ರಾಯಚೂರು: ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ, ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವಂತ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ದೇವದುರ್ಗದ ಸಿರವಾರ ಕ್ರಾಸ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದಂತ ಶಾಂತಪ್ಪ(62) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿ ಶಾಂತಪ್ಪ ಕೆಲಸ ಮಾಡುತ್ತಿದ್ದರು. ಚಾಲನೆ ವೇಳೆಯಲ್ಲಿ ನಿಯಂತ್ರಣ ತಪ್ಪಿ ಸಿರವಾರ ಕ್ರಾಸ್ ನಲ್ಲಿ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ಕಾರಿನಲ್ಲಿದ್ದಂತ ಮಾರೆಪ್ಪ, ಶಿನು ಪವಾರ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.








