Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇರಾನ್ ಮೇಲಿನ ದಾಳಿಗೆ ವಾಯುಪ್ರದೇಶವನ್ನು ಬಳಸಲು ಅನುಮತಿಸುವುದಿಲ್ಲ’ : ಪುನರುಚ್ಚರಿಸಿದ ಯುಎಇ

27/01/2026 8:36 AM

ರಾಜ್ಯದ ರೈತರೇ ಗಮನಿಸಿ : ಹೀಗಿವೆ ಕೃಷಿಯನ್ನು ಲಾಭದಾಯಕ ಹುದ್ದೆಯನ್ನಾಗಿ ಮಾಡಲು ಸರ್ಕಾರದ ಕಾರ್ಯಕ್ರಮಗಳು

27/01/2026 8:34 AM

BREAKING : ಬೆಂಗಳೂರಿನಲ್ಲಿ ಮತ್ತೊಂದು `ATM’ ವಾಹನ ದರೋಡೆ : `HITACHI’ ಕಂಪನಿ ಸಿಬ್ಬಂದಿಯಿಂದ 1.37 ಕೋಟಿ ರೂ. ಲೂಟಿ.!

27/01/2026 8:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರೇ ಗಮನಿಸಿ : ಹೀಗಿವೆ ಕೃಷಿಯನ್ನು ಲಾಭದಾಯಕ ಹುದ್ದೆಯನ್ನಾಗಿ ಮಾಡಲು ಸರ್ಕಾರದ ಕಾರ್ಯಕ್ರಮಗಳು
KARNATAKA

ರಾಜ್ಯದ ರೈತರೇ ಗಮನಿಸಿ : ಹೀಗಿವೆ ಕೃಷಿಯನ್ನು ಲಾಭದಾಯಕ ಹುದ್ದೆಯನ್ನಾಗಿ ಮಾಡಲು ಸರ್ಕಾರದ ಕಾರ್ಯಕ್ರಮಗಳು

By kannadanewsnow5727/01/2026 8:34 AM

ಬೆಂಗಳೂರು : ರಾಜ್ಯದ ರೈತರೇ ಗಮನಿಸಿ, ಕೃಷಿಯನ್ನು ಒಂದು ಲಾಭದಾಯಕ ಹುದ್ದೆಯನ್ನಾಗಿ ಮಾಡುವ ಸರ್ಕಾರದ ಕಾರ್ಯಕ್ರಮಗಳು ಹೀಗಿವೆ.

1. ಕೃಷಿ ಯಾಂತ್ರೀಕರಣ ಮತ್ತು ಕೃಷಿ ಸಂಸ್ಕರಣೆ : ಈ ಕಾರ್ಯಕ್ರಮದಡಿ ರೈತರು

ಸಕಾಲದಲ್ಲಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಹಾಗೂ ಕೃಷಿ ಕಾರ್ಮಿಕರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಕೃಷಿ ಯಂತ್ರೋಪಕರಣಗಳಿಗೆ ಸಹಾಯಧನ ಒದಗಿಸಲಾಗುವುದು (ಸಾಮಾನ್ಯ ವರ್ಗದ ರೈತರಿಗೆ ಶೇ. 50 ಮತ್ತು ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.90) ಸಣ್ಣ ಟ್ರ್ಯಾಕ್ಟರ್ ಖರೀದಿಗೆ ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಸಣ್ಣ ಟ್ರ್ಯಾಕ್ಟರುಗಳಿಗೆ ರೂ.3.00ಲಕ್ಷ ಸಹಾಯಧನ ನೀಡಲಾಗುವುದು. ಕೃಷಿ ಸಂಸ್ಕರಣೆ ಘಟಕಗಳು ಮತ್ತು ಟಾರ್ಪಾಲೀನ್ ಗಳಿಗೆ ಸಾಮಾನ್ಯ ವರ್ಗದ ರೈತರಿಗೆ ಶೇ. 50 ಮತ್ತು ಪರಿಶಿಷ್ಟ ಜಾತಿ/ ಪಂಗಡದ ರೈತರಿಗೆ ಶೇ.90ರ ಸಹಾಯಧನವನ್ನು ನೀಡಲಾಗುತ್ತಿದೆ.

