Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ `ಕರ್ನಾಟಕಕ್ಕೆ ಚೊಂಬು’ : CM ಸಿದ್ದರಾಮಯ್ಯ ಕಿಡಿ

02/02/2026 6:22 AM

BIG NEWS : ಕುರುಬ ಸಮುದಾಯ ‘ST’ ಗೆ ಸೇರ್ಪಡೆ : CM ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

02/02/2026 6:15 AM

JOB ALERT : `SSLC’ ಪಾಸಾದವರಿಗೆ ಭರ್ಜರಿ ಸುದ್ದಿ : 52,000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

02/02/2026 6:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕುರುಬ ಸಮುದಾಯ ‘ST’ ಗೆ ಸೇರ್ಪಡೆ : CM ಸಿದ್ದರಾಮಯ್ಯ ಮಹತ್ವದ ಹೇಳಿಕೆ.!
KARNATAKA

BIG NEWS : ಕುರುಬ ಸಮುದಾಯ ‘ST’ ಗೆ ಸೇರ್ಪಡೆ : CM ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

By kannadanewsnow5702/02/2026 6:15 AM

ರಾಯಚೂರು : ಕುರುಬ ಸಮುದಾಯಕ್ಕೆ ಎಸ್ ಟಿ ಗೆ ಸೇರಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಗೊಳ್ಳಲಿದ್ದು, ರಾಜ್ಯ ಸರ್ಕಾರ ಈಗಾಗಲೇ ತನ್ನ ಶಿಫಾರಸ್ಸನ್ನು ಕೇಂದ್ರಕ್ಕೆ ಸಲ್ಲಿಸಿದೆ. ಜಾತಿಗಣತಿ ವರದಿ ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದೇವದುರ್ಗದ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದರು.
ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠ 1992 ರಲ್ಲಿ ಸ್ಥಾಪಿತವಾಗಿ, ಶ್ರೀ ತಾರಕಾನಂದ ಸ್ವಾಮೀಜಿಯವರು ಅದರ ಮೊದಲ ಗುರುಗಳಾಗಿದ್ದರು. ಕಲ್ಯಾಣ ಕರ್ನಾಟಕ, ಬೆಂಗಳೂರು, ಮೈಸೂರು ಮುಂಬಯಿ ಕರ್ನಾಟಕ ವಿಭಾಗಗಳಿದ್ದು, ಈ ಎಲ್ಲಾ ವಿಭಾಗಗಳಿಗೂ ಪ್ರತ್ಯೇಕ ಗುರುಗಳಿದ್ದು, ಈ ವಿಭಾಗಕ್ಕೆ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಗುರುಗಳಾಗಿದ್ದರು. ಗುರುಪೀಠದಲ್ಲಿ ಶಿಕ್ಷಣ, ಆಧ್ಯಾತ್ಮ, ಜಾತ್ಯಾತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದರು.

ಕಾಗಿನೆಲೆ ಗುರುಪೀಠ ಸ್ಥಾಪನೆಯ ಉದ್ದೇಶವೇ ಸಮಸಮಾಜ ನಿರ್ಮಾಣವಾಗಿದೆ. ಶ್ರೀಗಳ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗ ಹಾಗೂ ಇಡೀ ಸಮಾಜಕ್ಕೆ ಅವರ ಅಗಲಿಕೆಯ ನೋವು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಕನಕದಾಸರು ‘ಕುಲಕುಲವೆಂದು ಹೊಡೆದಾಡದಿರಿ’ ಎಂದಂತೆ, ಬುದ್ಧ ಬಸವಾದಿ ಶರಣರು ಜಾತಿವ್ಯವಸ್ಥೆಯನ್ನು ವಿರೋಧಿಸುತ್ತಾ ಬಂದಿದ್ದಾರೆ. ನಮ್ಮ ಸಮಾಜ ವಿವಿಧ ಜಾತಿ, ಧರ್ಮ, ವರ್ಗ, ಭಾಷೆಗಳಿಂದ ಕೂಡಿದೆ. ಮನುಜರೆಲ್ಲರೂ ಒಂದೇ ಕುಟುಂಬ ಎಂದು ಭಾವಿಸಬೇಕು. ಸಾಮಾಜಿಕ ಚಿಂತಕರಾದ ಲೋಹಿಯಾ ಅವರು ಮುಂದುವರಿದ ಜಾತಿಯವರು ಸಮಾಜವನ್ನು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಾರೆ ಎಂದಿದ್ದರು. ಸಮಾನ ಅವಕಾಶವಿರುವ ಸಮಸಮಾಜವನ್ನು ನಿರ್ಮಿಸುವುದು ಅವಶ್ಯಕ.

