Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮದ್ದೂರು ಕ್ಷೇತ್ರದಲ್ಲಿ ಇನ್ಮುಂದೆ ಜಲಕ್ಷಾಮ ಎದುರಾಗಲ್ಲ: ಶಾಸಕ ಕೆ.ಎಂ.ಉದಯ್

24/01/2026 7:23 PM

BREAKING: ಶಾಸಕ ಬೇಳೂರು ಗೋಪಾಲಕೃಷ್ಣಗೆ ಮಾಜಿ ಸಚಿವ ಹರತಾಳು ಹಾಲಪ್ಪ ಮಾನನಷ್ಟ ಮೊಕದ್ದಮೆ ನೋಟಿಸ್

24/01/2026 7:12 PM

ನಿಮ್ಮ ಮನಿ ಲೋನ್ ಋಣ ತೀರಿಸಲು, ಈ ಗುಪ್ತ ರಹಸ್ಯ ತಂತ್ರ ಪ್ರಯೋಗ ಮಾಡಿ ಸಾಕು

24/01/2026 6:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಶಾಸಕ ಬೇಳೂರು ಗೋಪಾಲಕೃಷ್ಣಗೆ ಮಾಜಿ ಸಚಿವ ಹರತಾಳು ಹಾಲಪ್ಪ ಮಾನನಷ್ಟ ಮೊಕದ್ದಮೆ ನೋಟಿಸ್
KARNATAKA

BREAKING: ಶಾಸಕ ಬೇಳೂರು ಗೋಪಾಲಕೃಷ್ಣಗೆ ಮಾಜಿ ಸಚಿವ ಹರತಾಳು ಹಾಲಪ್ಪ ಮಾನನಷ್ಟ ಮೊಕದ್ದಮೆ ನೋಟಿಸ್

By kannadanewsnow0924/01/2026 7:12 PM

ಬೆಂಗಳೂರು: ನಾನು ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯ ನೋಟಿಸ್ ಕೊಟ್ಟಿದ್ದೇನೆ. ಅವರು ಸಮರ್ಪಕ ಉತ್ತರ ಕೊಡದೇ ಇದ್ದಲ್ಲಿ 5 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲಿದ್ದೇನೆ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಅವರು ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪದೇಪದೇ ಅವರು ಸಿಗಂದೂರು ದೇವಸ್ಥಾನದ ವಿಷಯ ಪ್ರಸ್ತಾಪ ಮಾಡುತ್ತಾರೆ. ಹಾಲಪ್ಪ ಅವರು ಶಾಸಕರಾಗಿದ್ದಾಗ ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವ ಪ್ರಯತ್ನ ಮಾಡಿದ್ದರೆಂದು ಸುಳ್ಳು ಹೇಳುತ್ತಿದ್ದಾರೆ. ನಾನು ಯಾವತ್ತೂ ಸಿಗಂದೂರು ದೇವಸ್ಥಾನವನ್ನು ಮುಜರಾಯಿಗೆ ಸೇರಿಸುವುದಾಗಲೀ, ಸರಕಾರದ ವಶಕ್ಕೆ ಪಡೆಯುವ ಕುರಿತು ಕನಸು ಮನಸಲ್ಲೂ ಎಣಿಸಿಲ್ಲ. ಆ ರೀತಿ ಯಾವ ಪ್ರಯತ್ನವನ್ನೂ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ನನ್ನ ತಂದೆ, ತಾಯಿ, ಅಜ್ಜ ಅಜ್ಜಿ ಕಾಲದಿಂದಲೂ ಸಿಗಂದೂರು ದೇವಸ್ಥಾನದ ಭಕ್ತರು. ನಾನೂ ಅದರ ಭಕ್ತ. ಸಮಯ ಬಂದಾಗಲೆಲ್ಲ ದೇವಸ್ಥಾನದ ಪರವಾಗಿ ನಿಂತಿದ್ದೇವೆ. ಅದು ದೇವಸ್ಥಾನದ ಆಡಳಿತ ಮಂಡಳಿ ಪರವಾಗಿಯೂ ಅಲ್ಲ; ಭಟ್ಟರ ಪರವಾಗಿಯೂ ಅಲ್ಲ. ಎಲ್ಲರ ಪರವಾಗಿ ದೇವಸ್ಥಾನ ಉಳಿಯಬೇಕು, ಬೆಳೆಯಬೇಕೆಂಬ ಪ್ರಯತ್ನ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ಸರಕಾರ ವಹಿಸಿಕೊಳ್ಳಲಿ, ಮುಜರಾಯಿ ವಹಿಸಿಕೊಳ್ಳಲೆಂದು ಯಾವತ್ತೂ ಹೇಳಿಲ್ಲ ಎಂದು ವಿವರಿಸಿದರು.