2. ಕೃಷಿ ಯಂತ್ರಧಾರೆ: ರಾಜ್ಯದಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಸಕಾಲದಲ್ಲಿ ಕೃಷಿ

ಚಟುವಟಿಕೆಗಳನ್ನು ಕೈಗೊಳ್ಳಲು ಅನುವಾಗುವಂತೆ, ಕಡಿಮೆ ಬಾಡಿಗೆ ದರದಲ್ಲಿ ಭೂಮಿ ಸಿದ್ಧತೆಯಿಂದ ಕೊಯ್ದು ಮತ್ತು ಸಂಸ್ಕರಣೆಗೆ ಉಪಯುಕ್ತವಾಗುವ ವಿವಿಧ ಕೃಷಿ ಯಂತ್ರೋಪಕರಣಗಳನ್ನು ರೈತರಿಗೆ ಬಾಡಿಗೆ ಆಧಾರದ ಮೇಲೆ ಉಪಯೋಗಿಸಲು ಅವಕಾಶ ಕಲ್ಪಿಸಲು ಹೋಬಳಿ ಕೇಂದ್ರಗಳಲ್ಲಿ ಆಯ ಸಂಸ್ಥೆಗಳ ಸಹಯೋಗದೊಂದಿಗೆ ಕೃಷಿ ಯಂತ್ರಧಾರೆ (ಕೃಷಿ ಯಂತ್ರೋಪಕರಣ ಬಾಡಿಗೆ ಆಧಾರಿತ ಸೇವಾ) ಕೇಂದ್ರಗಳನ್ನು ತೆರೆಯಲಾಗಿರುತ್ತದೆ.

3. ಮುಖ್ಯಮಂತ್ರಿಯವರ ಸೂಕ್ಷ್ಮ ನೀರಾವರಿ ಯೋಜನೆ

ರಾಜ್ಯದಲ್ಲಿ ಲಭ್ಯವಿರುವ ನೀರನ್ನು ಸಮರ್ಥ ಮತ್ತು ಸಮರ್ಪಕ ಬಳಕೆಗೆ ಪ್ರೋತ್ಸಾಹಿಸಲು ಹಾಗೂ ಮಿತ ಬಳಕೆಯಿಂದ ಅಧಿಕ ಇಳುವರಿ ಪಡೆಯಲು ಹಾಗೂ ಸೂಕ್ಷ್ಮ (ಹನಿ/ತುಂತುರು) ನೀರಾವರಿ ಪದ್ಧತಿಯ ಅಳವಡಿಕೆಗೆ ಎಲ್ಲಾ ವರ್ಗದ ರೈತರಿಗೆ 2.0 ಹೆಕ್ಟೇರ್ ಪ್ರದೇಶದವರೆಗೆ ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ರೈತರಿಗೆ ಅವರು ಹೊಂದಿರುವ ಪ್ರದೇಶಕ್ಕೆ ಶೇ.90 ರಷ್ಟು ಹಾಗೂ ಇತರೆ ರೈತರಿಗೆ 2.0ಹೆಕ್ಟೇರಿಗಿಂತ ಮೇಲ್ಪಟ್ಟು 5.0ಹೆಕ್ಟೇರ್

4. ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ

ಅಸಂಘಟಿತ ವಲಯದಲ್ಲಿರುವ ಸೂಕ್ಷ್ಮ/ ಕಿರು ಆಹಾರ ಸಂಸ್ಕರಣ ಉದ್ದಿಮೆಗಳಿಗಳನ್ನು ಪ್ರೋತ್ಸಾಹಿಸಿ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸುವುದು ಮತ್ತು ಅವುಗಳನ್ನು ಸಂಘಟಿತ ವಲಯಕ್ಕೆ ತರುವುದು ಹಾಗೂ ರೈತ ಉತ್ಪಾದಕ ಸಂಸ್ಥೆಗಳು, ಸ್ವಸಹಾಯ ಸಂಘಗಳು ಹಾಗೂ ಉತ್ಪಾದಕ ಸಹಕಾರಿ ಸಂಘಗಳಿಗೆ ಅವುಗಳ ಸರಪಳಿಕೊಂಡಿಯೊಂದಿಗೆ ಉತ್ತೇಜನ ನೀಡುವುದು ಯೋಜನೆಯ ಉದ್ದೇಶವಾಗಿರುತ್ತದೆ. ಈ ಯೋಜನೆಯನ್ನು ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ಅಭಿವೃದ್ಧಿ ನಿಗಮ (KAPPEC) ಮೂಲಕ ಅನುಷ್ಠಾನಗೊಳಿಸಲಾಗುತ್ತದೆ. ಈ ಯೋಜನೆಯ ಪ್ರಮುಖ ಅಂಶವು ಒಂದು ಜಿಲ್ಲೆಗೆ ಒಂದು ಉತ್ಪನ್ನವನ್ನು (One District One Product) ಗುರುತಿಸಿ ಉತ್ತೇಜಿಸುವುದು ಆಗಿರುತ್ತದೆ. ಈ ಬೆಳೆ / ಉತ್ಪನ್ನವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿರುವ ಅತಿ ಸಣ್ಣ ಉದ್ದಿಮೆಗಳಿಗೆ ಸಾಲ ಆಧಾರಿತ ನೆರವು ನೀಡುವುದು, ಮೂಲಭೂತ ಸೌಕರ್ಯ ಗಳನ್ನು ಸೃಜಿಸುವುದು, ಬ್ಯಾಂಡಿಗ್ ಮತ್ತು ಮಾರುಕಟ್ಟೆಗೆ ನೆರವು ನೀಡುವುದು ಈ ಮುಂತಾದ ಕಾರ್ಯಕ್ರಮಗಳಿಗೆ ಯೋಜನೆಯಡಿಯಲ್ಲಿ ನೆರವು ನೀಡಲು ಅವಕಾಶ ಕಲ್ಪಿಸಲಾಗಿದೆ.

5. ಸೆಕಂಡರಿ ಕೃಷಿ ನಿರ್ದೇಶನಾಲಯ ಸ್ಥಾಪನೆ: ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಪ್ರಾಣಿ
ಜನ್ಯ ಉತ್ಪನ್ನಗಳ ಸಂಸ್ಕರಣೆ, ಗ್ರಾಮೀಣ ಮತ್ತು ಗುಡಿ ಕೈಗಾರಿಕೆಗಳ ಮೂಲಕ ರೈತರಿಗೆ ಹೆಚ್ಚಿನ ಆದಾಯ ತರಲು ಹಾಗೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಉದ್ಯೋಗ ಸೃಜನೆಗೆ:……. ಪೂರಕವಾಗಿ, ಕೃಷಿ ಉತ್ಪನ್ನಗಳಿಂದ “ಉಪ ಉತ್ಪನ್ನಗಳ ತಯಾರಿಕೆಗೆ ಕಾರ್ಯಕ್ರಮ ರೂಪಿಸಿ ಅನುಷ್ಠಾನಗೊಳಿಸಲು ಸುಸ್ಥಿರ ಹಾಗೂ ಕ್ರೋಡೀಕೃತ ವ್ಯವಸ್ಥೆಗಾಗಿ ಪ್ರತ್ಯೇಕ ರಾಜ್ಯ ಸೆಕಂಡಗಿ ಕೃಷಿ ನಿರ್ದೇಶನಾಲಯವನ್ನು ಅಧಿಸೂಚಿಸಲಾಗಿರುತ್ತದೆ. ಇದರಡಿ ಉತ್ಪಾದಿತ ಬೆಳೆಗಳ ಮೌಲ್ಯವರ್ಧನ, ಪರ್ಯಾಯ ಉದ್ಯಮಗಳಿಗೆ ಉತ್ತೇಜನ ಮತ್ತು ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಪಶುಸಂಗೋಪನಾ ತ್ಯಾಜ್ಯಗಳ ಬಳಕೆಗೆ ಪ್ರೋತ್ಸಾಹ ನೀಡಲಾಗುವುದು.

 

Farmers of the state take note: These are the government's programs to make agriculture a profitable occupation
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಮತ್ತೊಂದು `ATM’ ವಾಹನ ದರೋಡೆ : `HITACHI’ ಕಂಪನಿ ಸಿಬ್ಬಂದಿಯಿಂದ 1.37 ಕೋಟಿ ರೂ. ಲೂಟಿ.!

