ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಇಂದಿನ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದರಿಂದ ಬೇಸರಗೊಂಡು ಸಚಿವ ಕೆಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲು ಮುಂದಾಗಿದ್ದರು ಎನ್ನುವ ಸುದ್ದಿ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಈ ವಿಚಾರವಾಗಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ ಪ್ರಸ್ತಾಪಿಸಿದರು ಸುನಿಲ್ ಕುಮಾರ್ ಇದೇ ವಿಚಾರವನ್ನು ಸ್ಪೀಕರ್ ಯುಟಿ ಖಾದರ್ ಅವರ ಗಮನಕ್ಕೆ ತಂದರು. ಇದಕ್ಕೆ ಸಚಿವ ಕೆಜಿ ಜಾರ್ಜ್ ಸ್ಪಷ್ಟನೆ ನೀಡಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾದ ನಂಬಿಕೆ ನಮಗೆ ಇದೆ ನಿನ್ನೆ ಸಹ CLP ಮೀಟಿಂಗ್ ಇತ್ತು. ನನಗೆ ಗೊತ್ತಿಲ್ಲದ ವಿಚಾರ ಕೇಳಿದರೆ ನಾನು ಏನು ಹೇಳಲಿ? ರಾಜೀನಾಮೆ ವಿಚಾರ ಸತ್ಯಕ್ಕೆ ದೂರವಾದ ಮಾತು. ಮಾಧ್ಯಮಗಳು ಇಂತಹ ಸುದ್ದಿಗಳನ್ನು ಅವರೇ ಸೃಷ್ಟಿ ಮಾಡುತ್ತಿದ್ದಾರೆ. ಆವರಿಗೆ ಬೆಳಿಗ್ಗೆ ಸಾಯಂಕಾಲ ಸುದ್ದಿ ಬೇಕಾಗಿದೆ ಈ ರೀತಿ ಸೃಷ್ಟಿ ಮಾಡುತ್ತಿದ್ದಾರೆ. ನಾನು ರಾಜೀನಾಮೆ ಕೊಡೋದು ಇಲ್ಲ ಆ ಪ್ರಶ್ನೆ ಉದ್ಭವಿಸಲ್ಲ ಎಂದರು.