ನಾನು ಅಲ್ಲಗಳೆದ ಬಳಿಕವೂ ಗೋಪಾಲಕೃಷ್ಣ ಅವರು ಪದೇಪದೇ ಹೇಳಿದ್ದಾರೆ. ಹಾಲಪ್ಪನವರು ಇದನ್ನು ಮುಜರಾಯಿಗೆ ವಹಿಸಬೇಕೆಂಬ ಪ್ರಯತ್ನ ಮಾಡಿದ್ದಾಗಿ ವಿವಿಧ ಪತ್ರಿಕೆಗಳಲ್ಲಿ ಬಂದಿದೆ ಎಂದು ದೈನಿಕವನ್ನು ಪ್ರದರ್ಶಿಸಿದರು. ಅವರು ಆಟಾಟೋಪದ ಮಾತನ್ನಾಡುತ್ತಾರೆ. ಆದರೆ, ನಾವು ಅಂಥ ಪ್ರಯತ್ನವನ್ನು ಯಾವತ್ತೂ ಮಾಡಿಲ್ಲ ಎಂದು ತಿಳಿಸಿದರು.

ಸಿಗಂದೂರು ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರಿದ್ದಾರೆ. ಅವರಲ್ಲಿ, ದೇವಸ್ಥಾನದ ಅರ್ಚಕರಲ್ಲಿ, ಆಡಳಿತ ಮಂಡಳಿ, ಧರ್ಮದರ್ಶಿಗಳಲ್ಲಿ ತಪ್ಪು ಭಾವನೆ ತರತಕ್ಕಂಥ ಕೆಲಸ ಮಾಡಿ ನನ್ನ ಮಾನ ಹರಾಜು ಹಾಕಬೇಕೆಂದು ಹಾಗೂ ನನಗೆ ಕೆಟ್ಟ ಹೆಸರು ತರಬೇಕೆಂದು ಸತತ ಪ್ರಯತ್ನ ಮಾಡುತ್ತಿದ್ದಾರೆ. ನಾನು ಅಂಥದ್ದೇನೂ ಮಾಡಿಲ್ಲ ಎಂದು ಅನೇಕ ಸಲ ಹೇಳಿದ್ದೇನೆ. ಆದರೂ ಪದೇಪದೇ ಹೇಳಿ ನನ್ನ ತೇಜೋವಧೆ ಮಾಡುವ, ಭಕ್ತರಲ್ಲಿ ತಪ್ಪು ಅಭಿಪ್ರಾಯ ಬರುವಂತೆ ಮಾಡಿದ್ದಾರೆ ಎಂದು ಆಕ್ಷೇಪಿಸಿದರು. ಈ ಸಂಬಂಧ ಅವರಿಗೆ ಕಾನೂನಿನಡಿ ನೋಟಿಸ್ ಕೊಟ್ಟಿದ್ದಾಗಿ ಹೇಳಿದರು.

5 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹಾಕಲಿದ್ದೇನೆ. ಇಲ್ಲವೇ ಬೇಷರತ್ ಕ್ಷಮೆ ಕೇಳಬೇಕು ಅಥವಾ ನಿಮ್ಮ ಬಳಿ ಸಾಕ್ಷ್ಯಾಧಾರ ಇದ್ದರೆ ಒದಗಿಸಬೇಕು ಎಂದು ತಿಳಿಸಿರುವುದಾಗಿ ಹೇಳಿದರು. ಅವರು, ಅವರ ಕುಟುಂಬದವರು ಈ ದೇವಸ್ಥಾನವನ್ನು ಮುಜರಾಯಿಗೆ ವಹಿಸಿ ಕೊಡಬೇಕೆಂದು ಹೇಳಿದ್ದಿದೆ ಎಂದು ಆರೋಪಿಸಿದರು.

ರಾಜಕೀಯದಲ್ಲಿ ಸುಳ್ಳು ಹೇಳುತ್ತಾರೆ; ಅಭಿವೃದ್ಧಿಯ ವಿಷಯದಲ್ಲೂ ಸುಳ್ಳು ಹೇಳುತ್ತಾರೆ. ಆದರೆ, ದೇವರ ವಿಷಯದಲ್ಲಿ ಸುಳ್ಳು ಹೇಳುವ ಇವರಿಗೆ ಕಾನೂನು ಕ್ರಮವೇ ಸರಿಯಾದುದೆಂದು ನೋಟಿಸ್ ಕೊಟ್ಟಿದ್ದೇನೆ ಎಂದು ತಿಳಿಸಿದರು.

