Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

30/01/2026 6:17 AM

‘ಸರ್ಕಾರಿ ವೈದ್ಯ’ರು ಖಾಸಗಿ ಆಸ್ಪತ್ರೆಗಳಲ್ಲಿ ‘ಒಳರೋಗಿ’ಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಸಚಿವ ದಿನೇಶ್ ಗುಂಡೂರಾವ್

30/01/2026 6:15 AM

BIG NEWS : ರಾಜ್ಯದಲ್ಲಿ `ಗ್ರಾ.ಪಂ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಿ : `DC’ಗಳಿಗೆ ಸರ್ಕಾರ ಸೂಚನೆ.!

30/01/2026 6:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ಸರ್ಕಾರಿ ನೌಕರ’ರು ಪ್ರತಿ ತಿಂಗಳ ಮೊದಲ ಶನಿವಾರ ‘ಖಾದಿ ಉಡುಪು’ ಧರಿಸುವುದು ಕಡ್ಡಾಯ: ಸಿಎಸ್ ಆದೇಶ
KARNATAKA

ರಾಜ್ಯದ ‘ಸರ್ಕಾರಿ ನೌಕರ’ರು ಪ್ರತಿ ತಿಂಗಳ ಮೊದಲ ಶನಿವಾರ ‘ಖಾದಿ ಉಡುಪು’ ಧರಿಸುವುದು ಕಡ್ಡಾಯ: ಸಿಎಸ್ ಆದೇಶ

By kannadanewsnow0930/01/2026 6:08 AM

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಸ್ವಯಂ ಪ್ರೇರಣೆಯಿಂದ ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು. ಅಲ್ಲದೇ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚಿಸಿದ್ದಾರೆ.

ಈ ಕುರಿತಂತೆ ರಾಜ್ಯದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಸುತ್ತೋಲೆ ಹೊರಡಿಸಿರುವಂತ ಅವರು, “ಖಾದಿ” ಕೇವಲ ಒಂದು ಉಡುವು ಮಾತ್ರವಲ್ಲ, ಅದು ರಾಷ್ಟ್ರದ ಗೌರವ ಮತ್ತು ಹೆಮ್ಮೆಯ ಪ್ರತೀಕವಾಗಿದೆ. ಪ್ರಸ್ತುತ ಖಾದಿ ನೇಕಾರರು ನೂತನ ಶೈಲಿಯ ವಿನ್ಯಾಸದಲ್ಲಿ ಉಡುವುಗಳನ್ನು ತಯಾರಿಸಲು ಮುಂದಾಗಿದ್ದಾರೆ. ಅಲ್ಲದೇ, ಖಾದಿ ಉತ್ಪಾದನೆಯು ಗ್ರಾಮೀಣ ಆರ್ಥಿಕತೆಯ ಮೂಲ ಆಧಾರವಾಗಿದ್ದು, ರಾಜ್ಯದ ಸಾವಿರಾರು ಗ್ರಾಮೀಣ ನೂಲುಗಾರರು ಮತ್ತು ನೇಕಾರರಿಗೆ ನೇರ ಹಾಗೂ ಪರೋಕ್ಷವಾಗಿ ಜೀವನೋಪಾಯವನ್ನು ಒದಗಿಸುತ್ತಿದೆ ಎಂದಿದ್ದಾರೆ.

ಆದುದರಿಂದ, 77ನೇ ಗಣರಾಜ್ಯೋತ್ಸವದ ಶುಭಸಂದರ್ಭದಲ್ಲಿ, ಸಾರ್ವಜನಿಕ ಸೇವೆಯನ್ನು ದೇಶದ ಸ್ವಾತಂತ್ರ್ಯ ಹೋರಾಟದೊಂದಿಗೆ ಮರುಸಂಪರ್ಕಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅದರಂತೆ, ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ಮಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ ನೌಕರರುಗಳು “ಸ್ವಯಂ ಪ್ರೇರಣೆಯಿಂದ” ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, ಸ್ವಾತಂತ್ರ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ತಮ್ಮ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲು ಕೋರಿದ್ದಾರೆ.

