Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

15/03/2026 6:07 PM

ದೇವರ ದೀಪಕ್ಕೆ ಎಳ್ಳೆಣ್ಣೆ ಉಪಯೋಗಿಸಿದರೆ ಕಷ್ಟಗಳು ದೂರ

15/03/2026 6:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ ಯೋಜನೆ’ಯಡಿ ಮನೆ ಬಾಗಿಲಿಗೆ ಬರಲಿದೆ `ರೇಷನ್’.!
KARNATAKA

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ ಯೋಜನೆ’ಯಡಿ ಮನೆ ಬಾಗಿಲಿಗೆ ಬರಲಿದೆ `ರೇಷನ್’.!

By kannadanewsnow5720/01/2026 5:20 AM

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು 75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ಏಕ ಸದಸ್ಯ ಪಡಿತರ ಚೀಟಿದಾರರಿಗೆ “ಅನ್ನ ಸುವಿಧ” ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಿಸುವ ಕಾರ್ಯಕ್ರಮ ಪ್ರಾರಂಭಿಸಿದೆ.

ಮುಖ್ಯಮಂತ್ರಿಯವರು ಕಳೆದ ಬಜೆಟ್ನಾಲ್ಲಿ, 75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ಏಕ ಸದಸ್ಯ ಪಡಿತರ ಚೀಟಿದಾರರಿಗೆ “ಅನ್ನ ಸುವಿಧ” ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಿಸುವಂತೆ ಘೋಷಿಸಿರುತ್ತಾರೆ. ಅದರನ್ವಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಚಿತ್ರದುರ್ಗ ಜಿಲ್ಲೆಯಲ್ಲಿ ಜನವರಿ-2026ರ ಅನ್ನಸುವಿಧ ಮಾಡ್ಯುಲ್ನರಲ್ಲಿ ಇ.ಕೆ.ವೈ.ಸಿಯಾದ ಒಟ್ಟು 6,336 ಏಕ ಸದಸ್ಯ ಪಡಿತರ ಚೀಟಿದಾರರ ಆಯಾ ನ್ಯಾಯಬೆಲೆ ಅಂಗಡಿ ಲಾಗಿನ್ನಿಲ್ಲಿ ಲಭ್ಯವಿದ್ದು, “ಅನ್ನ ಸುವಿಧ” ಯೋಜನೆಯಡಿ ಅವರ ಮನೆಯ ಬಾಗಿಲಿಗೆ ಪಡಿತರ ಧಾನ್ಯ ತಲುಪಿಸುವ ಕಾರ್ಯ ಪ್ರಾರಂಭಿಸಿದೆ.

ಜನವರಿ-2026ರ ಅನ್ನಸುವಿಧ ಮಾಡ್ಯುಲ್ನನಲ್ಲಿ ಇಕೆವೈಸಿಯಾದ ಶೇ.75ಕ್ಕಿಂತ ಹೆಚ್ಚಿನ ವಯಸ್ಸಿನ ಏಕ ಸದಸ್ಯ ಹಿರಿಯ ನಾಗರಿಕರ ತಾಲ್ಲೂಕುವಾರು ವಿವರ ಇಂತಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 123 ನ್ಯಾಯಬೆಲೆ ಅಂಗಡಿಗಳು, 1,517 ಪಡಿತರ ಚೀಟಿಗಳು ಇವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 151 ನ್ಯಾಯಬೆಲೆ ಅಂಗಡಿಗಳು, 1,127 ಪಡಿತರ ಚೀಟಿಗಳು ಇವೆ. ಹಿರಿಯೂರು ತಾಲ್ಲೂಕಿನಲ್ಲಿ 92 ನ್ಯಾಯಬೆಲೆ ಅಂಗಡಿಗಳು, 1,467 ಪಡಿತರ ಚೀಟಿಗಳು ಇವೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 96 ನ್ಯಾಯಬೆಲೆ ಅಂಗಡಿಗಳು, 869 ಪಡಿತರ ಚೀಟಿಗಳು ಇವೆ. ಹೊಸದುರ್ಗ ತಾಲ್ಲೂಕಿನಲ್ಲಿ 110 ನ್ಯಾಯಬೆಲೆ ಅಂಗಡಿಗಳು, 921 ಪಡಿತರ ಚೀಟಿಗಳು ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 50 ನ್ಯಾಯಬೆಲೆ ಅಂಗಡಿಗಳು, 435 ಪಡಿತರ ಚೀಟಿಗಳು ಇವೆ.

ನ್ಯಾಯಬೆಲೆ ಅಂಗಡಿ ಮಾಲೀಕರು ಪ್ರತಿ ತಿಂಗಳು 01 ರಿಂದ 05 ರೊಳಗಾಗಿ ಪಡಿತರ ಚೀಟಿದಾರರ ಸಮ್ಮತಿಯನ್ನು ಓ.ಟಿ.ಪಿ ಮುಖಾಂತರ ಪಡೆಯಬೇಕು. ನಂತರ ದಿನಾಂಕ 06 ರಿಂದ 15 ರೊಳಗೆ ದಿನಾಂಕವನ್ನು ನಿಗಧಿಪಡಿಸಿ, ನಿಗಧಿಪಡಿಸಿದ ದಿನದಂತೆ ಓ.ಟಿ.ಪಿ ಮತ್ತು ಬಯೋಮೆಟ್ರಿಕ್ ಪಡೆದು, ನ್ಯಾಯಬೆಲೆ ಅಂಗಡಿ ಮಾಲೀಕರು 75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ಮನೆಯ ಬಾಗಿಲಿಗೆ ಪಡಿತರವನ್ನು ವಿತರಿಸುತ್ತಿರುತ್ತಾರೆ.