ನಿಮ್ಮ ಮನಿ ಲೋನ್ ಋಣ ತೀರಿಸಲು, ಈ ಗುಪ್ತ ರಹಸ್ಯ ತಂತ್ರ ಪ್ರಯೋಗ ಮಾಡಿ ಸಾಕು

ನಾವು ಅನುದಾನದ ವಿಚಾರದಲ್ಲಿ ದಾಖಲೆ ಸಹಿತ ಮಾತು: ಸಾಗರ ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್.ಗಣೇಶ್ ಪ್ರಸಾದ್

Share. Facebook Twitter LinkedIn WhatsApp Email

Related Posts

ಮದ್ದೂರು ಕ್ಷೇತ್ರದಲ್ಲಿ ಇನ್ಮುಂದೆ ಜಲಕ್ಷಾಮ ಎದುರಾಗಲ್ಲ: ಶಾಸಕ ಕೆ.ಎಂ.ಉದಯ್

24/01/2026 7:23 PM2 Mins Read

ನಿಮ್ಮ ಮನಿ ಲೋನ್ ಋಣ ತೀರಿಸಲು, ಈ ಗುಪ್ತ ರಹಸ್ಯ ತಂತ್ರ ಪ್ರಯೋಗ ಮಾಡಿ ಸಾಕು

24/01/2026 6:54 PM5 Mins Read

ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು, ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ: ಸಿಎಂ ಸಿದ್ದರಾಮಯ್ಯ

24/01/2026 6:43 PM2 Mins Read
Recent News

ಮದ್ದೂರು ಕ್ಷೇತ್ರದಲ್ಲಿ ಇನ್ಮುಂದೆ ಜಲಕ್ಷಾಮ ಎದುರಾಗಲ್ಲ: ಶಾಸಕ ಕೆ.ಎಂ.ಉದಯ್

24/01/2026 7:23 PM

BREAKING: ಶಾಸಕ ಬೇಳೂರು ಗೋಪಾಲಕೃಷ್ಣಗೆ ಮಾಜಿ ಸಚಿವ ಹರತಾಳು ಹಾಲಪ್ಪ ಮಾನನಷ್ಟ ಮೊಕದ್ದಮೆ ನೋಟಿಸ್

24/01/2026 7:12 PM

ನಿಮ್ಮ ಮನಿ ಲೋನ್ ಋಣ ತೀರಿಸಲು, ಈ ಗುಪ್ತ ರಹಸ್ಯ ತಂತ್ರ ಪ್ರಯೋಗ ಮಾಡಿ ಸಾಕು

24/01/2026 6:54 PM

BREAKING : ತಿರುಚ್ಚಿ-ಚೆನ್ನೈ ಹೆದ್ದಾರಿಯಲ್ಲಿ ಪೊಲೀಸ್ ವ್ಯಾನ್ ಮೇಲೆ ಬಾಂಬ್ ದಾಳಿ!

24/01/2026 6:51 PM
State News
KARNATAKA

ಮದ್ದೂರು ಕ್ಷೇತ್ರದಲ್ಲಿ ಇನ್ಮುಂದೆ ಜಲಕ್ಷಾಮ ಎದುರಾಗಲ್ಲ: ಶಾಸಕ ಕೆ.ಎಂ.ಉದಯ್

By kannadanewsnow0924/01/2026 7:23 PM KARNATAKA 2 Mins Read

ಮಂಡ್ಯ : ಕಳೆದ 25 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕೂಳಗೆರೆ ಏತ ನೀರಾವರಿ ಯೋಜನೆಯನ್ನು ಪುನಃ ಚಾಲನೆ ನೀಡಿದ್ದು, ಇನ್ನು…

BREAKING: ಶಾಸಕ ಬೇಳೂರು ಗೋಪಾಲಕೃಷ್ಣಗೆ ಮಾಜಿ ಸಚಿವ ಹರತಾಳು ಹಾಲಪ್ಪ ಮಾನನಷ್ಟ ಮೊಕದ್ದಮೆ ನೋಟಿಸ್

24/01/2026 7:12 PM

ನಿಮ್ಮ ಮನಿ ಲೋನ್ ಋಣ ತೀರಿಸಲು, ಈ ಗುಪ್ತ ರಹಸ್ಯ ತಂತ್ರ ಪ್ರಯೋಗ ಮಾಡಿ ಸಾಕು

24/01/2026 6:54 PM

ಕೊಳೆಗೇರಿ ಜನರೂ ಮುಖ್ಯವಾಹಿನಿಗೆ ಬರಬೇಕು, ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ: ಸಿಎಂ ಸಿದ್ದರಾಮಯ್ಯ

24/01/2026 6:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.