ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಸಮನ್ಸ್ಗೆ ಗೈರುಹಾಜರಾಗಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ED) ಸಲ್ಲಿಸಿದ್ದ ಎರಡು ಪ್ರಕರಣಗಳಲ್ಲಿ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.
ರೂಸ್ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ACJM) ಪರಾಸ್ ದಲಾಲ್ ಈ ಆದೇಶವನ್ನು ಹೊರಡಿಸಿದ್ದಾರೆ.
ತೀರ್ಪಿನ ವಿವರವಾದ ಪ್ರತಿಯನ್ನು ನಿರೀಕ್ಷಿಸಲಾಗಿದೆ.
ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (PMLA) ಸೆಕ್ಷನ್ 50ರ ಅಡಿಯಲ್ಲಿ ಸಂಸ್ಥೆ ಹೊರಡಿಸಿದ ಸಮನ್ಸ್ ಅನ್ನು ಪಾಲಿಸದಿದ್ದಕ್ಕಾಗಿ ಕೇಜ್ರಿವಾಲ್ ವಿರುದ್ಧ ED ಫೆಬ್ರವರಿ 2024 ರಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತು.
ಆಪಾದಿತ ಹಗರಣದ ತನಿಖೆಗೆ ಸಂಬಂಧಿಸಿದಂತೆ ವಿವಿಧ ದಿನಾಂಕಗಳಲ್ಲಿ ಐದು ಸಮನ್ಸ್’ಗಳನ್ನು ನೀಡಿದ್ದರೂ ಕೇಜ್ರಿವಾಲ್ ಕೇಂದ್ರ ಸಂಸ್ಥೆಯ ಮುಂದೆ ಹಾಜರಾಗದಿರಲು ನಿರ್ಧರಿಸಿದ್ದರು.
BREAKING : ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನ ಕಂದಕಕ್ಕೆ ಉರುಳಿ 10 ಮಂದಿ ಸೈನಿಕರು ಹುತಾತ್ಮ!
BREAKING : ‘ಟಿ20 ವಿಶ್ವಕಪ್’ನಿಂದ ಹಿಂದೆ ಸರಿದ ಬಾಂಗ್ಲಾದೇಶ, ಟೂರ್ನಮೆಂಟ್’ಗೆ ಪಾಕಿಸ್ತಾನ ಬಹಿಷ್ಕಾರ : ವರದಿ








