Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಅಮೇರಿಕಾದಲ್ಲಿ ಖಾಸಗಿ ಜೆಟ್ ಪತನ: 7 ಮಂದಿ ಸಾವು | private Jet crash

27/01/2026 7:08 AM

ರಾಜ್ಯ ಸರ್ಕಾರದಿಂದ `ಕಟ್ಟಡ ಮಾಲೀಕರಿಗೆ’ ಗುಡ್ ನ್ಯೂಸ್ : ಬಿ-ಖಾತಾ ಆಸ್ತಿಗಳಿಗೆ `ಎ-ಖಾತಾ’ ನೀಡಲು ಮಾರ್ಗಸೂಚಿ ಪ್ರಕಟ

27/01/2026 7:04 AM

ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆ : ‘ಐತಿಹಾಸಿಕ’ ವ್ಯಾಪಾರ ಒಪ್ಪಂದ ಇಂದು ಘೋಷಣೆ

27/01/2026 7:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಕಟ್ಟಡ ಮಾಲೀಕರಿಗೆ’ ಗುಡ್ ನ್ಯೂಸ್ : ಬಿ-ಖಾತಾ ಆಸ್ತಿಗಳಿಗೆ `ಎ-ಖಾತಾ’ ನೀಡಲು ಮಾರ್ಗಸೂಚಿ ಪ್ರಕಟ
KARNATAKA

ರಾಜ್ಯ ಸರ್ಕಾರದಿಂದ `ಕಟ್ಟಡ ಮಾಲೀಕರಿಗೆ’ ಗುಡ್ ನ್ಯೂಸ್ : ಬಿ-ಖಾತಾ ಆಸ್ತಿಗಳಿಗೆ `ಎ-ಖಾತಾ’ ನೀಡಲು ಮಾರ್ಗಸೂಚಿ ಪ್ರಕಟ

By kannadanewsnow5727/01/2026 7:04 AM

ಬೆಂಗಳೂರು : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ರಚಿಸಿರುವ ಬಡವಾಣೆಗಳಲ್ಲಿನ ಬಿ-ಖಾತಾ ನಿವೇಶನ / ಕಟ್ಟಡ / ಅಪಾರ್ಟ್ಮೆಂಟ್ / ಫ್ಲಾಟ್ಗಳಿಗೆ ಎ-ಖಾತಾ ನೀಡುವ ಕುರಿತು ರಾಜ್ಯ ಸರ್ಕಾವು ಮಾರ್ಗಸೂಚಿಗಳನ್ನು ಹೊರಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಿ-ಖಾತಾ ಹೊಂದಿರುವ ನಿವೇಶನಗಳಲ್ಲಿ ಅನಧಿಕೃತ ನಿರ್ಮಾಣಗಳಿಗೆ ಯಾವುದೇ ಕಟ್ಟಡ ವಿನ್ಯಾಸ ಅನುಮೋದನೆಯನ್ನು ನೀಡದ ಕಾರಣ, ಇದು ಅನಿಯಂತ್ರಿತ ನಿರ್ಮಾಣಗಳಿಗೆ ಕಾರಣವಾಗುತ್ತಿರುವುದರಿಂದ ಅಂತಹ ಸಂದರ್ಭಗಳಲ್ಲಿ ಈ ಕೆಳಗಿನ ಕ್ರಮಗಳನ್ನು ಅನ್ವಯಿಸತಕ್ಕದ್ದು.

a. ಖಾಲಿ ನಿವೇಶನಕ್ಕೆ ಸಂಪರ್ಕಿಸುವ ಸಾರ್ವಜನಿಕ ರಸ್ತೆ ಇದೆ ಎಂದು ಖಚಿತಪಡಿಸಿಕೊಳ್ಳಬೇಕು. ಅಂತಹ ಖಾಲಿ ನಿವೇಶನಕ್ಕೆ ಅಥವಾ ಭೂಮಿಗೆ ಸಂಪರ್ಕಿಸುವ ಖಾಸಗಿ ರಸ್ತೆ ಇದ್ದರೆ, ಅದನ್ನು ಕರ್ನಾಟಕ ಪೌರಸಭೆಗಳ ಕಾಯ್ದೆ 1964 ರ ಕಲಂ 177 ಮತ್ತು ಕರ್ನಾಟಕ ಪೌರನಿಗಮಗಳ ಕಾಯ್ದೆ 1976 ರ 284 ರ ನಿಬಂಧನೆಗಳ ಪ್ರಕಾರ “ಸಾರ್ವಜನಿಕ ರಸ್ತೆ” ಎಂದು ಘೋಷಿಸುವುದು.

