ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ಸಿಬಿ ಮ್ಯಾಚ್ ನಡೆಸುವ ವಿಚಾರವಾಗಿ ಇಂದು ಕೆ ಎಸ್ ಇ ಎ ಹಾಗೂ ಆರ್ಸಿಬಿ ನಿಯೋಗ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು. KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ ಹಾಗೂ RCB ಯ ರಾಜೇಶ್ ಮೆನನ್ ಭೇಟಿ ಮಾಡಿ ಚರ್ಚಿಸಿದರು.
ಇನ್ನು ಇದೇ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾತನಾಡಿದ್ದು ನ್ಯಾ.ಕುನ್ಹಾ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೇವೆ. ಈ ಕುರಿತು ಸಮಿತಿ ಸಹ ರಚನೆಯಾಗಿತ್ತು. ಸಮಿತಿಯು ಕೂಡ ಒಂದಷ್ಟು ಶಿಫಾರಸು ಮಾಡಿದೆ. ಐಪಿಎಲ್ ಕೂಡ ಬರುತಿದೆ ಬುಧವಾರ ನಾನು ಮತ್ತೆ ಸಭೆ ಕರೆದಿದ್ದೇನೆ ಎಂದರು.
ಸರ್ಕಾರದಿಂದ ಏನು ಸೂಚನೆ ಕೊಡಬೇಕು ಆ ಕುರಿತು ಪರಿಶೀಲಿಸುತ್ತೇವೆ. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಕೂಡ ಈ ವಿಚಾರವಾಗಿ ಚರ್ಚೆ ಮಾಡಬೇಕಾಗಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಮ್ಯಾಚ್ ಆಗಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಹಾಗಾಗಿ ಎಲ್ಲವನ್ನು ನೋಡಿ ಒಂದು ತೀರ್ಮಾನ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು.








