ಬೆಂಗಳೂರು : ರಾಜ್ಯದಲ್ಲಿ ಎಂದಿಗೂ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ 2028ಕ್ಕೆ ರಾಜ್ಯದಲ್ಲಿ NDA ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲೆಯ ಬಿಡದಿ ಸಮೀಪದ ಭೈರಮಂಗಲದಲ್ಲಿ ಮಾತನಾಡಿದ ಅವರು ನನ್ನ ಮೇಲೆ ಅಭಿಮಾನ ಇರುವಂತಹ ಯುವಕರು ಘೋಷಣೆ ಕೂಗುತ್ತಾರೆ 2028ಕ್ಕೆ ಹೆಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಅಂತ ಕುಗ್ತಾರೆ ಆದರೆ ಸಭೆಯಲ್ಲಿ ಈಗಾಗಲೇ ನೇರವಾಗಿ ಹೇಳಿದ್ದೇನೆ. ನನಗೆ ಮುಖ್ಯಮಂತ್ರಿ ಆಗುವುದು ಮುಖ್ಯ ಅಲ್ಲ ರಾಜ್ಯದಲ್ಲಿ ಜನತಾ ಸರ್ಕಾರ ಬರಬೇಕು ಅನ್ನುವುದು ನನ್ನ ಹೋರಾಟ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.
2028ಕ್ಕೆ ರಾಮರಾಜ ರೈತರ ಸರ್ಕಾರ ಬರುತ್ತದೆ ಅದಕ್ಕಾಗಿಯೇ ಭಗವಂತ ಆರನೇ ಬಾರಿ ನನ್ನನ್ನು ಬದುಕಿಸಿದ್ದಾನೆ. 2028 ರಲ್ಲಿ ರಾಜ್ಯದಲ್ಲಿ ಜನತೆಯ ಸರ್ಕಾರ, ನಿಜವಾದ ರಾಮರಾಜ್ಯ ಸರ್ಕಾರ ತರಬೇಕು ಅಂತಲೇ ಆ ಭಗವಂತ ನನಗೆ 6ನೇ ಬಾರಿ ಬದುಕುಳಿಸಿದ್ದಾನೆ. ಕಾಂಗ್ರೆಸ್ ಮಹಾನುಭಾವನಿಗೂ ಬುದ್ಧಿ ಹೇಳುತ್ತೇನೆ ಮನೆಹಾಳು ಮಾಡಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ನಾನು ಡಿಸಿಎಂ ಡಿಕೆ ಶಿವಕುಮಾರ್ ರೀತಿ ಕಲ್ಲು ಬಂಡೆ ಒಡೆದು ಬಂದಿಲ್ಲ. ನಾನು ಮನಸ್ಸು ಮಾಡಿದರೆ ಅವರಪ್ಪನ ರೀತಿ ಮಾಡುತ್ತಿದ್ದೆ ನಿಮ್ಮ ಒಂದಿಂಚು ಭೂಮಿ ತೆಗೆದುಕೊಳ್ಳಲು ನಾನು ಬಿಡಲ್ಲ ನನಗೆ ಬೇಕಿರುವುದು ಜನಗಳ ಪ್ರೀತಿ ಎಂದು ರಾಮನಗರದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು.