b. ಸದರಿ ಆಸ್ತಿ ಭೂಪರಿವರ್ತನೆ ಆಗದ ಜಮೀನಿನ ವ್ಯಾಪ್ತಿಯಲ್ಲಿ ಇದ್ದಲ್ಲಿ, ಕರ್ನಾಟಕ ಭೂಕಂದಾಯ ಕಾಯ್ದೆ 1964 ರ ಕಲಂ 95 ರಡಿಯಲ್ಲಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಬೇಕು ಅಥವಾ ಸದರಿ ಕಾಯ್ದೆಯ ಕಲಂ 95 ರ ತಿದ್ದುಪಡಿಯಂತೆ ಸದರಿ ಭೂಮಿಯು ನಗರ ಸ್ಥಳಿಯ ಸಂಸ್ಥೆಗಳ ಅನುಮೋದಿತ ಪರಿಷ್ಕೃತ ಮಾಸ್ಟರ್ ಪ್ಲಾನ್ ವ್ಯಾಪ್ತಿಗೆ ಬಂದರೆ, ಅನುಮೋದಿತ ಮಾಸ್ಟರ್ ಪ್ಲಾನ್ ನಲ್ಲಿ ಸೂಚಿಸಿದಂತೆ ಕೃಷಿಯೇತರ ಉದ್ದೇಶಕ್ಕಾಗಿ ಭೂಪರಿವರ್ತನೆಗೆ ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯವಿಲ್ಲ. ಕರ್ನಾಟಕ ಭೂಕಂದಾಯ ಕಾಯ್ದೆ 1964 ರ ಕಲಂ 95(7) ರಡಿಯಲ್ಲಿ ನಿಗಧಿಪಡಿಸಿದ ಶುಲ್ಕವನ್ನು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 17 ರಡಿಯಲ್ಲಿ ಅನುಮೋದನೆ ಪಡೆಯುವಾಗ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಅರ್ಜಿದಾರರು ಪಾವತಿಸತಕ್ಕದ್ದು.

c. ಭೂಪರಿವರ್ತನೆ ನಂತರದಲ್ಲಿ ಅಂತಹ ಖಾಲಿ ನಿವೇಶನಕ್ಕೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 17 ರಡಿಯಲ್ಲಿ “ಏಕ ನಿವೇಶನ ಅಥವಾ ಬಹು ನಿವೇಶನ ವಿನ್ಯಾಸ” ಆಗಿ ಸಂಬಂಧಿತ ಅನುಮೋದನೆಯನ್ನು ನೀಡುವುದು.

d. ವಿನ್ಯಾಸ ಅನುಮೋದನೆ ಪಡೆದ ನಂತರ ಕರ್ನಾಟಕ ಪೌರಸಭೆಗಳ ಕಾಯ್ದೆ 1964 ರ ಕಲಂ 106 ಮತ್ತು ಕರ್ನಾಟಕ ಪೌರನಿಗಮಗಳ ಕಾಯ್ದೆ 1976 ರ ಕಲಂ 112 ರ ಪ್ರಕಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕೃತ (ಎ-ಖಾತಾ) ಖಾತಾ ನೀಡುವುದು.

