ಬೆಂಗಳೂರು: ವಾಯುಭಾರ ಕುಸಿತದ ಪರಿಣಾಮ ಬೆಂಗಳೂರು ಸೇರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ 2 ದಿನ ಹಗುರ ಮಳೆ ಜೊತೆಗೆ ಚಳಿಯೂ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯ ಶ್ರೀಲಂಕಾದ ಪೂರ್ವ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮಳೆ ಮಾರುತಗಳು ಸೃಷ್ಟಿಯಾಗಿವೆ. ತಮಿಳುನಾಡು, ಆಂಧ್ರ ಹಾಗೂ ತೆಲಂಗಾಣ ಸೇರಿ ರಾಜ್ಯದ ದಕ್ಷಿಣ ಒಳನಾಡಿನ ಮೇಲೆ ಹಾದು ಹೋಗುತ್ತಿವೆ. ಇದರಿಂದ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ 2 ದಿನ ಹಗುರ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ವಿಜಯಪುರ, ಬೀದರ್, ಧಾರವಾಡದಲ್ಲಿ ಚಳಿ ಮುಂದುವರೆದಿದ್ದು, ಶೀತ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.