ಆದರೆ ಪ್ರಸ್ತುತ ಪಡಿತರ ಚೀಟಿದಾರರಿಗೆ ಅನುಕೂಲವಾಗುವ ಸಲುವಾಗಿ ಪ್ರತಿ ಮಾಹೆ ಮೊದಲನೇಯ ದಿನಾಂಕದಿಂದ ಮಾಹೆಯ ಕೊನೆಯ ದಿನಾಂಕದವರೆಗೂ ನ್ಯಾಯಬೆಲೆ ಅಂಗಡಿ ಮಾಲೀಕರ ಲಾಗಿನ್ನಗಲ್ಲಿ ಪಡಿತರ ಚೀಟಿದಾರರ ಸಮ್ಮತಿಯನ್ನು ಓ.ಟಿ.ಪಿ.ಮುಖಾಂತರ ಪಡೆದು, ನಂತರ ದಿನಾಂಕವನ್ನು ನಿಗದಿಪಡಿಸಿ, ಓಟಿಪಿ ಮತ್ತು ಬಯೋಮೆಟ್ರಿಕ್ ಪಡೆದು, ನ್ಯಾಯಬೆಲೆ ಅಂಗಡಿ ಮಾಲೀಕರು ಶೇ.75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರ ಮನೆಯ ಬಾಗಿಲಿಗೆ ಪಡಿತರ ಆಹಾರಧಾನ್ಯವನ್ನು ವಿತರಿಸಲು ಅವಕಾಶ ಕಲ್ಪಿಸಲಾಗಿದೆ.

75ಕ್ಕಿಂತ ಹೆಚ್ಚಿನ ವಯಸ್ಸಿನ ಏಕ (ಒಬ್ಬ) ಸದಸ್ಯ ಹಿರಿಯ ನಾಗರಿಕರು ಪಡಿತರವನ್ನು ತಮ್ಮ ಮನೆಯ ಬಾಗಿಲಿಗೆ ಪಡೆದು “ಅನ್ನಸುವಿಧ” ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for senior citizens above 75 years of age in the state: `Ration' will be delivered to the doorstep under the `Anna Suvidha Yojana'!
Share. Facebook Twitter LinkedIn WhatsApp Email

Related Posts

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM1 Min Read

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

15/03/2026 6:07 PM2 Mins Read

ದೇವರ ದೀಪಕ್ಕೆ ಎಳ್ಳೆಣ್ಣೆ ಉಪಯೋಗಿಸಿದರೆ ಕಷ್ಟಗಳು ದೂರ

15/03/2026 6:04 PM4 Mins Read
Recent News

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

15/03/2026 6:07 PM

ದೇವರ ದೀಪಕ್ಕೆ ಎಳ್ಳೆಣ್ಣೆ ಉಪಯೋಗಿಸಿದರೆ ಕಷ್ಟಗಳು ದೂರ

15/03/2026 6:04 PM

ಸಾಗರ ಮಾರಿ ಸಮಿತಿ ಚುನಾವಣೆಯಲ್ಲಿ ದಾಖಲೆಯ ಮತಗಳಿಂದ ಗೆದ್ದ ‘ಪುರುಷೋತ್ತಮ್’ಗೆ ಅಧ್ಯಕ್ಷ ಪಟ್ಟ?

15/03/2026 5:49 PM
State News
KARNATAKA

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

By kannadanewsnow0915/03/2026 6:15 PM KARNATAKA 1 Min Read

ಬೆಂಗಳೂರು: ರಾಜಧಾನಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಎದುರಾಗಿದ್ದು, ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಸಿಲಿಂಡರ್‌ಗಳಿಲ್ಲದೆ ಹೋಟೆಲ್‌ಗಳು ಬಾಗಿಲು…

ವಿಶ್ವ ಕಿಡ್ನಿ ದಿನಾಚರಣೆ: ಸ್ಪರ್ಶ್‌ ಆಸ್ಪತ್ರೆ ಆಯೋಜಿಸಿದ್ದ “ಆರೋಗ್ಯಕಿಡ್ನಿ ಓಟ”ದಲ್ಲಿ 7 ಸಾವಿರ ಮಂದಿ ಭಾಗಿ

15/03/2026 6:07 PM

ದೇವರ ದೀಪಕ್ಕೆ ಎಳ್ಳೆಣ್ಣೆ ಉಪಯೋಗಿಸಿದರೆ ಕಷ್ಟಗಳು ದೂರ

15/03/2026 6:04 PM

ಸಾಗರ ಮಾರಿ ಸಮಿತಿ ಚುನಾವಣೆಯಲ್ಲಿ ದಾಖಲೆಯ ಮತಗಳಿಂದ ಗೆದ್ದ ‘ಪುರುಷೋತ್ತಮ್’ಗೆ ಅಧ್ಯಕ್ಷ ಪಟ್ಟ?

15/03/2026 5:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.