2. ನಗರ ಸ್ಥಳೀಯ ಸಂಸ್ಥೆಗಳಿಂದ ಈಗಾಗಲೇ ಬಿ-ಖಾತಾ ಪಡೆದು ಅಥವಾ ಪಡೆಯದೆ ಪರವಾನಿಗೆ ಇಲ್ಲದೇ ನಿರ್ಮಾಣ ಮಾಡಲಾದ ಕಟ್ಟಡಗಳು:

a. ಕಟ್ಟಡ ನಿರ್ಮಾಣ ಮಾಡಿರುವ ನಿವೇಶನಕ್ಕೆ ಸಂಪರ್ಕಿಸುವ ಸಾರ್ವಜನಿಕ ರಸ್ತೆ ಇದೆ ಎಂದು ಖಚಿತಪಡಿಸಿಕೊಳ್ಳಬೇಕು. ಅಂತಹ ಕಟ್ಟಡ ನಿರ್ಮಾಣ ಮಾಡಿರುವ ನಿವೇಶನಕ್ಕೆ ಅಥವಾ ಭೂಮಿಗೆ ಸಂಪರ್ಕಿಸುವ ಖಾಸಗಿ ರಸ್ತೆ ಇದ್ದರೆ, ಅದನ್ನು ಕರ್ನಾಟಕ ಪೌರಸಭೆಗಳ ಕಾಯ್ದೆ 1964 ರ ಕಲಂ 177 ಮತ್ತು ಕರ್ನಾಟಕ ಪೌರನಿಗಮಗಳ ಕಾಯ್ದೆ 1976 ರ 284 ರ ನಿಬಂಧನೆಗಳ ಪ್ರಕಾರ “ಸಾರ್ವಜನಿಕ ರಸ್ತೆ” ಎಂದು ಘೋಷಿಸುವುದು.

b. ಸದರಿ ಆಸ್ತಿ ಭೂಪರಿವರ್ತನೆ ಆಗದ ಜಮೀನಿನ ವ್ಯಾಪ್ತಿಯಲ್ಲಿ ಇದ್ದಲ್ಲಿ, ಕರ್ನಾಟಕ ಭೂಕಂದಾಯ ಕಾಯ್ದೆ 1964 ರ ಕಲಂ 95 ರಡಿಯಲ್ಲಿ ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕಾಗಿ ಪರಿವರ್ತಿಸಬೇಕು ಅಥವಾ ಸದರಿ ಕಾಯ್ದೆಯ ಕಲಂ 95 ರ ತಿದ್ದುಪಡಿಯಂತೆ ಸದರಿ ಭೂಮಿಯು ನಗರ ಸ್ಥಳಿಯ ಸಂಸ್ಥೆಗಳ ಅನುಮೋದಿತ ಪರಿಷ್ಕೃತ ಮಾಸ್ಟರ್ ಪ್ಲಾನ್ ವ್ಯಾಪ್ತಿಗೆ ಬಂದರೆ, ಅನುಮೋದಿತ ಮಾಸ್ಟರ್ ಪ್ಲಾನ್ ನಲ್ಲಿ ಸೂಚಿಸಿದಂತೆ ಕೃಷಿಯೇತರ ಉದ್ದೇಶಕ್ಕಾಗಿ ಭೂಪರಿವರ್ತನೆಗೆ ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯವಿಲ್ಲ. ಕರ್ನಾಟಕ ಭೂಕಂದಾಯ ಕಾಯ್ದೆ 1964 ರ ಕಲಂ 95(7) ರಡಿಯಲ್ಲಿ ನಿಗಧಿಪಡಿಸಿದ ಶುಲ್ಕವನ್ನು ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 17 ರಡಿಯಲ್ಲಿ ಅನುಮೋದನೆ ಪಡೆಯುವಾಗ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಅರ್ಜಿದಾರರು ಪಾವತಿಸತಕ್ಕದ್ದು.

c. ಭೂಪರಿವರ್ತನೆ ನಂತರದಲ್ಲಿ ಕಟ್ಟಡವಿರುವ ನಿವೇಶನಕ್ಕೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರ ಕಲಂ 17 ರಡಿಯಲ್ಲಿ “ಏಕ ನಿವೇಶನ ಅಥವಾ ಬಹು ನಿವೇಶನ ವಿನ್ಯಾಸ” ಆಗಿ ಸಂಬಂಧಿತ ಅನುಮೋದನೆಯನ್ನು ನೀಡುವುದು.