27/01/2026 8:10 AM1 Min Read

BIG NEWS : ಕರ್ನಾಟಕ ವಿಧಾನ ಮಂಡಲದಲ್ಲಿ `ಶಾಸಕರು-MLC’ಗಳು ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಮಾಹಿತಿ

27/01/2026 8:08 AM2 Mins Read

Fake Eggs : ಮಾರುಕಟ್ಟೆಗೆ ಬಂದಿದೆ ನಕಲಿ ಮೊಟ್ಟೆ, ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

27/01/2026 7:48 AM1 Min Read
Recent News

‘ಇರಾನ್ ಮೇಲಿನ ದಾಳಿಗೆ ವಾಯುಪ್ರದೇಶವನ್ನು ಬಳಸಲು ಅನುಮತಿಸುವುದಿಲ್ಲ’ : ಪುನರುಚ್ಚರಿಸಿದ ಯುಎಇ

27/01/2026 8:36 AM

ರಾಜ್ಯದ ರೈತರೇ ಗಮನಿಸಿ : ಹೀಗಿವೆ ಕೃಷಿಯನ್ನು ಲಾಭದಾಯಕ ಹುದ್ದೆಯನ್ನಾಗಿ ಮಾಡಲು ಸರ್ಕಾರದ ಕಾರ್ಯಕ್ರಮಗಳು

27/01/2026 8:34 AM

BREAKING : ಬೆಂಗಳೂರಿನಲ್ಲಿ ಮತ್ತೊಂದು `ATM’ ವಾಹನ ದರೋಡೆ : `HITACHI’ ಕಂಪನಿ ಸಿಬ್ಬಂದಿಯಿಂದ 1.37 ಕೋಟಿ ರೂ. ಲೂಟಿ.!

27/01/2026 8:10 AM

2050ಕ್ಕೆ ವಿಶ್ವದ ಅರ್ಧದಷ್ಟು ಜನರಿಗೆ ಬಿಸಿಲಿನ ಬೇಗೆ: ಭೀತಿ ಹುಟ್ಟಿಸುತ್ತಿದೆ ಆಕ್ಸ್‌ಫರ್ಡ್ ವರದಿ | Extreme Heat

27/01/2026 8:08 AM
State News
KARNATAKA

ರಾಜ್ಯದ ರೈತರೇ ಗಮನಿಸಿ : ಹೀಗಿವೆ ಕೃಷಿಯನ್ನು ಲಾಭದಾಯಕ ಹುದ್ದೆಯನ್ನಾಗಿ ಮಾಡಲು ಸರ್ಕಾರದ ಕಾರ್ಯಕ್ರಮಗಳು

By kannadanewsnow5727/01/2026 8:34 AM KARNATAKA 2 Mins Read

ಬೆಂಗಳೂರು : ರಾಜ್ಯದ ರೈತರೇ ಗಮನಿಸಿ, ಕೃಷಿಯನ್ನು ಒಂದು ಲಾಭದಾಯಕ ಹುದ್ದೆಯನ್ನಾಗಿ ಮಾಡುವ ಸರ್ಕಾರದ ಕಾರ್ಯಕ್ರಮಗಳು ಹೀಗಿವೆ. 1. ಕೃಷಿ…

BREAKING : ಬೆಂಗಳೂರಿನಲ್ಲಿ ಮತ್ತೊಂದು `ATM’ ವಾಹನ ದರೋಡೆ : `HITACHI’ ಕಂಪನಿ ಸಿಬ್ಬಂದಿಯಿಂದ 1.37 ಕೋಟಿ ರೂ. ಲೂಟಿ.!

27/01/2026 8:10 AM

BIG NEWS : ಕರ್ನಾಟಕ ವಿಧಾನ ಮಂಡಲದಲ್ಲಿ `ಶಾಸಕರು-MLC’ಗಳು ಪಾಲಿಸಬೇಕಾದ ನಿಯಮಗಳೇನು? ಇಲ್ಲಿದೆ ಮಾಹಿತಿ

27/01/2026 8:08 AM

Fake Eggs : ಮಾರುಕಟ್ಟೆಗೆ ಬಂದಿದೆ ನಕಲಿ ಮೊಟ್ಟೆ, ಅಸಲಿ ಯಾವುದು ಅಂತ ಜಸ್ಟ್ ಹೀಗೆ ಕಂಡುಹಿಡಿಯಿರಿ.!

27/01/2026 7:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.