ಧಾರವಾಡ : ಧಾರವಾಡದಲ್ಲಿ ಹುಚ್ಚುನಾಯಿ ಭೀಕರವಾಗಿ ದಾಳಿ ಮಾಡಿದ್ದು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 9 ಜನರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ ಶಿರಡಿ ನಗರ ಬಡಾವಣೆಯಲ್ಲಿ ಈ ಒಂದು ಘಟನೆ ಸಂಭವಿಸಿದೆ.
ಬಡಾವಣೆಯ ವಿವಿಧ ಕೆಲಸಕ್ಕೆ ಬರೋವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿದೆ ಕ್ಯಾರಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಈ ಒಂದು ಬಡಾವಣೆಯಲ್ಲಿ ಬೀದಿ ನಾಯಿ ದಾಳಿಗೆ ಜನರು ಹೊರಗಡೆ ಬರುವುದಕ್ಕೂ ಹೆದರುತ್ತಿದ್ದಾರೆ. ಹುಚ್ಚುನಾಯಿ ದಾಳಿಗೆ ಮಹಿಳೆಯರ ಕೈ ಕಾಲಿಗೆ ಕಚ್ಚಿದ್ದು, ಅಲ್ಲದೆ ಮಕ್ಕಳ ಮೇಲು ದಾಳಿ ಮಾಡಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳೀಯರು ಹುಚ್ಚುನಾಯಿಯನ್ನು ಹೊಡೆದು ಕೊಂದಿದ್ದಾರೆ.