ಈ ಕ್ರಮವು ಸರ್ಕಾರಿ ಅಧಿಕಾರಿ/ನೌಕರರುಗಳಲ್ಲಿ ಸ್ವದೇಶಿ ಉತ್ಪನ್ನಗಳ ಬಗ್ಗೆ ಗೌರವ, ಐಕ್ಯತೆ, ರಾಷ್ಟ್ರೀಯ ಭಾವನೆ, ಭಾರತೀಯತೆ, ಸ್ವಾಭಿಮಾನ ಮತ್ತು ಸಾಮಾಜಿಕ ಜವಾಬ್ದಾರಿಯ ಭಾವನೆಯನ್ನು ಬೆಳೆಸುವಲ್ಲಿ ಸಹಾಯಕವಾಗಲಿದೆ ಎಂದು ಭಾವಿಸಿದೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 176 ಖಾದಿ ಸಂಘ-ಸಂಸ್ಥೆಗಳ ಹೆಸರು, ವಿಳಾಸ ಹಾಗೂ ಉತ್ಪನ್ನಗಳ ವಿವರಗಳನ್ನು https://khadi.karnataka.gov.in ದಲ್ಲಿ ಪಡೆಯಬಹುದಾಗಿದೆ ಎಂದಿದ್ದಾರೆ.

Share. Facebook Twitter LinkedIn WhatsApp Email

Related Posts

ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

30/01/2026 6:17 AM1 Min Read

‘ಸರ್ಕಾರಿ ವೈದ್ಯ’ರು ಖಾಸಗಿ ಆಸ್ಪತ್ರೆಗಳಲ್ಲಿ ‘ಒಳರೋಗಿ’ಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಸಚಿವ ದಿನೇಶ್ ಗುಂಡೂರಾವ್

30/01/2026 6:15 AM2 Mins Read

BIG NEWS : ರಾಜ್ಯದಲ್ಲಿ `ಗ್ರಾ.ಪಂ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಿ : `DC’ಗಳಿಗೆ ಸರ್ಕಾರ ಸೂಚನೆ.!

30/01/2026 6:14 AM1 Min Read
Recent News

ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

30/01/2026 6:17 AM

‘ಸರ್ಕಾರಿ ವೈದ್ಯ’ರು ಖಾಸಗಿ ಆಸ್ಪತ್ರೆಗಳಲ್ಲಿ ‘ಒಳರೋಗಿ’ಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಸಚಿವ ದಿನೇಶ್ ಗುಂಡೂರಾವ್

30/01/2026 6:15 AM

BIG NEWS : ರಾಜ್ಯದಲ್ಲಿ `ಗ್ರಾ.ಪಂ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಿ : `DC’ಗಳಿಗೆ ಸರ್ಕಾರ ಸೂಚನೆ.!

30/01/2026 6:14 AM

ರಾಜ್ಯದ ‘ಸರ್ಕಾರಿ ನೌಕರ’ರು ಪ್ರತಿ ತಿಂಗಳ ಮೊದಲ ಶನಿವಾರ ‘ಖಾದಿ ಉಡುಪು’ ಧರಿಸುವುದು ಕಡ್ಡಾಯ: ಸಿಎಸ್ ಆದೇಶ

30/01/2026 6:08 AM
State News
KARNATAKA

ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

By kannadanewsnow0930/01/2026 6:17 AM KARNATAKA 1 Min Read

ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷಕ್ಕೆ 74 ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶ ಪರೀಕ್ಷೆ ಹಾಗೂ ದಾಖಲಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.…

‘ಸರ್ಕಾರಿ ವೈದ್ಯ’ರು ಖಾಸಗಿ ಆಸ್ಪತ್ರೆಗಳಲ್ಲಿ ‘ಒಳರೋಗಿ’ಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಸಚಿವ ದಿನೇಶ್ ಗುಂಡೂರಾವ್

30/01/2026 6:15 AM

BIG NEWS : ರಾಜ್ಯದಲ್ಲಿ `ಗ್ರಾ.ಪಂ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳಿ : `DC’ಗಳಿಗೆ ಸರ್ಕಾರ ಸೂಚನೆ.!

30/01/2026 6:14 AM

ರಾಜ್ಯದ ‘ಸರ್ಕಾರಿ ನೌಕರ’ರು ಪ್ರತಿ ತಿಂಗಳ ಮೊದಲ ಶನಿವಾರ ‘ಖಾದಿ ಉಡುಪು’ ಧರಿಸುವುದು ಕಡ್ಡಾಯ: ಸಿಎಸ್ ಆದೇಶ

30/01/2026 6:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.