ಕೆಲವರು ಶಿಕ್ಷಣ ದೊರೆತರೂ ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬಂದಿಲ್ಲ. ಸ್ವಾಭಿಮಾನಿಗಳಾಗಿ ಬದುಕುವುದು ಮುಖ್ಯ. ವೈಚಾರಿಕ ಮತ್ತು ವೈಜ್ಞಾನಿಕ ಶಿಕ್ಷಣ ಪಡೆದ ಯುವಪೀಳಿಗೆ ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ಶೇ. 15 ರಷ್ಟಿದ್ದ ಶಿಕ್ಷಣ ಈಗ ಶೇ.76 ಆಗಿದ್ದರೂ, ನಮ್ಮಲ್ಲಿ ಜಾತಿವ್ಯವಸ್ಥೆ ನಶಿಸಿಲ್ಲ. ಜಡತ್ವದಿಂದ ಕೂಡಿದ ಸಮಾಜಕ್ಕೆ ಚಲನೆ ಬರಲು ಆರ್ಥಿಕ , ಸಾಮಾಜಿಕ ಸಮಾನತೆ ಬೇಕು. ಸಮಾಜದ ಮೌಢ್ಯಗಳನ್ನು ಅಳಿಸುವ ಕಾರ್ಯದಲ್ಲಿ ಸ್ವಾಮೀಜಿಯವರು ತೊಡಗಿದ್ದರು.

ಜನರ ಆರ್ಶೀವಾದದಿಂದ 8 ಬಾರಿ ಗೆದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಾಡಿನ ಎಲ್ಲ ಜನರ ಪ್ರೀತಿಯಿಂದಲೇ ರಾಜಕೀಯದಲ್ಲಿಯೂ ಇಂದಿಗೂ ಬದುಕಿದ್ದೇನೆ. ಈ ಸಮಾಜದ ಪ್ರೀತಿಗೆ ಬೆಲೆಕಟ್ಟಲಾಗದು. ಧ್ವನಿಯಿಲ್ಲದವರ ಪರವಾಗಿ ಹೋರಾಡುವುದೇ ನನ್ನ ಪ್ರಥಮ ಕೆಲಸ.

ಇಡೀ ರಾಜ್ಯಕ್ಕೆ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದೆ. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವಸತಿ ನಿಲಯ, ಯಾತ್ರಿನಿವಾಸ ಸೇರಿದಂತೆ ಹಲವು ಬೇಡಿಕೆಗಳಿಗೆ ಅನುದಾನ ನೀಡಲಾಗುವುದು. ಎಲ್ಲ ದಲಿತ ಹಾಗೂ ಹಿಂದುಳಿದ ವರ್ಗಗಳ ಮಠಗಳಿಗೆ ಬೆಂಗಳೂರಿನಲ್ಲಿ ಸುಮಾರು 50 ಎಕರೆ ಪ್ರದೇಶವನ್ನು ನೀಡಲು ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ರಾಜ್ಯದಲ್ಲಿ ಕನಕಗುರುಪೀಠ ಜಾತ್ಯಾತೀತ ಪೀಠವಾಗಿ ಕೆಲಸ ಮಾಡುತ್ತಿದ್ದು, ಗುರುಪೀಠದಲ್ಲಿ ಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಸ್ವಾಮೀಜಿಯವರು ಶಿಕ್ಷಣ, ಆಧ್ಯಾತ್ಮ ಮತ್ತು ಜಾತ್ಯತೀತ ಮನೋಭಾವಕ್ಕೆ ಹೆಚ್ಚು ಒತ್ತು ನೀಡಿದ್ದರು.

