ಬೆಂಗಳೂರು : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ಆಗಿ ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ ಕಾಂಗ್ರೆಸ್ ಹಾಗೂ ಬಿಜೆಪಿಯ 26 ಕಾರ್ಯಕರ್ತರನ್ನು ಅರೆಸ್ಟ್ ಮಾಡಿದ್ದು ಅಲ್ಲದೆ, ಸೋಮಶೇಖರ ರೆಡ್ಡಿ ಗನ್ ಮ್ಯಾನ್ ಗುರುಚರಣ ಸಿಂಗ್ ನನ್ನು ಅರೆಸ್ಟ್ ಮಾಡಿ ಬೆಂಗಳೂರಿಗೆ ಕರೆ ತಂದಿದ್ದಾರೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೊಲೆ ಆರೋಪಿ ಗನ್ ಮ್ಯಾನ್ ಗುರು ಚರಣ್ ಸಿಂಗ್ ನಾಲ್ವರು ಗನ್ ಮ್ಯಾನ್, ಸೇರಿದಂತೆ ಎಲ್ಲಾ ಆರೋಪಿಗಳನ್ನು ಪೊಲೀಸರು ಹಾಜರುಪಡಿಸಿದ್ದರು. ವಿಚಾರಣೆಯ ವೇಳೆ ಪೊಲೀಸರು ಕಸ್ಟಡಿಗೆ ಕೇಳದ ಹಿನ್ನೆಲೆ, ಎಲ್ಲಾ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿತು. ವಿಚಾರಣೆಯ ವೇಳೆ ತನಿಖಾಧಿಕಾರಿ ವಿರುದ್ಧ ಜಡ್ಜ್ ಗರಂ ಆಗಿದ್ದಾರೆ. ಅರೆಸ್ಟ್ ಮೆಮೋ ಬಗ್ಗೆ ತನಿಖಾಧಿಕಾರಿಗೆ ಪ್ರಶ್ನೆ ಮಾಡಿದ್ದು ಎಲ್ಲಾ ಆರೋಪಿಗಳದ್ದು ಒಂದೇ ಅರೆಸ್ಟ್ ಮೆಮೋ ಇದೆಯಲ್ಲ ಯಾಕೆ? ಎಂದು ತನಿಖಾಧಿಕಾರಿಗಳಿಗೆ ಪ್ರಶ್ನೆ ಕೇಳಿ ಗರಂ ಆಗಿದ್ದಾರೆ.
ಕಲಂ ನಂಬರ್ 6 ಇದೆಯಲ್ಲ ಅದು ಏನು ಹೇಳುತ್ತೆ? ನಾಲ್ಕು ಜನರ ಅರೆಸ್ಟ್ ಗೂ ಒಂದೇ ಇದೆಯಲ್ಲ? ಇದು ಹೇಗೆ? ಸಪರೇಟ್ ಯಾಕೆ ಇಲ್ಲ? ಎಲ್ಲಾ ಆರೋಪಿಗಳ ತಂದೆ ಒಬ್ಬರೇನಾ? ಎಂದು ಜಡ್ಜ್ ಪ್ರಶ್ನೆ ಮಾಡಿದ್ದಾರೆ. ಕೋರ್ಟ್ ಬಳಿ ಪೊಲೀಸರಿಂದ ಭಾರಿ ಬಿಗಿ ಭದ್ರತೆ ಒದಗಿಸಲಾಗಿದೆ. ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಎರಡು ಕೆಎಸ್ಆರ್ಪಿ ತಕುಡಿಗಳನ್ನು ನಿಯೋಜನೆ ಮಾಡಲಾಗಿದ್ದು ಕೆಎಸ್ಆರ್ಪಿ ತುಕುಡಿಗಳ ನಿಯೋಜನೆ ಮಾಡಲಾಗಿದೆ ಜೊತೆಗೆ ಸ್ಥಳೀಯ ಪೊಲೀಸರಿಂದ ಒದಗಿಸಲಾಗಿದೆ.








