಳನ್ನು ಕೇಳಿ ಮಾಹಿತಿ ಪಡೆದಿರುವುದು ಸಂತಸದ ವಿಷಯ.

ಕಾಲೇಜು ಪೋರ್ಟಲ್

* ಸಿಇಟಿ ಫಲಿತಾಂಶದ ನಂತರ, ಸೀಟು ಹಂಚಿಕೆಗೂ ಮುನ್ನ ಆಪ್ಶನ್‌ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಈ ಸಂದರ್ಭದಲ್ಲಿ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳುವುದಕ್ಕೂ ಮುನ್ನ ಆ ಕಾಲೇಜುಗಳಲ್ಲಿನ ಮೂಲಸೌಲಭ್ಯ, ಶೈಕ್ಷಣಿಕ ವಾತಾವರಣ, ಸಿಬ್ಬಂದಿ, ಶುಲ್ಕ, ಪ್ರಯೋಗಾಲಯ ಇತ್ಯಾದಿಯ ಮಾಹಿತಿ ಕೂಡ ಲಭ್ಯವಾಗುವ ಹಾಗೆ ಕಾಲೇಜು ಪೋರ್ಟಲ್‌ ಗೆ ಲಿಂಕ್‌ ಕೊಡುವ ವ್ಯವಸ್ಥೆ ಮಾಡಲಾಗುತ್ತದೆ. ಕಾಲೇಜಿಗೆ ಸೇರಬೇಕೊ ಬೇಡವೊ ಎನ್ನುವುದನ್ನು ನಿರ್ಧರಿಸಲು ಇದು ನೆರವಾಗುತ್ತದೆ. ಎಷ್ಟೋ ಮಂದಿ ಕಾಲೇಜಿನ ಮಾಹಿತಿ ಇಲ್ಲದೆ, ಆಪ್ಶನ್‌ ದಾಖಲಿಸಿ, ನಂತರ ಸೀಟು ಸಿಕ್ಕಿದ ಮೇಲೆ, ಅಯ್ಯೊ ಅದು ಸರಿ ಇಲ್ಲ; ಮತ್ತೊಂದು ಕಡೆ ಕೊಡಿ ಎನ್ನುವುದು ಮಾಮೂಲು. ಹೀಗಾಗಿ ಈ ರೀತಿಯ ಹೊಸ ಉಪಕ್ರಮ ಸೂಕ್ತ ಕಾಲೇಜುಗಳ ಆಯ್ಕೆಗೆ ನೆರವಾಗಲಿದೆ.

Share. Facebook Twitter LinkedIn WhatsApp Email

Related Posts

ನಾಳೆಯಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ನಿರ್ಣಯ: ಸಚಿವ ಮಧು ಬಂಗಾರಪ್ಪ

02/01/2026 4:02 PM2 Mins Read

ದೇಶಕ್ಕೆ ಮಾದರಿಯಾದ ‘BTM ವಿಧಾನಸಭಾ ಕ್ಷೇತ್ರ’: Solid Waste Management ಯಶಸ್ವಿಯಾಗಿ ಅನುಷ್ಠಾನ

02/01/2026 3:50 PM2 Mins Read

BREAKING: ಬಳ್ಳಾರಿಯಲ್ಲಿ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸಿಎಂ ಸಿದ್ಧರಾಮಯ್ಯ ಸೂಚನೆ

02/01/2026 3:37 PM1 Min Read
Recent News

ನಾಳೆಯಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ನಿರ್ಣಯ: ಸಚಿವ ಮಧು ಬಂಗಾರಪ್ಪ

02/01/2026 4:02 PM

BREAKING: ಕರ್ನಾಟಕ CET 2026 ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 22, 23 & 24ರಂದು ಪರೀಕ್ಷೆ ಫಿಕ್ಸ್ | KCET Exam-2026

02/01/2026 3:57 PM

BREAKING : ‘ಚಾರ್ಟರ್ಡ್ ಅಕೌಂಟೆನ್ಸಿ ಸಂಸ್ಥೆ’ಗಳಿಗೆ ಬಿಗ್ ರಿಲೀಫ್ ; ‘ಪೀರ್ ರಿವ್ಯೂ’ ಅನುಷ್ಠಾನ ಗಡುವು 1 ವರ್ಷ ವಿಸ್ತರಣೆ

02/01/2026 3:56 PM

ದೇಶಕ್ಕೆ ಮಾದರಿಯಾದ ‘BTM ವಿಧಾನಸಭಾ ಕ್ಷೇತ್ರ’: Solid Waste Management ಯಶಸ್ವಿಯಾಗಿ ಅನುಷ್ಠಾನ

02/01/2026 3:50 PM
State News
KARNATAKA

ನಾಳೆಯಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ನಿರ್ಣಯ: ಸಚಿವ ಮಧು ಬಂಗಾರಪ್ಪ

By kannadanewsnow0902/01/2026 4:02 PM KARNATAKA 2 Mins Read

ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಎಡದಂಡೆ ನಾಲೆಗೆ ನಿರಂತರವಾಗಿ…

BREAKING: ಕರ್ನಾಟಕ CET 2026 ವೇಳಾಪಟ್ಟಿ ಪ್ರಕಟ: ಏಪ್ರಿಲ್‌ 22, 23 & 24ರಂದು ಪರೀಕ್ಷೆ ಫಿಕ್ಸ್ | KCET Exam-2026

02/01/2026 3:57 PM

ದೇಶಕ್ಕೆ ಮಾದರಿಯಾದ ‘BTM ವಿಧಾನಸಭಾ ಕ್ಷೇತ್ರ’: Solid Waste Management ಯಶಸ್ವಿಯಾಗಿ ಅನುಷ್ಠಾನ

02/01/2026 3:50 PM

BREAKING: ಬಳ್ಳಾರಿಯಲ್ಲಿ ಗುಂಪು ಘರ್ಷಣೆ : ತನಿಖೆ ನಡೆಸಿ ವರದಿ ನೀಡಲು ಸಿಎಂ ಸಿದ್ಧರಾಮಯ್ಯ ಸೂಚನೆ

02/01/2026 3:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.