d. ವಿನ್ಯಾಸ ಅನುಮೋದನೆ ಪಡೆದ ನಂತರ ಕರ್ನಾಟಕ ಪೌರಸಭೆಗಳ ಕಾಯ್ದೆ 1964 ರ ಕಲಂ 106 ಮತ್ತು ಕರ್ನಾಟಕ ಪೌರನಿಗಮಗಳ ಕಾಯ್ದೆ 1976 ರ ಕಲಂ 112 ರ ಪ್ರಕಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕೃತ (ಎ-ಖಾತಾ) ಖಾತಾ ನೀಡುವುದು.

e. ಅಸ್ತಿತ್ವದಲ್ಲಿರುವ ಕಟ್ಟಡವು ಕರ್ನಾಟಕ ಪೌರಸಭೆಗಳ ಕಾಯ್ದೆ 1964 ರ ಕಲಂ 187 ಮತ್ತು ಕರ್ನಾಟಕ ಪೌರನಿಗಮಗಳ ಕಾಯ್ದೆ 1976 ಕಲಂ 300 ಅಥವಾ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961 ರಡಿಯಲ್ಲಿ ಅಥವಾ ಸದರಿ ಕಾಯ್ದೆಗಳಡಿ ಮಾಡಲಾದ ವಲಯ ನಿಯಮಗಳನ್ವಯ ಕಟ್ಟಡ ಪರವಾನಿಗೆ ನೀಡಲು ಅರ್ಹವಾಗಿದ್ದಲ್ಲಿ, ಕಟ್ಟಡ ಪರವಾನಿಗೆ ನೀಡುವುದು ಮತ್ತು ಸ್ವಾಧೀನಾನುಭವ ಪ್ರಮಾಣ ಪತ್ರ ನೀಡುವುದು.

f. ಒಂದು ವೇಳೆ ಅಂತಹ ಕಟ್ಟಡವು ವಲಯ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ, ಸದರಿ ಕಟ್ಟಡಕ್ಕೆ “ವಲಯ ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿ ನಿರ್ಮಾಣ ಮಾಡಲಾದ ಕಟ್ಟಡ” ಎಂದು ಷರಾ ದಾಖಲಿಸಿ, ಬಿ-ಖಾತಾ ನೀಡುವುದು. ಕಟ್ಟಡಗಳನ್ನು ವಲಯ ನಿಮಾವಳಿಗಳಿಗೆ ಹಾಗೂ ಮಹಾಯೋಜನೆಗೆ ಅನುಗುಣವಾಗಿಸಲಾದಲ್ಲಿ ಅಂಥಹ ಪ್ರಕರಣಗಳಲ್ಲಿ ಎ-ಖಾತಾ ನೀಡುವುದು.

3. ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ, 1961 ಉಲ್ಲಂಘಿಸಿ ನಿರ್ಮಾಣ ಮಾಡಲಾದ Apartment / ಘಟಕಗಳು:

a. ಅನುಮೋದನೆಯೊಂದಿಗೆ ನಿರ್ಮಿಸಲಾದ Apartment / ಘಟಕಕ್ಕೆ ಸಂಪರ್ಕಿಸುವ ಸಾರ್ವಜನಿಕ ರಸ್ತೆ ಇದೆ ಎಂದು ಖಚಿತಪಡಿಸಿಕೊಳ್ಳಬೇಕು. ಅಂತಹ Apartment / ಘಟಕಕ್ಕೆ ಅಥವಾ ಭೂಮಿಗೆ ಸಂಪರ್ಕಿಸುವ ಖಾಸಗಿ ರಸ್ತೆ ಇದ್ದರೆ, ಅದನ್ನು ಕರ್ನಾಟಕ ಪೌರಸಭೆಗಳ ಕಾಯ್ದೆ 1964 ರ ಕಲಂ 177 ಮತ್ತು ಕರ್ನಾಟಕ ಪೌರನಿಗಮಗಳ ಕಾಯ್ದೆ 1976 ರ 284 ರ ನಿಬಂಧನೆಗಳ ಪುಕಾರ “ಸಾರ್ವಜನಿಕ ರಸ್ತೆ” ಎಂದು ಘೋಷಿಸುವುದು.

