ಬೆಂಗಳೂರು: ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮ ಉಲ್ಲಂಘನೆ ಆರೋಪದ ಹಿನ್ನಲೆಯಲ್ಲಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನೋಟಿಸ್ ನೀಡಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆಯ ಮೇರೆಗೆ ಕೆಪಿಟಿಸಿಎಲ್ ಎಂ.ಡಿಯಾಗಿರುವಂತ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ಸಿಎಸ್ ಶಾಲಿನಿ ರಜನೀಶ್ ಅವರು ನೋಟಿಸ್ ನೀಡಿದ್ದಾರೆ.
ಸಿಎಂ ಸೂಚನೆ ಮೇರೆಗೆ ಪಂಕಜ್ ಕುಮಾರ್ ಪಾಂಡೆಗೆ ನೋಟಿಸ್ ನೀಡಲಾಗಿದ್ದು, ಉಕ್ಷಣವೇ ತಮ್ಮ ಮೇಲಿನ ಗಂಭೀರ ಕರ್ತವ್ಯ ಲೋಪ, ಶಿಸ್ತು ಕ್ರಮದ ಉಲ್ಲಂಘನೆಯ ಬಗ್ಗೆ ಉತ್ತರ ನೀಡುವಂತೆ ಸಿಎಸ್ ಶಾಲಿನಿ ರಜನೀಶ್ ಸೂಚಿಸಿದ್ದಾರೆ.
ಜನವರಿ.20ರಂದು ಮಧ್ಯಾಹ್ನ 12.30ಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿಗೆ ಸೂಚಿಸಲಾಗಿತ್ತು. ಆದರೇ ಪಂಕಜ್ ಕುಮಾರ್ ಪಾಂಡೆ ಅವರು ಸರಿಯಾದ ಸಮಯಕ್ಕೆ ಸಿಎಂ ಭೇಟಿಯಾಗದೇ ಕಡೆಗಣಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದಂತ ಸಿಎಂ ಸಿದ್ಧರಾಮಯ್ಯ ಕೆಂಡಾಮಂಡಲರಾಗಿದ್ದರು.
ಮುಖ್ಯಮಂತ್ರಿ ಕರೆ ಮೇರೆಗೆ ಹಾಜರಾಗದೇ ಕರ್ತವ್ಯಲೋಪ ಎಸಗಿದ್ದಂತ ಆರೋಪ ಪಂಕಜ್ ಕುಮಾರ್ ಪಾಂಡೆ ಮೇಲಿತ್ತು. ಗಂಭೀರ ಕರ್ತವ್ಯ ಲೋಪ, ಶಿಸ್ತು ನಿಯಮಗಳ ಉಲ್ಲಂಘನೆಯ ಹಿನ್ನಲೆಯಲ್ಲಿ ಸಿಎಂ ಶಾಲಿನಿ ರಜನೀಶ್ ಅವರು ಪಂಕಜ್ ಕುಮಾರ್ ಪಾಂಡೆಗೆ ಲಿಖಿತ ನೋಟಿಸ್ ನೀಡಿದ್ದಾರೆ. ತಕ್ಷಣವೇ ಉತ್ತರಿಸುವಂತೆಯೂ ಖಡಕ್ ವಾರ್ನಿಂಗ್ ನೀಡಿದ್ದಾರೆ.








