ಬೆಂಗಳೂರು : ರೌಡಿ ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜುಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದೆ.
ರೌಡಿ ಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ನಿರಕಾರಣೆ ಮಾಡಿದೆ. ನ್ಯಾಯಾಧೀಶರಾದ ಸುನೀಲ್ ದತ್ತು ಅವರಿದ್ದ ನ್ಯಾಯಪೀಠವು ಈ ಆದೇಶವನ್ನು ಹೊರಡಿಸಿದೆ. ಇದರೊಂದಿಗೆ ಮತ್ತೆ . ಬಿಕ್ಲು ಶಿವು ಕೊಲೆಯಲ್ಲಿ ಅವರಿಗೆ ಬಂಧನದ ಭೀತಿ ಎದರು ಆಗಿದೆ.
ಪ್ರಕರಣ ಹಿನ್ನೆಲೆ
ಬೆಂಗಳೂರಿನ ಹಲಸೂರು ಕೆರೆ ಸಮೀಪದ ಮನೆಯೊಂದರ ಎದುರು 2025ರ ಜುಲೈನಲ್ಲಿ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಆರೋಪದ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. . ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಆರೋಪಿಸಿ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಸಿಐಡಿ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.