           

Good news for 'building owners' from the state government: Guidelines issued for granting 'A-khata' to B-khata properties
Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ಮತ್ತೊಂದು ರಾಬರಿ: ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ

27/01/2026 6:56 AM1 Min Read

ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ಈ ‘ವಾಟ್ಸಾಪ್ ಸಂಖ್ಯೆ’ಗೆ ಮೆಸೇಜ್ ಮಾಡಿ

27/01/2026 6:41 AM1 Min Read

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

27/01/2026 6:33 AM1 Min Read
Recent News

BREAKING: ಅಮೇರಿಕಾದಲ್ಲಿ ಖಾಸಗಿ ಜೆಟ್ ಪತನ: 7 ಮಂದಿ ಸಾವು | private Jet crash

27/01/2026 7:08 AM

ರಾಜ್ಯ ಸರ್ಕಾರದಿಂದ `ಕಟ್ಟಡ ಮಾಲೀಕರಿಗೆ’ ಗುಡ್ ನ್ಯೂಸ್ : ಬಿ-ಖಾತಾ ಆಸ್ತಿಗಳಿಗೆ `ಎ-ಖಾತಾ’ ನೀಡಲು ಮಾರ್ಗಸೂಚಿ ಪ್ರಕಟ

27/01/2026 7:04 AM

ಭಾರತ-ಐರೋಪ್ಯ ಒಕ್ಕೂಟ ಶೃಂಗಸಭೆ : ‘ಐತಿಹಾಸಿಕ’ ವ್ಯಾಪಾರ ಒಪ್ಪಂದ ಇಂದು ಘೋಷಣೆ

27/01/2026 7:03 AM

BREAKING: ರಾಜ್ಯದಲ್ಲಿ ಮತ್ತೊಂದು ರಾಬರಿ: ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ

27/01/2026 6:56 AM
State News
KARNATAKA

ರಾಜ್ಯ ಸರ್ಕಾರದಿಂದ `ಕಟ್ಟಡ ಮಾಲೀಕರಿಗೆ’ ಗುಡ್ ನ್ಯೂಸ್ : ಬಿ-ಖಾತಾ ಆಸ್ತಿಗಳಿಗೆ `ಎ-ಖಾತಾ’ ನೀಡಲು ಮಾರ್ಗಸೂಚಿ ಪ್ರಕಟ

By kannadanewsnow5727/01/2026 7:04 AM KARNATAKA 3 Mins Read

ಬೆಂಗಳೂರು : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ರಚಿಸಿರುವ ಬಡವಾಣೆಗಳಲ್ಲಿನ ಬಿ-ಖಾತಾ ನಿವೇಶನ / ಕಟ್ಟಡ /…

BREAKING: ರಾಜ್ಯದಲ್ಲಿ ಮತ್ತೊಂದು ರಾಬರಿ: ವಿಜಯಪುರದಲ್ಲಿ ಕಂಟ್ರಿ ಪಿಸ್ತೂಲ್ ತೋರಿಸಿ ಚಿನ್ನದ ಅಂಗಡಿ ದರೋಡೆ

27/01/2026 6:56 AM

ಬೆಸ್ಕಾಂ ಗ್ರಾಹಕರ ಗಮನಕ್ಕೆ: ನಿಮ್ಮ ‘ವಿದ್ಯುತ್ ಸಮಸ್ಯೆ’ ನಿವಾರಣೆಗೆ ಈ ‘ವಾಟ್ಸಾಪ್ ಸಂಖ್ಯೆ’ಗೆ ಮೆಸೇಜ್ ಮಾಡಿ

27/01/2026 6:41 AM

Scam Alert: ‘ಮೊಬೈಲ್ ಬಳಕೆದಾರ’ರೇ ಹುಷಾರ್! ಹೀಗೆ ‘ಮಸೇಜ್’ ಬಂದ್ರೆ ಅಪ್ಪಿತಪ್ಪಿಯೂ ಓಪನ್ ಮಾಡಬೇಡಿ

27/01/2026 6:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.