Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಾವು

22/03/2026 6:08 PM

BREAKING : ಮಧ್ಯಪ್ರಾಚ್ಯ ಸಂಘರ್ಷದ ನಡುವೆ ದೇಶದ ಇಂಧನ ಪರಿಸ್ಥಿತಿ ಪರಿಶೀಲನೆಗೆ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ!

22/03/2026 5:42 PM

48 ಗಂಟೆಗಳ ಗಡುವು ನೀಡಿದ ಟ್ರಂಪ್ ; ಹಾರ್ಮುಜ್ ಜಲಸಂಧಿ ‘ಶತ್ರುಗಳಿಗೆ ಮಾತ್ರ’ ಮುಚ್ಚಲಾಗಿದೆ ಎಂದ ಇರಾನ್!

22/03/2026 5:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಳ್ಳಾರಿಯಲ್ಲಿ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರೋದು ನಿಜ: HDK
KARNATAKA

ಬಳ್ಳಾರಿಯಲ್ಲಿ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರೋದು ನಿಜ: HDK

By kannadanewsnow0906/01/2026 3:43 PM

ಬೆಂಗಳೂರು: ಬಳ್ಳಾರಿ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರುವ ಬಗ್ಗೆ ಅಲ್ಲಿನ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಬಳ್ಳಾರಿಯಲ್ಲಿ ಗನ್ ಮ್ಯಾನ್ ಹಾರಿಸಿದ ಗುಂಡಿಗೆ ಬಲಿಯಾದ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಲಾಗಿದೆ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿದ್ದಾರೆ.

ತಮ್ಮ ಹೇಳಿಕೆಯ ಬಗ್ಗೆ ಗೃಹ ಸಚಿವ ಪರಮೇಶ್ವರ ಅವರು ನೀಡಿದ್ದ ಪ್ರತಿಕ್ರಿಯೆ ಬಗ್ಗೆ ಖಾರವಾಗಿ ತಿರುಗೇಟು ನೀಡಿರುವ ಕೇಂದ್ರ ಸಚಿವರು; ಗೃಹ ಸಚಿವ ಪರಮೇಶ್ವರ ಅವರೇ, ಬಳ್ಳಾರಿಯಲ್ಲಿ ಕಗ್ಗೊಲೆಯಾದ ನಿಮ್ಮದೇ ಪಕ್ಷದ ನತದೃಷ್ಟ ಕಾರ್ಯಕರ್ತನ ಡಬಲ್ ಪೋಸ್ಟ್ ಮಾರ್ಟಂ ಕಥಾನಕದ ಬಗ್ಗೆ ನಾನು ಹೇಳಿದ್ದು ಸತ್ಯ. ಸತ್ತ ಶರೀರವನ್ನೂ ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುವ ನಿಮ್ಮ ಕೀಳು ನಡವಳಿಕೆ ಕುರಿತು ನಾನು ಹೇಳಿದ್ದು ಅಕ್ಷರಶಃ ನಿಜ ಎಂದಿದ್ದಾರೆ.

