ಬೆಂಗಳೂರು: ರಾಜ್ಯದಲ್ಲಿ ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದಂತ ಶಿಷ್ಟಾಚಾರದ ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದೆ. ಆ ನಿಯಮಗಳ ಅನುಸಾರವಾಗಿಯೇ ಜನಪ್ರತಿನಿಧಿಗಳನ್ನು ಸರ್ಕಾರದ ಸಭೆ, ಸಮಾರಂಭಗಳಿಗೆ ಆಹ್ವಾನಿಸುವಂತೆ ಖಡಕ್ ಸೂಚನೆ ನೀಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಪರಿಷ್ಕೃತ ಅಧಿಸೂಚನೆ ಹೊರಡಿಸಿದ್ದು, ಸರ್ಕಾರದ ಸಭೆ ಮತ್ತು ಸಮಾರಂಭಗಳಿಗೆ ಜನಪ್ರತಿನಿಧಿಗಳನ್ನು ಆಹ್ವಾನಿಸುವ ಬಗ್ಗೆ ಅನುಸರಿಸಬೇಕಾದ ಶಿಷ್ಟಾಚಾರದ ಕುರಿತು ಸಮಗ್ರವಾದ ಸೂಚನೆಗಳನ್ನು ಈಗಾಗಲೇ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 34 ಹೆಚ್ ಪಿಎ 2018, ದಿನಾಂಕ:16.04.2019ರಲ್ಲಿ ಸುತ್ತೋಲೆಯನ್ನು ಹೊರಡಿಸಲಾಗಿರುತ್ತದೆ ಎಂದಿದ್ದಾರೆ.
ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳಲ್ಲಿ ಆಹಾನಿತರ ಹಾಜರಾಗುವಿಕೆಯನ್ನು ಖಚಿತಪಡಿಸಿಕೊಳ್ಳದೇ ಮುದ್ರಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಆಹ್ವಾನಿತರ ಸಂಖ್ಯೆಯು ಹೆಚ್ಚಾಗುತ್ತಿದ್ದು ಶಿಷ್ಟಾಚಾರದನ್ವಯ ಆಸನ ವ್ಯವಸ್ಥೆಯನ್ನು ಏರ್ಪಡಿಸುವಲ್ಲಿ ಗೊಂದಲವಾಗುತ್ತಿರುವುದರಿಂದ ಸರ್ಕಾರಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಹಾಗೂ ಸರ್ಕಾರಿ ಸಾರ್ವಜನಿಕ ಕಾರ್ಯಕ್ರಮಗಳನ್ನು ಸುಗಮವಾಗಿ ಮತ್ತು ಘನತೆಯಿಂದ ನಡೆಸಲು ಅನುವಾಗುವಂತೆ ದಿನಾಂಕ:16.04.2019ರ ಸುತ್ತೋಲೆಯನ್ನು ಸಮಗ್ರವಾಗಿ ಮಾರ್ಪಡಿಸಿ ದಿನಾಂಕ: 15.10.2025 ರಂದು ಸುತ್ತೋಲೆ ಸಂಖ್ಯೆ: ಸಿಆಸುಇ 39 ಹೆಚ್ಪಿಎ 2025 ಅನ್ನು ಹೊರಡಿಸಲಾಗಿದ್ದು, ಸದರಿ ಮಾರ್ಗಸೂಚಿಗಳನ್ನು ಭಾಗಶ: ಮಾರ್ಪಡಿಸಿ ಈ ಕೆಳಕಂಡಂತೆ ಅಧಿಸೂಚಿಸಲಾಗಿದೆ.
1. ಸರ್ಕಾರಿ ಕಾರ್ಯಕ್ರಮಗಳನ್ನು ಈ ಕೆಳಕಂಡಂತೆ ವರ್ಗೀಕರಿಸಿದೆ:-
(a) ರಾಜ್ಯ ಮಟ್ಟದ ಕಾರ್ಯಕ್ರಮಗಳು, ಈ ಕಾರ್ಯಕ್ರಮಗಳು ರಾಜ್ಯ ಸರ್ಕಾರದ ಒಂದು ಇಲಾಖೆಯು ಪ್ರತ್ಯೇಕವಾಗಿ ಅಥವಾ ಇನ್ನೊಂದು ಇಲಾಖೆಯ ಅಂಗಸಂಸ್ಥೆಗಳು / ಸ್ವಯಂ ಸೇವಾ ಹಾಗೂ ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಒಂದು ಜಿಲ್ಲೆಗಿಂತ ಹೆಚ್ಚಿನ ಜಿಲ್ಲೆಗಳಿಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ಆಯೋಜಿಸಲಾಗುತ್ತದೆ.
(b) ಇಲಾಖೆಗಳು ಆಯೋಜಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು:- ಕಾರ್ಯಕ್ರಮಗಳು ರಾಜ್ಯ ಸರ್ಕಾರದ ಒಂದು ಇಲಾಖೆಯು ಪ್ರತ್ಯೇಕವಾಗಿ ಅಥವಾ ಇನ್ನೊಂದು ಇಲಾಖೆ/ ಅಂಗಸಂಸ್ಥೆಗಳು / ಸ್ವಯಂ ಸೇವಾ / ಇತರೆ ಸಂಸ್ಥೆಗಳ ಸಹಯೋಗದೊಂದಿಗೆ ಒಂದುಜಿಲ್ಲೆಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಅಥವಾ ಜಿಲ್ಲೆಯ ಇತರ ಭಾಗದಲ್ಲಿ ಆಯೋಜಿಸಲಾಗುತ್ತದೆ.
