Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SBI ಗ್ರಾಹಕರಿಗೆ ಬಿಗ್ ಶಾಕ್! ‘ATM’ ವಿತ್ ಡ್ರಾ ಈಗ ಹೆಚ್ಚು ದುಬಾರಿ, ಬ್ಯಾಲೆನ್ಸ್ ಚೆಕ್ ಮಾಡಲು ಕೂಡ ಶುಲ್ಕ!

17/01/2026 10:02 PM

ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

17/01/2026 9:54 PM

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿಕೂಟ ಕ್ಲೀನ್ ಸ್ವೀಪ್: ಶಾಸಕ ಆನಂದ್, ಮಾಜಿ MLA ಕುಮಾರಸ್ವಾಮಿ ಸೋಲು

17/01/2026 9:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ
KARNATAKA

ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

By kannadanewsnow0917/01/2026 9:54 PM

ಶಿವಮೊಗ್ಗ : ಬರುವ ಏಪ್ರಿಲ್ ನಂತರ ಮನೆಗಳಿಂದ ಪ್ಲಾಸ್ಟಿಕ್ ಸಂಗ್ರಹ ಮಾಡಲು ಪ್ರತ್ಯೇಕ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಹಸಿಕಸ ಮತ್ತು ಒಣಕಸ ಸಂಗ್ರಹಣೆ ಜೊತೆಗೆ ಪ್ರತ್ಯೇಕವಾಗಿ ಪ್ಲಾಸ್ಟಿಕ್ ಕಸ ಸಂಗ್ರಹಿಸಲು ಉದ್ದೇಶಿಸಲಾಗಿದೆ ಎಂದು ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ.ನಾಗಪ್ಪ ತಿಳಿಸಿದ್ದಾರೆ.

ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪುರಭವನದಲ್ಲಿ ಶನಿವಾರ ನಗರಸಭೆ ವತಿಯಿಂದ 2026-27ನೇ ಸಾಲಿನ ಆಯವ್ಯಯ ತಯಾರಿಸುವ ಕುರಿತು ಕರೆಯಲಾಗಿದ್ದ ಸಾರ್ವಜನಿಕರೊಂದಿಗಿನ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಅವರು, ಪ್ಲಾಸ್ಟಿಕ್ ಸಂಗ್ರಹಣೆ ನಿರ್ವಹಣೆ ಸವಾಲಿನಂತಾಗಿದೆ. ಮೊದಲ ಬಾರಿಗೆ ದಾವಣಗೆರೆ ದಾಲ್ಮಿಯ ಸಿಮೆಂಟ್ ಕಂಪನಿಗೆ ನಗರಸಭೆಯಿಂದ 26 ಟನ್ ಕಸವನ್ನು ಕೆ.ಜಿ.ಗೆ ಒಂದು ಪೈಸೆಯಂತೆ ಕಳಿಸಲಾಗಿದೆ. ಅಲ್ಲಿ ಪ್ಲಾಸ್ಟಿಕನ್ನು ಇಟ್ಟಿಗೆ ತಯಾರಿಸಲು ಉಪಯೋಗಿಸುತ್ತಾರೆ. ಒಂದರ್ಥದಲ್ಲಿ ನಮಗೆ ಪ್ಲಾಸ್ಟಿಕ್ ವಿಲೇವಾರಿಗೆ ಇದ್ದ ಆತಂಕ ದೂರವಾಗಿದೆ. ಸಂಗಳ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಪ್ಲಾಸ್ಟಿಕ್ ಸಂಗ್ರಹಣೆಯನ್ನು ವಿಲೇವಾರಿ ಮಾಡುವ ನಿಟ್ಟಿನಲ್ಲಿ ಬೇರೆಬೇರೆ ಮಾರ್ಗೋಪಾಯಗಳನ್ನು ಹುಡುಕಲಾಗುತ್ತಿದೆ ಎಂದು ಹೇಳಿದರು.