ಡಬಲ್ ಪೋಸ್ಟ್ ಮಾರ್ಟಂ ಅಸತ್ಯವಾದರೆ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ. ಆಗ ನಿಮ್ಮ ಪೋಸ್ಟ್ ಮಾರ್ಟಂ ಮಾಯಾಜಾಲ ಬಯಲಾಗುತ್ತದೆ. ಮಾಡಿಸುತ್ತೀರಾ ಮಾನ್ಯ ಮಂತ್ರಿಗಳೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಈ ಪ್ರಕರಣ ಮುಚ್ಚಿಹಾಕಲು ನಿಮ್ಮ ಸರಕಾರ ನಡೆಸುತ್ತಿರುವ ಮಹಾನ್ ಹರಸಾಹಸ ಏನೇನ್ ಎಂಬುದು ನನಗೆ ಗೊತ್ತಿದೆ. ಹಾಗೆಯೇ, ಬಿಮ್ಸ್ ಅಧಿಕ್ಷಕರ ಹೇಳಿಕೆಯನ್ನೂ ಗಮನಿಸಿದ್ದೇನೆ. ಅವರ ಪ್ರಕಾರ 6 ಗಂಟೆಯಿಂದ ಶುರುವಾದ ಪೋಸ್ಟ್ ಮಾರ್ಟಂ 3 ಗಂಟೆಗಳ ಕಾಲ ನಡೆದು ವಿಳಂಬವಾಯಿತು. ದೇಹದಲ್ಲಿ ಅನೇಕ ಚೂರುಗಳು ಇದ್ದವು ಎಂದು ಹೇಳಿದ್ದಾರೆ, ಸರಿ. ಆದರೆ, ಆ ವೈದ್ಯರೇ ಮರಣೋತ್ತರ ಪರೀಕ್ಷೆ ಮುಗಿಸಬಹುದಿತ್ತು. ಹಾಗಿದ್ದ ಮೇಲೆ ಇನ್ನೊಬ್ಬ ವೈದ್ಯರನ್ನು ಕರೆಸಿಕೊಂಡ ಗುಟ್ಟೇನು? ಮೃತದೇಹ ಪರೀಕ್ಷೆಗೆ ಎಷ್ಟು ವೈದ್ಯರು ಬೇಕು? ಮರಣೋತ್ತರ ಪರೀಕ್ಷೆ ವೇಳೆ ನೀವು ಜೀವ ಉಳಿಸಬೇಕಿತ್ತ? ಅಥವಾ ಸತ್ಯ ಹುಡುಕಬೇಕಿತ್ತಾ? ಆಗ ನೀವು ಕರೆಸಬೇಕಿದ್ದದ್ದು ಪೊರೆನ್ಸಿಕ್ ತಜ್ಞರನ್ನು ಎಂದು ಗೃಹ ಸಚಿವರಿಗೆ ತರಾಟೆ ತೆಗೆದುಕೊಂಡಿದ್ದಾರೆ.

ಪೋಸ್ಟ್ ಮಾರ್ಟಂ ವೇಳೆ ಆ ಇಬ್ಬರು ವೈದ್ಯರ ನಡುವೆ ಏನೆಲ್ಲಾ ತಿಕ್ಕಾಟ ನಡೆಯಿತು? ಎನ್ನುವುದು ಕೂಡ ನನಗೆ ಗೊತ್ತಿದೆ. ಬಿಮ್ಸ್ ಅಧಿಕ್ಷಕರ ಹೇಳಿಕೆಯಲ್ಲೇ ನಿಮಗೆ ಪ್ರಶ್ನೆಯೂ ಅಡಗಿದೆ, ಉತ್ತರವೂ ಇದೆ. ಮೊದಲ ವೈದ್ಯರೇ ಮರಣೋತ್ತರ ಪರೀಕ್ಷೆ ಮುಗಿಸಬಹುದಿತ್ತು. ಇನ್ನೊಬ್ಬ ವೈದ್ಯರ ಅವಶ್ಯಕತೆ ಏನಿತ್ತು? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ.

ಸಮಾಜವನ್ನು ಹಾಳು ಮಾಡಲಿಕ್ಕೊ ಅಥವಾ ನಿಮ್ಮ ತನಿಖೆ ದಿಕ್ಕು ತಪ್ಪಿಸಲಿಕ್ಕೊ, ಮಾಹಿತಿ ಇಲ್ಲದೆಯೋ ನಾನು ಹೇಳಿದ್ದಲ್ಲ. ಮೃತದೇಹವನ್ನೂ ನಿಮ್ಮ ಮನೆಹಾಳು ರಾಜಕೀಯಕ್ಕೆ ಬಳಸಿಕೊಂಡಿದ್ದನ್ನು ರಾಜ್ಯದ ಜನತೆಗೆ ಗಮನಕ್ಕೆ ತಂದಿದ್ದೇನೆ, ಪ್ರಶ್ನಿಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