ಕುರುಬ ಸಮುದಾಯಕ್ಕೆ ಮೊದಲ ಬಾರಿಗೆ ಕಾಗಿನೆಲೆ ಗುರುಪೀಠ 1992 ರಲ್ಲಿ ಸ್ಥಾಪಿತವಾಗಿ, ಶ್ರೀ ತಾರಕಾನಂದ ಸ್ವಾಮೀಜಿಯವರು… pic.twitter.com/VYjAsXIEdP

— Siddaramaiah (@siddaramaiah) February 1, 2026

BIG NEWS : Kuruba community joins 'ST' : CM Siddaramaiah's important statement.!
Share. Facebook Twitter LinkedIn WhatsApp Email

Related Posts

BIG NEWS : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ `ಕರ್ನಾಟಕಕ್ಕೆ ಚೊಂಬು’ : CM ಸಿದ್ದರಾಮಯ್ಯ ಕಿಡಿ

02/02/2026 6:22 AM3 Mins Read

ರೈತರು, ಯುವಜನರ ಅಗತ್ಯ ಈಡೇರಿಸಲು ಬಜೆಟ್‌ ವಿಫಲ: ಸಚಿವ ಸಂತೋಷ್ ಲಾಡ್

01/02/2026 8:49 PM2 Mins Read

SIT ತನಿಖೆಯಿಂದ ಸಿ ಜೆ ರಾಯ್ ಆತ್ಮಹತ್ಯೆಗೆ ಕಾರಣ ತಿಳಿಯ ಬೇಕಿದೆ: ಸಚಿವ ದಿನೇಶ್ ಗುಂಡೂರಾವ್

01/02/2026 7:50 PM1 Min Read
Recent News

BIG NEWS : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ `ಕರ್ನಾಟಕಕ್ಕೆ ಚೊಂಬು’ : CM ಸಿದ್ದರಾಮಯ್ಯ ಕಿಡಿ

02/02/2026 6:22 AM

BIG NEWS : ಕುರುಬ ಸಮುದಾಯ ‘ST’ ಗೆ ಸೇರ್ಪಡೆ : CM ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

02/02/2026 6:15 AM

JOB ALERT : `SSLC’ ಪಾಸಾದವರಿಗೆ ಭರ್ಜರಿ ಸುದ್ದಿ : 52,000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

02/02/2026 6:11 AM

BREAKING: 2026ರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಪಾಕಿಸ್ತಾನ ಬಹಿಷ್ಕಾರ

01/02/2026 9:10 PM
State News
KARNATAKA

BIG NEWS : ಕೇಂದ್ರ ಸರ್ಕಾರದ ಬಜೆಟ್ ನಲ್ಲಿ `ಕರ್ನಾಟಕಕ್ಕೆ ಚೊಂಬು’ : CM ಸಿದ್ದರಾಮಯ್ಯ ಕಿಡಿ

By kannadanewsnow5702/02/2026 6:22 AM KARNATAKA 3 Mins Read

ಬೆಂಗಳೂರು : ‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಸಾಲಿನ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಏನೇನೂ…

BIG NEWS : ಕುರುಬ ಸಮುದಾಯ ‘ST’ ಗೆ ಸೇರ್ಪಡೆ : CM ಸಿದ್ದರಾಮಯ್ಯ ಮಹತ್ವದ ಹೇಳಿಕೆ.!

02/02/2026 6:15 AM

ರೈತರು, ಯುವಜನರ ಅಗತ್ಯ ಈಡೇರಿಸಲು ಬಜೆಟ್‌ ವಿಫಲ: ಸಚಿವ ಸಂತೋಷ್ ಲಾಡ್

01/02/2026 8:49 PM

SIT ತನಿಖೆಯಿಂದ ಸಿ ಜೆ ರಾಯ್ ಆತ್ಮಹತ್ಯೆಗೆ ಕಾರಣ ತಿಳಿಯ ಬೇಕಿದೆ: ಸಚಿವ ದಿನೇಶ್ ಗುಂಡೂರಾವ್

01/02/2026 7:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.