(c) ಜಿಲ್ಲಾಡಳಿತವು ಆಯೋಜಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಗಳು:- ಈ ಕಾರ್ಯಕ್ರಮಗಳು ಜಿಲ್ಲಾಡಳಿತವು ಆಯಾ ಜಿಲ್ಲೆಗಳ ಯೋಜನೆಗಳಿಗೆ/ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಅಥವಾ ಜಿಲ್ಲೆಯ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ.
(d) ತಾಲ್ಲೂಕು ಮಟ್ಟದ ಕಾರ್ಯಕ್ರಮಗಳು:- ಈ ಕಾರ್ಯಕ್ರಮಗಳು ಜಿಲ್ಲಾಡಳಿತ ಅಥವಾ ತಾಲ್ಲೂಕು ಆಡಳಿತವು ಒಂದು ತಾಲ್ಲೂಕಿಗೆ ಸಂಬಂಧಿಸಿದ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ತಾಲ್ಲೂಕಿನ ಕೇಂದ್ರ ಸ್ಥಾನದಲ್ಲಿ ಅಥವಾ ತಾಲ್ಲೂಕಿನ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ.
(e) ರಾಜ್ಯದಲ್ಲಿ ಆಯೋಜಿಸುವ ಕೇಂದ್ರ ಪುರಸ್ಕೃತ/ ಪ್ರಾಯೋಜಿತ/ ಬೆಂಬಲಿತ ಕಾರ್ಯಕ್ರಮಗಳು, ಈ ಕಾರ್ಯಕ್ರಮಗಳು ರಾಜ್ಯಕ್ಕೆ ಸಂಬಂಧಿಸಿದ ಕೇಂದ್ರ ಪುರಸ್ಕೃತ/ ಪ್ರಾಯೋಜಿತ/ ಬೆಂಬಲಿತ ಯೋಜನೆಗಳು ಅಥವಾ ಕಾರ್ಯಕ್ರಮಗಳ ಕುರಿತು ರಾಜ್ಯದ ಸಹಯೋಗದೊಂದಿಗೆ ರಾಜ್ಯದ ಕೇಂದ್ರ ಸ್ಥಾನ ಅಥವಾ ಇತರೆ ಭಾಗದಲ್ಲಿ ಆಯೋಜಿಸಲಾಗುತ್ತದೆ. 2. ರಾಜ್ಯ ಮಟ್ಟದಲ್ಲಿ ಆಯೋಜಿಸುವ ಕಾರ್ಯಕ್ರಮಗಳ ಮಾರ್ಗಸೂಚಿಗಳು:-
(a) ಉದ್ಘಾಟನೆ. ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ಈ ಕೆಳಕಂಡ ಗಣ್ಯರು ಉದ್ಘಾಟಿಸುತ್ತಾರೆ:-
ಮಾನ್ಯ ಮುಖ್ಯ ಮಂತ್ರಿಗಳು / ಮಾನ್ಯ ಉಪ ಮುಖ್ಯ ಮಂತ್ರಿಗಳು / ಸಂಬಂಧಪಟ್ಟ ಇಲಾಖಾ ಸಚಿವರು/ಇಲಾಖಾ ಸಚಿವರು ಸೂಚಿಸುವ ಯಾವುದೇ ಗಣ್ಯರು.
(b) ಅಧ್ಯಕ್ಷತೆ:- ಕಾರ್ಯಕ್ರಮ ನಡೆಯುವ ಸ್ಥಳದ ಸ್ಥಳೀಯ ಶಾಸಕರು ಅಧ್ಯಕ್ಷತೆ ವಹಿಸುತ್ತಾರೆ.
(c) ಮುಖ್ಯ ಅತಿಥಿಗಳು/ಗೌರವಾನ್ವಿತ ಅತಿಥಿಗಳು:-
(i) ಇಲಾಖಾ ಸಚಿವರು ಆಹ್ವಾನ ಪತ್ರಿಕೆ ಹಾಗೂ ವೇದಿಕೆಯ ಮೇಲೆ ಆಸೀನರಾಗುವ ಗಣ್ಯರ ಹೆಸರುಗಳನ್ನು ಅನುಬಂಧದಲ್ಲಿರುವ ಪಟ್ಟಿಯಿಂದ ಒಂಬತ್ತು ಸಂಖ್ಯೆಗಳಿಗೆ ಮೀರದಂತೆ ಹಾಗೂ ಅನಿವಾರ್ಯ ಸಂದರ್ಭದಲ್ಲಿ ಗಣ್ಯರ ಸಂಖ್ಯೆಯನ್ನು 13 ಕ್ಕೆ ಮೀರದಂತೆ ಆಯ್ಕೆ ಮಾಡುವುದು.
ಹೀಗಿದೆ ಸರ್ಕಾರಿ ಸಭೆ, ಸಮಾರಂಭಗಳಲ್ಲಿ ಜನಪ್ರತಿನಿಧಿ ಆಹ್ವಾನದ ಪಾಲಿಸಬೇಕಾದಂತ ಶಿಷ್ಟಾಚಾರ ನಿಯಮಗಳು





BIG Alert: ನೀವು ರೀಲ್ಸ್ ಮಾಡ್ತೀರಾ? ಹಾಗಾದ್ರೆ ಅದಕ್ಕೂ ಮುನ್ನಾ ಈ ಸುದ್ದಿ ಓದಿ!