ಸಾಗರ ನಗರವ್ಯಾಪ್ತಿಯಲ್ಲಿ ದಿನದ 24 ಗಂಟೆ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು 230 ಕೋಟಿ ರೂ. ಮಂಜೂರು ಮಾಡಲು ಅಗತ್ಯ ಸಿದ್ದತೆ ನಡೆದಿದೆ. ಈ ಅನುದಾನದಲ್ಲಿ ನಗರವ್ಯಾಪ್ತಿಯಲ್ಲಿರುವ ನಲ್ಲಿಗಳಿಗೆ ಮೀಟರ್ ಅಳವಡಿಕೆ ಸೇರಿದಂತೆ ಸಮರ್ಪಕ ನೀರು ಪೂರೈಕೆಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ನಗರವ್ಯಾಪ್ತಿಯಲ್ಲಿ 12ಸಾವಿರಕ್ಕೂ ಅಧಿಕ ಬೀದಿದೀಪಗಳಿದ್ದು ಅವುಗಳ ನಿರ್ವಹಣೆಗೆ ಸಿಸಿಎಂಎಸ್ ಸ್ಕೀಂನಡಿ ಅಗತ್ಯ ಕ್ರಮ ತೆಗೆದುಕೊಂಡು ಎಲ್.ಇ.ಡಿ. ಬಲ್ಬ್ಗಳನ್ನು ಅಳವಡಿಸಲು ಚಿಂತನೆ ನಡೆಸಲಾಗಿದೆ. ಸಮಾಲೋಚನಾ ಸಭೆಯಲ್ಲಿ ಸಾರ್ವಜನಿಕರಿಂದ ಬಂದ ಸಲಹೆಗಳನ್ನು ಬಜೆಟ್ ತಯಾರಿಸುವ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ಸಭೆಯಲ್ಲಿ ಮಾಜಿ ಸದಸ್ಯ ರವಿಕುಮಾರ್ ಮಾತನಾಡಿ ಈಸ್ವತ್ತು ತುರ್ತಾಗಿ ಸಿಗಬೇಕು. ನಲ್ಲಿಗಳಿಗೆ ಕಡ್ಡಾಯವಾಗಿ ಮೀಟರ್ ಅಳವಡಿಕೆ ಮಾಡಲು ಮನವಿ ಮಾಡಿದರೆ, ಮಾಜಿ ಉಪಾಧ್ಯಕ್ಷೆ ಮರಿಯಾ ಲೀಮಾ ಐದಾರು ವಾರ್ಡ್ಗೆ ಒಂದoತೆ ಕಸ ವಿಲೇವಾರಿ ಘಟಕದ ಯಂತ್ರ ಅಳವಡಿಸಲು ಒತ್ತಾಯಿಸಿದರು. ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಮಹೇಶ್ ಹೆಗಡೆ ಬಜೆಟ್‌ನಲ್ಲಿ ಪತ್ರಕರ್ತರ ತುರ್ತು ಆರೋಗ್ಯಕ್ಕಾಗಿ 5 ಲಕ್ಷ ರೂ. ನಿಧಿ ಇರಿಸಲು ಮನವಿ ಮಾಡಿದರೆ, ಎಸ್.ವಿ.ಹಿತಕರ ಜೈನ್ ಸೋಲಾರ್ ಬೀದಿದೀಪ ಅಳವಡಿಸಲು ಮನವಿ ಮಾಡಿದರು. ಸಾಮಾಜಿಕ ಕಾರ್ಯಕರ್ತ ಜಮೀಲ್ ಜಾತ್ರೆ ಹಿನ್ನೆಲೆಯಲ್ಲಿ ಸಾಗರದ ವಾರ್ಡ್ ಗಳ ವ್ಯಾಪ್ತಿಯಲ್ಲಿ  ಹೆಚ್ಚಿನ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲು ಸಲಹೆ ನೀಡಿದರು. ಪುರುಷೋತ್ತಮ್ ಬೀದಿನಾಯಿಗಳ ಹಾವಳಿ ತಡೆಗಟ್ಟಲು ಒತ್ತಾಯಿಸಿದರು.

