ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೋರ್ಟ್ ನಿರ್ಬಂಧ ವಿಧಿಸಿ ಆದೇಶಿಸಿದೆ.
ಬೆಂಗಳೂರಿನ 27ನೇ ಸಿಟಿ ಸಿವಿಲ್ ಕೋರ್ಟ್ ಈ ಮಧ್ಯಂತರ ಆದೇಶ ಹೊರಡಿಸಿದೆ. ಶಾಸಕ ಬಸನಗೌಡ ಯತ್ನಾಳ್ ಸುಳ್ಳು, ನಿಂದನೀಯ ಆರೋಪ ಮಾಡುತ್ತಿದ್ದಾರೆ ಎಂಬುದಾಗಿ ಸಚಿವ ಶಿವಾನಂದ ಪಾಟೀಲ್ ಪರ ವಕೀಲೆ ವಿಜೇತಾ ಆರ್ ನಾಯ್ಕ್ ವಾದ ಮಾಡಿದ್ದರು.
ಈ ಹಿನ್ನಲೆಯಲ್ಲಿ ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಕೋರ್ಟ್ ಮಧ್ಯಂತರ ನಿರ್ಬಂಧಕಾಜ್ಞೆ ನೀಡಿ ಆದೇಶಿಸಿದೆ.
ಬೆಂಗಳೂರಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಮರುಬಳಕೆ ಕುರಿತು ಆಯೋಜಿಸಿದ್ದ ಮೆಗಾ ಜಾಗೃತಿ ಮೇಳ ಯಶಸ್ವಿ