BREAKING: ಆಧಾರ್ ಪಿವಿಸಿ ಕಾರ್ಡ್ ಶುಲ್ಕ ರೂ.25 ಹೆಚ್ಚಳ | Aadhar PVC Card

ಸಾಗರದ ‘ಮಾರಿಜಾತ್ರೆ’ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕರೆ

Share. Facebook Twitter LinkedIn WhatsApp Email

Related Posts

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಾವು

22/03/2026 6:08 PM1 Min Read

ದಾವಣಗೆರೆ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ: ನಾಳೆ ‘ಸಾದಿಕ್ ಪೈಲ್ವಾನ್’ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

22/03/2026 5:30 PM1 Min Read

ಬೆಂಗಳೂರಲ್ಲಿ ನೀರಿನ ಬಿಲ್ ಬಾಕಿ ಪಾವತಿಗೆ ಒಂದು ಬಾರಿ ಪರಿಹಾರ ಯೋಜನೆ ಜಾರಿ: ಅಸಲು ಕಟ್ಟಿದ್ರೆ ಬಡ್ಡಿ ಮನ್ನಾ!

22/03/2026 5:25 PM2 Mins Read
Recent News

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಾವು

22/03/2026 6:08 PM

BREAKING : ಮಧ್ಯಪ್ರಾಚ್ಯ ಸಂಘರ್ಷದ ನಡುವೆ ದೇಶದ ಇಂಧನ ಪರಿಸ್ಥಿತಿ ಪರಿಶೀಲನೆಗೆ ಪ್ರಧಾನಿ ಮೋದಿ ಉನ್ನತ ಮಟ್ಟದ ಸಭೆ!

22/03/2026 5:42 PM

48 ಗಂಟೆಗಳ ಗಡುವು ನೀಡಿದ ಟ್ರಂಪ್ ; ಹಾರ್ಮುಜ್ ಜಲಸಂಧಿ ‘ಶತ್ರುಗಳಿಗೆ ಮಾತ್ರ’ ಮುಚ್ಚಲಾಗಿದೆ ಎಂದ ಇರಾನ್!

22/03/2026 5:31 PM

ದಾವಣಗೆರೆ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ: ನಾಳೆ ‘ಸಾದಿಕ್ ಪೈಲ್ವಾನ್’ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

22/03/2026 5:30 PM
State News
KARNATAKA

ಕರ್ತವ್ಯದಲ್ಲಿದ್ದಾಗಲೇ ಕುಸಿದು ಬಿದ್ದು ಗ್ರಾಮ ಪಂಚಾಯಿತಿ ಸಿಬ್ಬಂದಿ ಸಾವು

By kannadanewsnow0922/03/2026 6:08 PM KARNATAKA 1 Min Read

ಹೊಸಪೇಟೆ: ಕರ್ತವ್ಯನಿರತ ಗ್ರಾಮ ಪಂಚಾಯಿತಿ ಸಿಬ್ಬಂದಿಯೊಬ್ಬರು ಹಠಾತ್ತನೆ ಕುಸಿದು ಬಿದ್ದು ಮೃತಪಟ್ಟಿರುವ ವಿಷಾದನೀಯ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ…

ದಾವಣಗೆರೆ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದ ಅಸಮಾಧಾನ: ನಾಳೆ ‘ಸಾದಿಕ್ ಪೈಲ್ವಾನ್’ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

22/03/2026 5:30 PM

ಬೆಂಗಳೂರಲ್ಲಿ ನೀರಿನ ಬಿಲ್ ಬಾಕಿ ಪಾವತಿಗೆ ಒಂದು ಬಾರಿ ಪರಿಹಾರ ಯೋಜನೆ ಜಾರಿ: ಅಸಲು ಕಟ್ಟಿದ್ರೆ ಬಡ್ಡಿ ಮನ್ನಾ!

22/03/2026 5:25 PM

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

22/03/2026 5:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.