ಈ ವೇಳೆ ಸಾಗರ ನಗರಸಭೆಯ ಆರೋಗ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮದನ್, ವ್ಯವಸ್ಥಾಪಕ ಬಾಲಚಂದ್ರ, ಕಂದಾಯ ನಿರೀಕ್ಷಕಿ ಎಸ್.ಎಲ್ ಮಮತಾ ಹಾಜರಿದ್ದರು.

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿಕೂಟ ಕ್ಲೀನ್ ಸ್ವೀಪ್: ಶಾಸಕ ಆನಂದ್, ಮಾಜಿ MLA ಕುಮಾರಸ್ವಾಮಿ ಸೋಲು

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿಕೂಟ ಕ್ಲೀನ್ ಸ್ವೀಪ್: ಶಾಸಕ ಆನಂದ್, ಮಾಜಿ MLA ಕುಮಾರಸ್ವಾಮಿ ಸೋಲು

17/01/2026 9:46 PM1 Min Read

ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿಯ ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಪ್ರಕಟ

17/01/2026 9:36 PM1 Min Read

ಬಿಜೆಪಿಗರು ತಮ್ಮ ಪಾಂಡಿತ್ಯ ಪ್ರದರ್ಶಿಸುವ ಬರದಲ್ಲಿ ದುರಾಡಳಿತ ಜಗಜಾಹ್ಹೀರ: ಸಚಿವ ರಾಮಲಿಂಗಾರೆಡ್ಡಿ

17/01/2026 8:55 PM1 Min Read
Recent News

SBI ಗ್ರಾಹಕರಿಗೆ ಬಿಗ್ ಶಾಕ್! ‘ATM’ ವಿತ್ ಡ್ರಾ ಈಗ ಹೆಚ್ಚು ದುಬಾರಿ, ಬ್ಯಾಲೆನ್ಸ್ ಚೆಕ್ ಮಾಡಲು ಕೂಡ ಶುಲ್ಕ!

17/01/2026 10:02 PM

ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

17/01/2026 9:54 PM

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿಕೂಟ ಕ್ಲೀನ್ ಸ್ವೀಪ್: ಶಾಸಕ ಆನಂದ್, ಮಾಜಿ MLA ಕುಮಾರಸ್ವಾಮಿ ಸೋಲು

17/01/2026 9:46 PM

ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿಯ ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಪ್ರಕಟ

17/01/2026 9:36 PM
State News
KARNATAKA

ಏಪ್ರಿಲ್ ನಿಂದ ಪ್ಲಾಸ್ಟಿಕ್ ಸಂಗ್ರಹಕ್ಕೆ ಪ್ರತ್ಯೇಕ ವ್ಯವಸ್ಥೆ ಜಾರಿ: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

By kannadanewsnow0917/01/2026 9:54 PM KARNATAKA 2 Mins Read

ಶಿವಮೊಗ್ಗ : ಬರುವ ಏಪ್ರಿಲ್ ನಂತರ ಮನೆಗಳಿಂದ ಪ್ಲಾಸ್ಟಿಕ್ ಸಂಗ್ರಹ ಮಾಡಲು ಪ್ರತ್ಯೇಕ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ. ಹಸಿಕಸ ಮತ್ತು…

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೈತ್ರಿಕೂಟ ಕ್ಲೀನ್ ಸ್ವೀಪ್: ಶಾಸಕ ಆನಂದ್, ಮಾಜಿ MLA ಕುಮಾರಸ್ವಾಮಿ ಸೋಲು

17/01/2026 9:46 PM

ಬೆಂಗಳೂರು ನಗರ ಜಿಲ್ಲಾ ಯೋಜನಾ ಸಮಿತಿಯ ಮೂರು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳಾಪಟ್ಟಿ ಪ್ರಕಟ

17/01/2026 9:36 PM

ಬಿಜೆಪಿಗರು ತಮ್ಮ ಪಾಂಡಿತ್ಯ ಪ್ರದರ್ಶಿಸುವ ಬರದಲ್ಲಿ ದುರಾಡಳಿತ ಜಗಜಾಹ್ಹೀರ: ಸಚಿವ ರಾಮಲಿಂಗಾರೆಡ್ಡಿ

17/01/2026 8:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.